ಬೇಡಿಕೆಗಳ ಈಡೇರಿಕೆಗೆ ಕೃಷಿಪರಿಕರ ವ್ಯಾಪಾರಸ್ಥರ ಆಗ್ರಹ
Team Udayavani, Dec 22, 2018, 2:23 PM IST
ವಿಜಯಪುರ: ರೈತರಿಗೆ ರಿಯಾಯ್ತಿ ದರದಲ್ಲಿ ಕೃಷಿ ಕೆಲಸಕ್ಕಾಗಿ ಬೀಜ, ಕ್ರಿಮಿನಾಶಕ ಸೇರಿ ಅಧಿಕೃತ ಲೈಸನ್ಸ್ ಹೊಂದಿದ ಕೃಷಿ ವರ್ತಕರ ಮೂಲಕವೇ ಮಾರಾಟವಾಗುವ ವ್ಯವಸ್ಥೆ ರೂಪಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ನೇತೃತ್ವ ವಹಿಸಿದ್ದ ಸಂಘಟನೆ ಮುಖಂಡ ಪುಟ್ಟು ಕುಲಕರ್ಣಿ ಮಾತನಾಡಿ, ಕೃಷಿ ಪರಿಕರ ಮಾರಾಟರರು ಪ್ರಸಕ್ತ ಸಂದರ್ಭದಲ್ಲಿ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೃಷಿ ಪರಿಕರ ಮಾರಾಟಗಾರರ ಪರವಾನಿಗೆ ವಿತರಣೆ, ನವೀಕರಣ ಪ್ರಕ್ರಿಯೆಯಲ್ಲಿ ಸಾಕಷ್ಟು ವ್ಯತ್ಯಯವಾಗುತ್ತಿದೆ. ಇದರಿಂದ ಕೃಷಿ ಪರಿಕರ ಮಾರಾಟಗಾರರು ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಲೈಸನ್ಸ್ ವ್ಯವಸ್ಥೆ ಸರಳೀಕರಣ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಅಧಿಕೃತ ಲೈಸನ್ಸ್ ಹೊಂದಿದ ಕೃಷಿ ಪರಿಕರ ಮಾರಾಟಗಾರರಿದ್ದಾರೆ. ಈ ವೃತ್ತಿ ನಂಬಿ 6 ಲಕ್ಷ ಜನರು ತಮ್ಮ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಮಾರಾಟಗಾರರಿಗೆ ಬಲ ನೀಡುವ ನಿಟ್ಟಿನಲ್ಲಿ ಸರ್ಕಾರದಿಂದ ಕೃಷಿ ಉದ್ದೇಶಗಳಿಗೆ ರಿಯಾಯ್ತಿ ರೂಪದಲ್ಲಿ ನೀಡುವ ಕೃಷಿ ಪರಿಕರಗಳನ್ನು ಅಧಿಕೃತ ಲೈಸನ್ಸ್ ಮಾರಾಟಗಾರರಿಂದಲೇ ಮಾರುವ ವ್ಯವಸ್ಥೆ ರೂಪಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕೃಷಿ ಪರಿಕರ ಮಾರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…