ತಂದೆ-ತಾಯಿ ಋಣ ತೀರಿಸುವುದು ಪ್ರತಿಯೊಬ್ಬರ ಕರ್ತವ್ಯ


Team Udayavani, Feb 5, 2018, 3:17 PM IST

vij-5.jpg

ಸಿಂದಗಿ: ಜಗತ್ತಿನಲ್ಲಿ ಮಾನವನಿಗಿರುವ ಎಲ್ಲ ಋಣಗಳ ಪೈಕಿ ತಂದೆ-ತಾಯಿ ಋಣವು ಅತ್ಯಂತ ಮಹತ್ವದ್ದಾಗಿದೆ ಎಂದು ಸಿಂದಗಿ ಸಿ.ಎಂ. ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕ, ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಬಿ.ಎನ್‌. ಪಾಟೀಲ ಇಬ್ರಾಹಿಂಪುರ ಹೇಳಿದರು.

ತಾಲೂಕಿನ ಬೋರಗಿ-ಪುರದಾಳ ಗ್ರಾಮದ ವಿಶ್ವರಾಧ್ಯಮಠದಲ್ಲಿ ತಪೋರತ್ನಂ ಮಹಾಲಿಂಗೇಶ್ವರ ಮಹಾಸ್ವಾಮಿಗಳ 50ನೇ ಜನ್ಮದಿನ ಸವಿ ನೆನಪಿಗಾಗಿ ಹಮ್ಮಿಕೊಂಡಿದ್ದ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ತಾಯಿಯ ಋಣ ವಿಷಯ ಕುರಿತು ಉಪನ್ಯಾಸ ನೀಡಿದರು. 

ತಾಯಿಯನ್ನು ದೇವರೆಂದು ತಿಳಿದವರಿಗೆ ಸಕಲ ಕಾರ್ಯಗಳು ಸಿದ್ಧಿಸುತ್ತವೆ. ಆದ್ದರಿಂದ ತಾಯಿಯ ಪ್ರೇಮವನ್ನು ಸಂಪಾದಿಸಿ ಜೀವನದಲ್ಲಿ ಸುಖ ಕಂಡುಕೊಳ್ಳಬೇಕು. ಜಗತ್ತಿನ ಮೊದಲನೇ ದೇವತೆ ತಾಯಿ. ಮಗುವನ್ನು ಹೆತ್ತು-ಹೊತ್ತು, ಲಾಲಿಸಿ-ಪಾಲಿಸಿ, ನಡೆ-ನುಡಿ  ಕಲಿಸಿ ನಮ್ಮೇಲ್ಲರಿಗೆ ವ್ಯವಾಹರಿಕ ಸಂಸ್ಕಾರ ನೀಡಿ ಬೆಳೆಸಿದ ಜನನಿ ಎಂದರು.

ಪ್ರಸ್ತುತ ದಿನದಲ್ಲಿ ತಾಯಿ- ಮಗುವಿನ ಮಾನಸಿಕ ಸಂಬಂಧ ಶಿಥಿಲಗೊಳ್ಳುತ್ತಿರುವುದು ವಿಷಾದಕರ ಸಂಗತಿ. ಹೆತ್ತವರ ಮತ್ತು ಮಕ್ಕಳ ನಡುವಿನ ಸಂಬಂಧ ಇಲ್ಲದಿದ್ದಲ್ಲಿ ನಮ್ಮ ಜೀವನ ಯಾಂತ್ರಿಕವಾಗುತ್ತಿದೆ. ಇಂದು ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾವಂತ ಕುಂಟುಂಬಗಳಲ್ಲಿ ವೃದ್ಧ ತಂದೆ-ತಾಯಿ ಏಕಾಂತ ಜೀವನ ನಡೆಸುತ್ತಿದ್ದಾರೆ. ಇಂದು ಹೆತ್ತವರ ಮತ್ತು ಮಕ್ಕಳ ಮಾನಸಿಕ ಸಂಬಂಧ ಹೆಚ್ಚಾಗಬೇಕು. ಆಗ ಜೀವನ ಸ್ವರ್ಗ ಸುಖವಾಗುವುದು ಎಂದರು.

