ಕೆರೆಗೆ ನೀರು ತುಂಬಿಸಲು ರೈತರ ಆಗ್ರಹ


Team Udayavani, Jan 4, 2019, 9:03 AM IST

vij-2.jpg

ಹೂವಿನಹಿಪ್ಪರಗಿ: ಕೆಬಿಜೆಎನ್‌ಎಲ್‌ ಮೇಲಧಿಕಾರಿಗಳ ನಿರ್ಲಕ್ಷ್ಯದಿಂದ ಗುರುವಾರ ಹೂವಿನ ಹಿಪ್ಪರಗಿ ಭಾಗದ ವಿವಿಧ ಹಳ್ಳಿಗಳ ರೈತರು ಹಾಗೂ ಜಾನುವಾರುಗಳಿಗೆ ಕುಡಿಯಲು ನೀರು ಸಿಗುವುದು ಕನಸಿನ ಮಾತಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ನಾಡಕಚೇರಿ ಆವರಣದಲ್ಲಿ ನೀರಿಗಾಗಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಸಂಕನಾಳ ಗ್ರಾಮದ ರೈತರು 15ಕ್ಕೂ ಹೆಚ್ಚು ಎತ್ತಿನ ಬಂಡಿಗಳಲ್ಲಿ ನಡೆಸಿದ ಮೆರವಣಿಗೆ ವೇಳೆ ಪಾಲ್ಗೊಂಡು ಮಾತನಾಡಿದ ಅವರು, ಜ.1ರಂದು ರೈತರ ಆರಂಭಿಸಿದ ಧರಣಿ ಸಂದರ್ಭದಲ್ಲಿ ತಹಶೀಲ್ದಾರರು ಹಾಗೂ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರು ಧರಣಿ ಸ್ಥಳಕ್ಕೆ ಭೇಟಿ ನೀಡಿ 10 ದಿನದೊಳಗಾಗಿ ಕಾಲುವೆ ಕಾಮಗಾರಿ ಪೂರ್ಣಗೊಳಿಸಿ ಕೆರೆಗಳಿಗೆ ನೀರು ತುಂಬಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಂದಿನ ಪರಿಸ್ಥಿತಿಯೇ ಬೇರೆ ಆಗಿದೆ.

ಆಲಮಟ್ಟಿ ಜಲಾಶಯದಿಂದ ಬಳೂತಿ ಜಾಕ್ವೆಲ್‌ಗೆ ಬಂದ ನೀರನ್ನು ಇಡೀ ವಿಜಯಪುರ ಜಿಲ್ಲೆಗೆ ನೀರು ಹರಿಸುವ ಜಾಕ್ವೆಲ್‌ ಸಂಪೂರ್ಣ ಸುಟ್ಟು ಅಪಾರ ಹಾನಿಯಾಗಿದೆ. ಈ ವಿಷಯ ಅಧಿಕಾರಿಗಳ ಗಮನಕ್ಕಿದ್ದರೂ ಸತ್ಯಾಂಶ ಮುಚ್ಚಿಟ್ಟು ಧರಣಿ ಸಂದರ್ಭದಲ್ಲಿ ನೂರಾರು ರೈತರ ಎದುರು 10 ದಿನಗಳ ಒಳಗಾಗಿ ನೀರು ಕೊಡುವುದಾಗಿ ನಂಬಿಸಿ ಮೋಸಗೊಳಿಸಿದ್ದಾರೆ ಎಂದು ಆರೋಪಿಸಿದರು.
ಕೇವಲ 15 ದಿನಗಳಲ್ಲಿ ಹೊಸ ಮಷಿನರಿಗಳನ್ನು ತಂದು ರೈತರಿಗೆ ನೀರು ಒದಗಿಸಲು ಸರ್ಕಾರಕ್ಕೆ ಸಾಧ್ಯವಿದೆ.

ಆದರೆ 4 ತಿಂಗಳು ಅವಧಿ ಹೇಳುತ್ತಿದ್ದಾರೆ. ಒಟ್ಟಾರೆ ರೈತರನ್ನು ನೀರಿನಿಂದ ವಂಚಿತರನ್ನಾಗಿ ಮಾಡಬೇಕೆಂಬ ದುರುದ್ದೇಶವಿದ್ದು ಯಾವುದೇ ಸಬೂಬು ಹೇಳದೆ 15 ದಿನಗಳಲ್ಲಿ ಮಷಿನರಿಗಳನ್ನು ಹೊಂದಾಣಿಕೆ ಮಾಡಿ ಕಾಲುವೆ ಹಾಗೂ ಹಳ್ಳಿಗಳ ಮುಖಾಂತರ ಕೆರೆಗೆ ನೀರು ತುಂಬಿಸುವಂತಾಗಬೇಕು ಎಂದು ಆಗ್ರಹಿಸಿದರು.
 
ತಾಲೂಕಾಧ್ಯಕ್ಷ ಸಿದ್ಧರಾಮ ಅಂಗಡಗೇರಿ, ತಾಲೂಕು ಗೌರವಾಧ್ಯಕ್ಷ ಈರಣ್ಣ ದೇವರಗುಡಿ, ಘಟಕದ ಅಧ್ಯಕ್ಷ ಹಣಮಂತ ತೋಟದ, ಅಶೋಕ ಶಿವಯೋಗಿ, ಸಿದ್ದು ಹಾದಿಮನಿ, ಗಿರೀಶ ಶಿವಯೋಗಿ, ಹಣಮಂತ್ರಾಯ ಗುಣಕಿ, ಸಿದ್ದಲಿಂಗಯ್ಯ ಹಿರೇಮಠ, ಬಸಣ್ಣ ಪೂಜಾರಿ, ಅರವಿಂದ ಬ್ಯಾಕೋಡ, ಮಲ್ಲಯ್ಯ ಚಿಕ್ಕಮಠ ಸೇರಿದಂತೆ ಸುತ್ತಲಿನ ಗ್ರಾಮದ ರೈತರು ಧರಣಿಯಲ್ಲಿ ಬಾಗವಹಿಸಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.