ಬೇಡಿಕೆ ಈಡೇರಿಕೆಗೆ ರೈತರ ಒತ್ತಾಯ
Team Udayavani, Nov 21, 2021, 5:03 PM IST
ಸಿಂದಗಿ: ಕಬ್ಬಿನ ಬೆಲೆ ನಿಗದಿಗೊಳಿಸಲು ಸಕ್ಕರೆ ಕಾರ್ಖಾನೆಗಳ ಮಾಲಿಕರು, ಜಿಲ್ಲಾಡಳಿತ, ಸಕ್ಕರೆ ಮಂತ್ರಾಲಯ ಸಭೆ ಕರೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕ ಹಾಗೂ ಸಿಂದಗಿ ಘಟಕದ ಪದಾ ಧಿಕಾರಿಗಳು ತಹಶೀಲ್ದಾರ್ ಸಂಜೀವಕುಮಾರ ದಾಸರಗೆ ಮನವಿ ಸಲ್ಲಿಸಿದರು.
ಪ್ರತಿ ಟನ್ ಕಬ್ಬಿಗೆ 3 ಸಾವಿರ ರೂ. ನಿಗದಿಗೊಳಿಸಬೇಕು. ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಅಲ್ಲಿನ ರೈತರಿಗೆ ಪ್ರತಿ ಟನ್ಗೆ 2800 ರೂ. ಕಟಾವು ಹೊರತು ಪಡಿಸಿ 2800 ರೂ. ನೀಡಿದ್ದಾರೆ. ಆದರೆ ವಿಜಯಪುರ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು 2300 ರೂ. ಕೊಟ್ಟು ಕೈ ತೊಳೆದುಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ 10 ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ಗೆ 500 ರೂ. ರೈತರ ಖಾತೆಗೆ ಕೊಡಲು ಕೂಡಲೇ ಸರಕಾರ ಒತ್ತಾಯಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಜಿಲ್ಲೆಯಲ್ಲಿ ಸರಿಯಾಗಿ ಮಳೆಯಾಗದ ಕಾರಣ ಕಬ್ಬು, ತೊಗರಿಗೆ ಗೊನ್ನಿ ಹುಳುಗಳು ಹತ್ತಿ, ಕಬ್ಬು, ತೊಗರಿ, ಸೂರ್ಯಕಾಂತಿ, ಹೆಸರು ಹಾಳಾಗಿ ರೈತರು ಬಹಳ ತೊಂದರೆಗಿಡಾಗಿದ್ದಾರೆ. ಕೂಡಲೇ ಸರಕಾರ ಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ನೀಡಬೇಕು. ಪ್ರತಿ ಎಕರೆಗೆ 8 ಸಾವಿರದಿಂದ 10 ಸಾವಿರ ರೂ. ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ರಂಜುಣಗಿ, ತಾಲೂಕಾಧ್ಯಕ್ಷ ಶಿವಶರಣಪ್ಪಗೌಡ ಬಿರಾದಾರ, ಉಪಾಧ್ಯಕ್ಷ ಚನ್ನಪಗೌಡ ಪಾಟೀಲ, ಕಾರ್ಯದರ್ಶಿ ಅಶೋಕ ಅಲ್ಲಾಪುರ, ಬಾಬು ಕೂಡಿ, ಅಮೋಘಿ ಹರವಾಳ, ಲಕ್ಷ್ಮಣ ಹೂಗಾರ, ಹನುಮಂತ ಗೊಬ್ಬೂರ, ಕುಲ್ಲಣ್ಣ ಹರವಾಳ, ರವಿ ಹಿರೇಕುರುಬರ, ಸಿದ್ದು ಉಪ್ಪಾರ, ಭಾಸ್ಕರ ಪೂಜಾರಿ, ಗೊಲ್ಲಾಳಪ್ಪ ಚೌಧರಿ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