ಸಮಗ್ರ ಕೃಷಿಯಲ್ಲಿನ ಅನುಭಾವ ನಮ್ಮ ಅಸ್ತಿತ್ವಕ್ಕೆ ಮೂಲಾಧಾರ

ತಮ್ಮ ಕ್ಷೇತ್ರದಲ್ಲಿ ಅಳವಡಿಸಿದಾಗ ಮಾತ್ರ ಅಧ್ಯಯನ ಪ್ರವಾಸದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.

Team Udayavani, Feb 18, 2021, 6:09 PM IST

ಸಮಗ್ರ ಕೃಷಿಯಲ್ಲಿನ ಅನುಭಾವ ನಮ್ಮ ಅಸ್ತಿತ್ವಕ್ಕೆ ಮೂಲಾಧಾರ

ಮುದ್ದೇಬಿಹಾಳ: ಬದುಕು ಸುಂದರಗೊಳಿಸುವ ಸಮಗ್ರ ಕೃಷಿಯಲ್ಲಿನ ಅನುಭಾವ ನಮ್ಮ ಅಸ್ತಿತ್ವಕ್ಕೆ ಮೂಲಾಧಾರ ಎನ್ನುವ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ನಿಭಾಯಿಸಬೇಕು ಎಂದು ಶ್ರೇಷ್ಠ ರೈತ ಮಹಿಳೆ ಪ್ರಶಸ್ತಿ ಪುರಸ್ಕೃತ ನ್ಯಾಯವಾದಿ ರಶ್ಮಿ ಕೊಪ್ಪ ಹೇಳಿದರು.

ಬಸರಕೋಡ ಗ್ರಾಮದಲ್ಲಿ ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠ, ಮನೋಹರ ಮುಕ್ಕಣ್ಣಪ್ಪ ಕೋರಿ ರೈತ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಮುದ್ದೇಬಿಹಾಳದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತ ಆಶ್ರಯದಲ್ಲಿ ಜ್ಞಾನವಿಕಾಸ ಅಧ್ಯಯನ ಪ್ರವಾಸ ನಿಮಿತ್ತ ಏರ್ಪಡಿಸಿದ್ದ ಸಮಗ್ರ ಕೃಷಿ-ಸುಸ್ಥಿರ ಕುಟುಂಬ ವಿಷಯಾಧಾರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರಮ ರಹಿತ ಒಕ್ಕಲುತನದ ಬಗೆಗಿನ ಒಲವು ಮತ್ತು ಆಸಕ್ತಿಗಳು ಹೆಚ್ಚಿದಂತೆ ಕೌಟುಂಬಿಕ ತಾಪತ್ರಯಗಳೂ ಹೆಚ್ಚಾಗಿ ರೈತ ಸಾಮಾಜಿಕ ಸಮಸ್ಯೆಯಾಗಿ ರೂಪಗೊಳ್ಳುತ್ತಿರುವುದು ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ ಬೆಳವಣಿಗೆಯಾಗಿದೆ. ಸ್ವಾವಲಂಬಿಯಾಗಿದ್ದ ರೈತ ಎಂದೆಂದಿಗೂ ಹಾಗೆಯೇ ಇರಬೇಕು ಎನ್ನುವ ಆಶಯ ಈಡೇರಲು ಸಮಗ್ರ ಕೃಷಿಯೊಂದೇ ಪರಿಹಾರವಾಗಿದೆ. ಆ ಬಗ್ಗೆ ಸರ್ಕಾರ ಕಟ್ಟಕಡೆಯ ರೈತನಿಗೂ ಸೌಲಭ್ಯಗಳು ದೊರೆತು ಕೃಷಿಯಲ್ಲಿ ಸುಸ್ಥಿರತೆ ಕಾಣಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಭಾರತೀಯ ಕೃಷಿ ವಿಜ್ಞಾನ ಪರಿಷತ್‌ ಅಧ್ಯಕ್ಷ ಗುರುಪಾದಪ್ಪ ಯಡವಣ್ಣವರ ಮಾತನಾಡಿ, ಸರಳ ಜೀವನ ಉನ್ನತ ವಿಚಾರ ಎಂಬಂತಿದ್ದ ರೈತನ ಬದುಕು ಆಧುನಿಕ ಹೊಡೆತಕ್ಕೆ ಸಿಲುಕಿ ನಲಗುವಂತಾಗಿದೆ. ಸಮಾಜದ ಸಹಜ ಆಕರ್ಷಣೆಗೆ ಮಾರು ಹೋಗುತ್ತಿರುವ ರೈತ ದನ, ಕೋಳಿ, ಕುರಿ ಸಾಕಾಣಿಕೆಯಿಂದ ವಿಮುಖನಾಗುತ್ತಿದ್ದಾನೆ. ಇದರಿಂದಾಗಿ ಆತ ಅಸಹಜ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾನೆ. ಸಮಸ್ಯೆಗಳ ಒಳಸುಳಿಯಲ್ಲಿ ಬೇಯುತ್ತಿರುವ ರೈತ ಕೂಡಲೇ ಎಚ್ಚೆತ್ತುಕೊಂಡು ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಳ್ಳುವುದರಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದರು.

