ಅಧಿಕಾರಕ್ಕೆ ಬಂದ 24 ತಾಸಲ್ಲಿ ರೈತರ ಸಾಲ ಮನ್ನಾ: ಕುಮಾರಸ್ವಾಮಿ


Team Udayavani, Feb 2, 2018, 4:05 PM IST

vij-3.jpg

ತಾಳಿಕೋಟೆ: ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ 24 ತಾಸಿನಲ್ಲಿ ಎಲ್ಲ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಶ್ರೀ ಶರಣಮುತ್ಯಾರ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕುಮಾರ ಪರ್ವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ರೈತರ ಬಗ್ಗೆ ಕಿಂಚಿತ್ತೂ ಕಾಳಿಜಿ ಹೊಂದಿಲ್ಲ.

ರಾಜ್ಯದಲ್ಲಿ 3500 ರೈತರು ಸಾಲದ ಸುಳಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಬಗ್ಗೆ ಚಿಂತಿಸುತ್ತಿಲ್ಲ ಎಂದು ಆರೋಪಿಸಿದರು. ಜೆಡಿಎಸ್‌ಗೆ ಅಧಿಕಾರ ಕೊಟ್ಟರೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬರಬೇಕಿಲ್ಲ. ವಿಜಯಪುರ ಜಿಲ್ಲೆಯಲ್ಲಿಯೇ ಕಾರ್ಖಾನೆ ಆರಂಭಿಸಲು ಕಂಪನಿ ಮಾಲೀಕರಿಗೆ ತಿಳಿಸುತ್ತೇನೆ. ಅವರಿಗೆ ವಿದ್ಯುತ್‌, ಜಾಗೆ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಿ ನಿಮಗೆ ಉದ್ಯೋಗ ಕೊಡಿಸುವಂತಹ ಕೆಲಸ ಮಾಡುತ್ತೇನೆ ಎಂದು ಯುವಕರಿಗೆ ಭರವಸೆ ನೀಡಿದರು.

ಸಾಲ ಮನ್ನಾ ಮಾಡುವುದರ ಜತೆಗೆ ಇನ್ನೊಮ್ಮೆ ಸಾಲಗಾರರಾಗದ ಹಾಗೆ ಈ ಭಾಗದ ನೀರಾವರಿ ಯೋಜನೆ ಪೂರ್ಣಗೊಳಿಸಿ 25 ಸಾವಿರ ಕೋಟಿ ರೂ. ಗಾತ್ರದ ಪ್ರತ್ಯೇಕ ಕೃಷಿ ಬಜೆಟ್‌ ಮಂಡನೆ ಮಾಡಿ ರೈತರ ಹಿತ ಕಾಪಾಡುತ್ತೇನೆ. ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಕೊಡಲು ಕೇವಲ ಅರಣ್ಯ ಇಲಾಖೆ ಒಂದರಲ್ಲೇ 5 ಲಕ್ಷ ಹುದ್ದೆ ಸೃಷ್ಠಿಸಿ ಪ್ರತಿ ತಿಂಗಳು 5 ಸಾವಿರ ಸಂಬಳ ನೀಡುವಂತೆ ಮಾಡುತ್ತೇನೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಅವರನ್ನು ತೆಗೆದು ಹಾಕದಂತೆ ಹುದ್ದೆ ಖಾಯಂಗೊಳಿಸುತ್ತೇನೆ. ತಾಳಿಕೋಟೆ
ಪಟ್ಟಣದಲ್ಲಿ ರಸ್ತೆಗಳೆಲ್ಲ ಹಾಳಾಗಿ ಹೋಗಿವೆ. ನೀವು ಅಧಿಕಾರ ಕೊಟ್ಟ ಶಾಸಕರು ಅಭಿವೃದ್ಧಿ ಮಾಡಿಲ್ಲ ಎಂಬುದು ಎತ್ತಿ ತೋರಿಸುತ್ತಿದೆ ಎಂದು ವಾಗ್ಧಾಳಿ ಮಾಡಿದರು.

ಇವತ್ತು ಕೇಂದ್ರದ ಬಜೆಟ್‌ ಮಂಡನೆಯಾಗಿದೆ. ಅದನ್ನು ನೋಡಲು ಕುಳಿತಿದ್ದೆ. ಕರ್ನಾಟಕಕ್ಕೆ ಬರಪುರ ಕೊಡುಗೆಗಳು ಎಂದು ಬರುತ್ತಿದ್ದವು. ರೈತರಲ್ಲಿಯೇ ಅತಿ ಸಂಕಷ್ಟದಲ್ಲಿರುವ ದ್ರಾಕ್ಷಿ ಬೆಳೆಗಾರರ ರಕ್ಷಣೆ ಬಗ್ಗೆ ಒಂದು ಬಿಡಿಗಾಸು ಕೊಟ್ಟಿಲ್ಲ. ಎಷ್ಟೋ ಭಾರಿ ದ್ರಾಕ್ಷಿ ಬೆಳೆಗಾರರು ಕೇಂದ್ರದ ಮುಂದೆ ಅಂಗಲಾಚಿ ಮನವಿ ಮಾಡಿದ್ದಾರೆ. ಅವರ ಬೇಡಿಕೆ ಈಡೇರಿಲ್ಲ ಎಂದು ದೂರಿದರು.

ದೇವರ ಹಿಪ್ಪರಗಿ ಶಾಸಕ ಎ.ಎಸ್‌ .ಪಾಟೀಲ(ನಡಹಳ್ಳಿ), ಮಹಾದೇವಿ ಪಾಟೀಲ(ನಡಹಳ್ಳಿ), ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ನಾನಾಗೌಡ ಪಾಟೀಲ, ಶಾಂತಗೌಡ ಪಾಟೀಲ(ನಡಹಳ್ಳಿ), ಜೆಡಿಎಸ್‌ ತಾಲೂಕು ಅಧ್ಯಕ್ಷ ಈರಸಂಗಪ್ಪಗೌಡ ಪಾಟೀಲ, ಜಿಪಂ ಸದಸ್ಯ ಬಸನಗೌಡ ವಣಕ್ಯಾಳ, ತಾಳಿಕೋಟೆ ಅಧ್ಯಕ್ಷ ವಾಸುದೇವ ಹೆಬಸೂರ, ಇಬ್ರಾಹಿಂ ಮನ್ಸೂರ್‌, ರಂಜಾನ್‌ ಮನಗೂಳಿ, ಖಾಜಾಹುಸೇನ್‌ ಚೌದ್ರಿ, ಜೆಡಿಎಸ್‌ ಜಿಲ್ಲಾ ಉಪಾಧ್ಯಕ್ಷ ಬಸನಗೌಡ ಮಾಡಗಿ, ಸಂಗನಗೌಡ ಹೆಗರಡ್ಡಿ, ಬಾಬುಗೌಡ ಬಿರಾದಾರ, ಮಲ್ಲು ಮೇಟಿ, ರμಕ್‌ ಲಾಹೋರಿ, ಸತೀಶ ಸರಶೆಟ್ಟಿ, ಮಲ್ಲು ದುಮಗುಂಡಿ, ಸನಾ ಕೆಂಭಾವಿ, ನಾಗೇಶ ಡೋಣೂರಮಠ, ಬಬು ಬಡಗಣ, ವಿಠ್ಠಲ ಮೋಹಿತೆ, ಚನ್ನಮ್ಮ ತಂಗಡಗಿ, ರಾಜುಗೌಡ ಗುಂಡಕನಾಳ, ರೀಯಾಜ್‌ ಫಾರುಕೆ ಇದ್ದರು. 

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.