ರಾಜ್ಯದ ಪ್ರತಿಯೊಬ್ಬರಿಗೂ ಸಿಗಲಿ ಸೂರು


Team Udayavani, Feb 15, 2019, 11:09 AM IST

vij-2.jpg

ಬಸವನಬಾಗೇವಾಡಿ: ರಾಜ್ಯದಲ್ಲಿ ಇರುವ ಪ್ರತಿಯೊಬ್ಬ ಮನುಷ್ಯನಿಗೂ ಸೂರು ಸಿಗಬೇಕು. ಆತನಿಗೆ ರಾಜ್ಯ ಸರಕಾರದ ಪ್ರತಿಯೊಂದು ಯೋಜನೆ ತಲುಪಬೇಕೆಂಬ ಮಹಾದಾಸೆಯೊಂದಿಗೆ ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಲಾಗಿದೆ ಎಂದು ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ ಹೇಳಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಕರಿಹಳ್ಳ ಹಾಗೂ ಕೋಡಿಬಾಹಳ್ಳ ತಾಂಡಾಗಳಲ್ಲಿ ಗ್ರಾಮಸಭೆ ನಡೆಸಿ ನಂತರ ಮಾತನಾಡಿದ ಅವರು, ಲಂಬಾಣಿ ಜನಾಂಗದ ಜನರು ಹಿಂದಿನ ಕಾಲದಿಂದಲೂ ಕೂಡಾ ಊರ ಹೊರಗಡೆ ಇರುವ ಬಯಲು ಪ್ರದೇಶಗಳಲ್ಲಿ ವಾಸಿಸುತ್ತಿದ್ದರು. ಅವರಿಗೆ ಸರಕಾರದ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿದ್ದಿಲ್ಲ. ಅದಕ್ಕಾಗಿ ಆ ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಬೇಕು ಎಂದು ಸರಕಾರ ಯೋಜನೆ ರೂಪಿಸದೆ ಎಂದರು.

ಈ ಹಿಂದೆ ನೀವು ವಾಸ ಮಾಡುತ್ತಿರುವ ಮನೆಗಳು ಬೇರೆ ಯಾರೋ ಜಾಗದಲ್ಲಿ ತಮ್ಮ ಮನೆಗಳನ್ನು ನಿರ್ಮಿಸಿ ಜೀವನ ನಡೆಸುತ್ತಿದ್ದೀರಿ. ಆದರೆ ಇನ್ನು ಮುಂದೆ ನೀವು ವಾಸಿಸುವ ಮನೆಗಳು ನಿಮ್ಮದಾಗುವ ಕಾಲ ಸನ್ನಿಹಿತವಾಗಿವೆ. ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ವಾಸಿಸುವನೇ ಮನೆಯ ಒಡೆಯ ಎಂಬ ಯೋಜನೆ ಅಡಿಯಲ್ಲಿ ತಾವು ವಾಸಿಸುವ ಮನೆಗಳಿಗೆ ಹಕ್ಕು ಪತ್ರ ನೀಡಿ ಈ ತಾಂಡಾಗಳನ್ನು ಇನ್ನೂ ಮುಂದೆ ತಾಂಡಾ ಎಂದು ಕರೆಯದೆ ಅವುಗಳಿಗೆ ಕಲ್ಯಾಣ ನಗರ ಎಂದು ಹೆಸರು ನಾಮಕರಣ ಮಾಡಿ ಅಲ್ಲಿ ವಾಸಿಸುವ ಜನರಿಗೆ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್‌, ರಸ್ತೆ, ಸಾರಿಗೆ, ಶಾಲೆ, ಅಂಗನವಾಡಿ, ಆಸ್ಪತ್ರೆ ಸೇರಿದಂತೆ ಅನೇಕ ಮೂಲ ಸೌಲಭ್ಯಗಳು ಇನ್ನೂ ಮುಂದೆ ಪಡೆಯಲು ಸಾಧ್ಯ ಎಂದು ಹೇಳಿದರು.

ಬಂಜಾರಾ ಸಮಾಜದ ನಾಯಕ ಹರಿಲಾಲ ನಾಯಕ ಮಾತನಾಡಿ, ರಾಜ್ಯದಲ್ಲೇ ಈ ಯೋಜನೆ ಬಂದ ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಶಿವಾನಂದ ಪಾಟೀಲ ಅವರ ಕಾರ್ಯವೈಖರಿಯಿಂದ ಇಂದು ಜಾಲಿಹಳ್ಳ ಹಾಗೂ ಕರಿಹಳ್ಳ, ಕೋಡಿಬಾಹಳ್ಳ ತಾಂಡಾಗಳ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಮೂಲಕ ಇಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು. 

ಗುರಪ್ಪ ಲಮಾಣಿ, ಮುಕ್ತಸಾಬ ರಗಟಿ, ಗೇಮು ರಾಠೊಡ, ನೇಮು ರಾಠೊಡ, ಸುಶೀಲ ನಾಯಕ, ರಾಜು ಲಮಾಣಿ, ಮತ್ತಪ್ಪ ಕಾರಬಾರಿ, ನೀಲು ನಾಯಕ, ರವಿ ರಾಠೊಡ, ಸುರೇಶ ನಾಯಕ, ಕೃಷ್ಣಾ ನಾಯಕ, ಎ.ಎ. ಕಲಾದಗಿ. ಎ.ಎಚ್‌. ಮಣಿಕಬಾಯಿ, ಪಿ.ಎಸ್‌. ಹುಡೇದ ಸೇರಿದಂತೆ ಅನೇಕರು ಭಾಗವಹಿಸಿದ್ದರು.  

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.