ಕಾರ್ಯಕ್ರಮ ಸಂಘಟಕಿ ಜ್ಞಾನವಿಕಾಸ ಯೋಜನೆಯ ಸಂಚಾಲಕಿ ಸುಧಾ ಮಾತನಾಡಿ, ಈಗಿನ ಕಾಲಘಟ್ಟದಲ್ಲಿ ಕೃಷಿಯ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಕೃಷಿ ಅಧ್ಯಯನ ಪ್ರವಾಸ ಸಹಕಾರಿಯಾಗಿದೆ. ವಿಶೇಷವಾಗಿ ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠದಲ್ಲಿನ ಅನುಭವ ರೈತ ಮಹಿಳೆಯರ ಆತ್ಮಸ್ಥೈರ್ಯ ಹೆಚ್ಚಿಸಿ ಸುಸ್ಥಿರ ಬದುಕಿಗೆ ಅನುಕೂಲ ಮಾಡಿಕೊಡುವಂತಿದೆ. ಇಲ್ಲಿ ಸಿಕ್ಕ ಸಮಗ್ರ ಕೃಷಿಯ ಅನುಭವ ಸಾರವನ್ನು ತಮ್ಮ ಕ್ಷೇತ್ರದಲ್ಲಿ
ಅಳವಡಿಸಿದಾಗ ಮಾತ್ರ ಅಧ್ಯಯನ ಪ್ರವಾಸದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ತಾಳಿಕೋಟೆಯ ಯುವ ರೈತ ವೀರೇಶ ಕೋರಿ, ಪ್ರತಿ ಉದ್ಯೋಗಗಳಂತೆ ಕೃಷಿಯಲ್ಲಿಯೂ ಶ್ರದ್ಧೆ, ಭಕ್ತಿ ಮತ್ತು ಪ್ರೀತಿಯಿಂದ
ಕಾಯಕ ನಿಷ್ಠತೆ ಬೆಳೆಸಿಕೊಂಡಲ್ಲಿ ಯಶಸ್ಸು ಕಂಡುಕೊಳ್ಳಲು ಸಾಧ್ಯ. ದೃಷ್ಟಿ ಮತ್ತು ಸೃಷ್ಟಿಯಲ್ಲಿ ಸಾಮ್ಯತೆ ಸಾಧಿಸುವ ಪ್ರತಿ ರೈತ ಅದ್ಭುತ ಸಾಧಕನಾಗುತ್ತಾನೆ. ರೈತರಾದವರು ಕಲಿಕಾಸಕ್ತಿ ಮತ್ತು ಪ್ರಯೋಗಶೀಲತೆಯನ್ನು ಅಳವಡಿಸಿಕೊಳ್ಳಬೇಕು ಎಂದರು. ವಿದ್ಯಾಪೀಠದ ಅಧ್ಯಕ್ಷ ಅರವಿಂದ ಕೊಪ್ಪ, ದಾಸೋಹಿ ಸಮಗ್ರ ಕೃಷಿಕರ ಆತ್ಮ ಗುಂಪಿನ ಅಧ್ಯಕ್ಷ ಚನ್ನಬಸಪ್ಪ ಯಾಳವಾರ, ಉಪಾಧ್ಯಕ್ಷ ರಾಚಪ್ಪ ಕೋಣವರ ವೇದಿಕೆಯಲ್ಲಿದ್ದರು. ವಿಜಯಲಕ್ಷ್ಮೀ ಸೂಳಿಭಾವಿ ಸ್ವಾಗತಿಸಿದರು. ಮುತ್ತಪ್ಪ ಮೆಣಸಿನಕಾಯಿ ನಿರೂಪಿಸಿದರು. ಅಂಬರೀಶ ಮೆಣಸಿನಕಾಯಿ ವಂದಿಸಿದರು.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Vijaypur: ಕರ್ತವ್ಯ ಲೋಪ ಡಿಡಿಪಿಐ ನಾಗೂರ ಮತ್ತೆ ಸಸ್ಪೆಂಡ್

1-qweqeweqw

Congress ಅಭ್ಯರ್ಥಿ ಮೆರವಣಿಗೆಯಲ್ಲಿ ಹಣ ಹಂಚಿದ ವಿಡಿಯೋ ವೈರಲ್

shivananda

Vijayapura; ಯತ್ನಾಳಗೆ ತಾಕತ್ತಿದ್ದರೆ ಈಗಲೇ ಸ್ಪರ್ಧೆಗೆ ಬರಲಿ: ಸಚಿವ ಶಿವಾನಂದ ಪಾಟೀಲ

MB Patil 2

Electoral bonds; ಮೋದಿ ಭ್ರಷ್ಟಾಚಾರದ ಮತ್ತೊಂದು ಮುಖ ಬಯಲು:ಎಂ.ಬಿ.ಪಾಟೀಲ್

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.