ಜಮೀನುಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಅನ್ನದಾತರ ಹಕ್ಕೊತ್ತಾಯ


Team Udayavani, Sep 25, 2018, 1:58 PM IST

vij-2.jpg

ಬಸವನಬಾಗೇವಾಡಿ: ಬಸವನಬಾಗೇವಾಡಿ ಪಟ್ಟಣದಲ್ಲಿ ಕಂದಾಯ ಇಲಾಖೆಯ ಉಪವಿಭಾಗ ಕಚೇರಿ ಸ್ಥಾಪಿಸಬೇಕು. ಜಿಲ್ಲೆಯ ರೈತರ ಜಮೀನುಗಳಿಗೆ ರಸ್ತೆ ಸಂಪರ್ಕ ಕಲ್ಪಿಸಬೇಕೆಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಪಟ್ಟಣದ ಅಹೋರಾತ್ರಿ ಧರಣಿ
ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಸೋಮವಾರ ತಾಲೂಕಿನಿಂದ ಆಗಮಿಸಿ ನೂರಾರು ರೈತರು, ರೈತ ಮಹಿಳೆಯರು ಹಾಗೂ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಬಸವೇಶ್ವರ ದೇವಸ್ಥಾನದಲ್ಲಿ ಜಮಾಯಿಸಿ ನಂತರ ಬಸವೇಶ್ವರ ವೃತ್ತದಿಂದ ಮೆರವಣಿಗೆ ಮೂಲಕ ಮುದ್ದೇಬಿಹಾಳ ರಸ್ತೆಯ ಮಿನಿ ವಿಧಾನ ಸೌಧದ ತಹಶೀಲ್ದಾರ್‌ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭಿಸಿದರು.

ನಂತರ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಕಾರ್ಯಾಧ್ಯಕ್ಷ ಸಿದ್ದರಾಮಪ್ಪ ರಂಜಣಗಿ ಮಾತನಾಡಿ, ಪಟ್ಟಣದಲ್ಲಿ ಕಂದಾಯ ಇಲಾಖೆಯ ಉಪವಿಭಾಗ ಕಚೇರಿ ಸ್ಥಾಪಿಸಬೇಕು. ಹಲವು ವರ್ಷಗಳಿಂದ ಪಟ್ಟಣದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ, ಆಮರಣ ಉಪವಾಸ ಸತ್ಯಾಗ್ರಹ ಸೇರಿದಂತೆ ಅನೇಕ ಹೋರಾಟಗಳು ಮಾಡಿದಾಗ ಈ ಭಾಗದ
ಜನಪ್ರತಿನಿ ಧಿಗಳು ಬರುವ ದಿನಗಳಲ್ಲಿ ಪಟ್ಟಣದಲ್ಲಿ ಕಂದಾಯ ಇಲಾಖೆಯ ಉಪವಿಭಾಗ ಕಚೇರಿ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿ ವರ್ಷಗಳೆ ಗತಿಸಿದರು ಕೂಡಾ ಯಾವುದೇ ಕಾರ್ಯ ಕೈಗೊಂಡಿಲ್ಲ. ಆದ್ದರಿಂದ ಈ ಬಾರಿ ಪಟ್ಟಣದಲ್ಲಿ
ಕಂದಾಯ ಇಲಾಖೆಯ ಉಪವಿಭಾಗ ಕಚೇರಿ ಸ್ಥಾಪನೆಯಾಗುವರೆಗೂ ಹೋರಾಟ ಕೈ ಬಿಡುವ ಪ್ರಶ್ನೆಯಿಲ್ಲ ಎಂದರು.

ರಾಜ್ಯದಲ್ಲಿ ರೈತರು ಹಲವಾರು ವರ್ಷಗಳಿಂದ ತಮ್ಮ ಹೊಲ, ಗದ್ದೆ, ತೋಟಗಳಿಗೆ ತೆರಳಬೇಕಾದರೆ ರಸ್ತೆಯ ಸಮಸ್ಯೆಯಿಂದ ರೈತರು ಬೆಳೆದ ಅನೇಕ ಬೆಳೆಗಳು ಮಾರುಕಟ್ಟೆಗೆ ತರದೆ ಹೊಲದಲ್ಲೇ ಹಾಳಾಗಿ ಹೋದ ಉದಾಹರಣೆಗಳು ಸಾಕಷ್ಟಿವೆ ಆದ್ದರಿಂದ ಎಲ್ಲ
ಜಮೀನುಗಳಿಗೆ ರಸ್ತೆಯನ್ನು ನಿರ್ಮಿಸಿಕೊಡುವಂತೆ ಹಲವಾರು ವರ್ಷಗಳಿಂದ ರಾಜ್ಯ ಸರಕಾರಕ್ಕೆ ಮತ್ತು ಕಂದಾಯ ಇಲಾಖೆ ಮನವಿ ಮಾಡಿದರು ಕೂಡಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ರೈತರ ಬಗ್ಗೆ ಯಾವುದೇ ರೀತಿಯಲ್ಲಿ ಕೂಡಾ ಸ್ಪಂದಿ ಸುತ್ತಿಲ್ಲಾ
ಎಂದು ಆರೋಪಿಸಿದರು. ತಾಲೂಕಾಧ್ಯಕ್ಷ ಸಿದ್ದರಾಮ ಅಂಗಡಗೇರಿ, ರಜಿಯಾಬೇಗಂ ಬಿಜಾಪುರ, ಗಂಗವ್ವ ಮಾದರ, ಬೀಮಪ್ಪ ಬಡಿಗೇರ, ಚಂದ್ರರಾಮ ತಗ್ಗಿ, ಸತ್ಯಪ್ಪ ಬಿಜಾಪುರ, ಶಾರದಾ ಲಮಾಣಿ, ಶಟ್ಟೆಪ್ಪ ಲಮಾಣಿ, ಮಲಕಾಜಿಪ್ಪ ಮಳ್ಳಿ, ಹೊನ್ನಕೇರಪ್ಪ
ತೆಲಗಿ, ಅವಪ್ಪಗೌಡ ತಳ್ಳೋಳಿ, ಮೈಬುಸಾಲ ಅವಟಿ, ಹನುಮಂತ ತೋಟದ, ಶಿವಪ್ಪ ಲಮಾಣಿ, ರೇಣುಕಾ ಕುಂಬಾರ, ಹೇಮು ಲಮಾಣಿ, ಸುಮಿತ್ರಾ ಉಪ್ಪಲದಿನ್ನಿ, ಕವಿತಾ ರಾಠೊಡ, ಪಾರ್ವತಿ ಹೊಲದೂರ, ಶಾಂತಾಬಾಯಿ ರೆಡ್ಡಿ, ಶಾಂತಾ ತೆಲಗಿ, ಈರಮ್ಮ  ಹಯರೊಳ್ಳಿ, ಮಹಾದೇವ ರೆಡ್ಡಿ, ಸುಭಾಶ ಬಿಸರೊಟ್ಟಿ, ಗದಿಗೆಪ್ಪ ಕುಂಬಾರ, ಕೃಷ್ಣಪ್ಪ ಭೀಮರೆಡ್ಡಿ, ನೀಲಮ್ಮ ಕೊನರೆಡ್ಡಿ, ರಾಮು ಬೊಮ್ಮನಜೋಗಿ, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.