ಸಿಂದಗಿ: ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ
Team Udayavani, Jun 7, 2020, 2:48 PM IST
ವಿಜಯಪುರ: ಜಿಲ್ಲೆಯಲ್ಲಿ ರೈತರೊಬ್ಬರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂದಗಿ ತಾಲೂಕಿನಲ್ಲಿ ಜರುಗಿದೆ.
ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಹಡಗಿನಾಳ ಗ್ರಾಮದ 30 ವರ್ಷದ ಗಂಗಪ್ಪ ಅಣ್ಣಪ್ಪ ಶಿರಶ್ಯಾಡ ಎಂದು ಗುರುತಿಸಲಾಗಿದೆ.
ರೈತ ಗಂಗಪ್ಪ 3-15 ಎಕರೆ ಜಮೀನು ಹೊಂದಿದ್ದು, ಗುಬ್ಬೇವಾಡ ಕರ್ನಾಟಕ ವಿಕಾಸ ಬ್ಯಾಂಕ್ ನಲ್ಲಿ 1.50 ಲಕ್ಷ ರೂ ಸಾಲ ಮಾಡಿದ್ದ ಎನ್ನಲಾಗಿದೆ.
ಪ್ರಕೃತಿ ವಿಕೋಪದಿಂದ ಸತತ ಬೆಳೆ ವೈಫಲ್ಯದ ಕಾರಣ ಗಂಗಪ್ಪ ಮಾಡಿದ ಸಾಲ ತೀರಿಸಲಾಗದೇ ಕಂಗಾಲಾಗಿದ್ದ. ಇದೇ ಕಾರಣದಿಂದ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮೃತ ರೈತ ತಾಯಿ, ಪತ್ನಿ, ಮಗನನ್ನು ಅಗಲಿದ್ದಾರೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