ಸಮ್ಮುಖ ವಹಿಸಿದ್ದ ಕಲಬುರಗಿ ಜಿಲ್ಲೆಯ, ಅಫಜಲಪುರ ತಾಲೂಕಿನ ಬ್ಯಾಡಗಿಹಾಳ ಮಠದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ಮಹಿಳೆಯರು ತಾವು ಮಾಡುವ ಕಾಯಕ ಸತ್ಯ ಶುದ್ಧತೆಯಿಂದ ಕೋಡಿರಬೇಕು. ದುಡ್ಡಿನ ಆಸೆಗಾಗಿ ಎಂತೆಂತಹುದೋ ಕೆಲಸ ಮಾಡದರೇ ಪ್ರಯೋಜನವಿಲ್ಲ. ಕಾಯಕದಿಂದ ನಮಗೆ ಒಳಿತಾಗುವುದರ ಜೊತೆಗೆ ಸಮಾಜಕ್ಕೂ ಒಳಿತಾಗಬೇಕು. ಆದ್ದರಿಂದ ಸಾಮಾನ್ಯ ಮಹಿಳೆಯರು ಕೂಡಾ ಶರಣರ ಮಾರ್ಗಕ್ಕೆ ಬರಬೇಕು ಎಂದರು. 

ತಪೋರತ್ನಂ ಮಹಾಲಿಂಗೇಶ್ವರ ಮಹಾಸ್ವಾಮಿಗಳ 50ನೇ ಜನ್ಮದಿನ ಸವಿನೆನಪಿಗಾಗಿ 50 ದಿನ ವಿವಿಧ ಕಾರ್ಯಕ್ರಮ
ಜರಗುತ್ತವೆ. ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು ಆಶೀರ್ವಚನ ನೀಡುವರು. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶ್ವರಾಧ್ಯರ ಹಾಗೂ ಭೀಮಾಶಂಕರ ಮಹಾರಾಜರ ಕೃಪೆಗೆ ಪಾತ್ರರಾಗಬೇಕು ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ತಪೋರತ್ನಂ ಮಹಾಲಿಂಗೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಮನುಷ್ಯ ತನ್ನ ಮರಣಕ್ಕಿಂತ ಮುಂಚೆ ಈ ಲೋಕದಲ್ಲಿ ಏನನ್ನು ಬಿತ್ತುತ್ತಾನೋ ಅವನ ಮರಣದ ನಂತರ ಪರಲೋಕ ಜೀವನದಲ್ಲಿ ಅದರ ಬೆಳೆ ಕೊಯ್ಯುವನು. ಮನುಷ್ಯರ ಬಗ್ಗೆ ಕರಣುವಿಲ್ಲದವನ ಮೇಲೆ ದೇವರು ಕೂಡಾ ಕರುಣೆ ತೋರುವುದಿಲ್ಲ. ಈ
ಜಗತ್ತಿನಲ್ಲಿ ಮಾನವನಿಗಿರುವ ಎಲ್ಲ ಋಣಗಳ ಪೈಕಿ ತಂದೆ-ತಾಯಿ ಋಣವು ಅತ್ಯಂತ ಮಹತ್ವದ್ದಾಗಿದೆ. ವೃದ್ಧ ತಂದೆ-ತಾಯಿಗಳನ್ನು ನಾವು ನಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು ಎಂದರು. 

ಮಕ್ಕಳ ಸಾಹಿತಿ ಶಿವಕುಮಾರ ಶಿವಸಿಂಪಿಗೇರ ಮಾತನಾಡಿದರು. ಸಂಗೀತಗಾರರಾದ ತಿಪ್ಪಣ್ಣ ಹೂಗಾರ, ಈರಣ್ಣ ಬಡಿಗೇರ ಸಂಗೀತ ಸೇವೆ ಸಲ್ಲಿಸಿದರು. ಕೆಂಚಪ್ಪ ಸಾಹುಕಾರ, ಡಾ| ನಾನಾಗೌಡ ಪುರದಾಳ, ಡಾ|ಶಿವು ಚಾವರ, ಮುದಕಪ್ಪ ಕೊಟಾರಗಸ್ತಿ, ಸಿದ್ದಯ್ಯಸ್ವಾಮಿ ಪುರದಾಳ, ಚಿದಾನಂದ ಡಂಬಳ, ಹನುಮಂತ ಬಿದರಕುಂದಿ, ಈರನಗೌಡ ಪಾಟೀಲ, ಶಿವಲಿಂಗ ಡಂಬಳ, ವಿಶ್ವದಳದ ಕಾರ್ಯಕರ್ತರು ಹಾಗೂ ಭಕ್ತರು ಇದ್ದರು. 

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.