ತೊಗರಿ ಬೀಜಕ್ಕಾಗಿ ಅನ್ನದಾತರ ದಿಢೀರ್ ಪ್ರತಿಭಟನೆ


Team Udayavani, Jun 16, 2020, 1:51 PM IST

vp-tdy-3

ದೇವರಹಿಪ್ಪರಗಿ: ದೇವರಹಿಪ್ಪರಗಿ ರೈತ ಸಂಪರ್ಕದಲ್ಲಿ ಕೇಂದ್ರದಲ್ಲಿ ತೊಗರಿ ಬೀಜದ ಕೊರತೆ ಹಿನ್ನೆಲೆ ರೈತರು ಸೋಮವಾರ ಕೃಷಿ ಅಧಿಕಾರಿಗಳ ವಿರುದ್ಧ ದಿಢೀರ್‌ ಪ್ರತಿಭಟನೆ ನಡೆಸಿದರು.

ಈ ವೇಳೆ ಭಾರತೀಯ ಕಿಸಾನ್‌ ಸಂಘದ ತಾಲೂಕಾಧ್ಯಕ್ಷ ಬಸವರಾಜ ಕಲ್ಲೂರ ಮಾತನಾಡಿ, ಕಳೆದ ಎರಡು ದಿನದಿಂದ ತೊಗರಿ ಬೀಜ ಪಡೆಯಲು ಸರದಿಯಲ್ಲಿ ನಿಂತು ಚೀಟಿ ಪಡೆದಿದ್ದೇವೆ. ಇಂದು ನಸುಕಿನ ಜಾವದಿಂದ ತೊಗರಿ ಬೀಜ ಪಡೆಯಲು ಚೀಟಿ ತೆಗೆದುಕೊಂಡು ಬಂದ ಕೆಲವು ರೈತರಿಗೆ ಮಧ್ಯಾಹ್ನದವರೆಗೆ ಮಾತ್ರ ತೊಗರಿ ಬೀಜ ಕೊಟ್ಟಿದ್ದಾರೆ. ಇನ್ನುಳಿದ ಸರದಿಯಲ್ಲಿ ನಿಂತ ಬಹುತೇಕ ರೈತರಿಗೆ ಬೀಜ ಖಾಲಿ ಆಗಿವೆ. ಬೀಜ ಬಂದ ತಕ್ಷಣ ಕೊಡುತ್ತೆವೆ ಎಂಬ ಉಡಾಫೆ ಉತ್ತರ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ರೈತರಿಗೆ ಬೇಕಾದಷ್ಟು ಬೀಜ ಪೂರೈಕೆ ಮಾಡದೆ ಅಧಿಕಾರಿಗಳು ತೊಗರಿ ಬೀಜ ಪ್ರಭಾವಿ ವ್ಯಕ್ತಿಗಳಿಗೆ ಮಾತ್ರ ಕೊಡುತ್ತಿದ್ದಾರೆ. ಸಾಮಾನ್ಯ ಬಡ ರೈತರಿಗೆ ಸಮರ್ಪಕವಾದ ಬೀಜ ಕೊಡುತ್ತಿಲ್ಲ. ತಾಲೂಕಿನಲ್ಲಿ ಎಲ್ಲ ರೈತರಿಗೆ ಸರಿಯಾದ ಸಮಯಕ್ಕೆ ಬೀಜ ಪೂರೈಕೆ ಮಾಡದೆ ಅಧಿ ಕಾರಿಗಳು ನಿಷ್ಕಾಳಜಿ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ವೇಳೆ ಅಧಿಕಾರಿಗಳ ವಿರುದ್ಧ ರೈತರು ಧಿಕ್ಕಾರ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಪಿಎಸೈ ಸುರೇಶ ಗಡ್ಡಿ ಆಗಮಿಸಿ ಬೀಜ ಬಂದ ನಂತರ ಪ್ರತಿಯೊಬ್ಬ ರೈತರಿಗೆ ಬೀಜ ದೊರಕಿಸುವ ಕೆಲಸ ನಾನೇ ಮುಂದು ನಿಂತು ಮಾಡುತ್ತೇನೆ. ಈಗ ಉಳಿದ ಬೀಜಗಳು ತೆಗೆಕೊಂಡು ಹೋಗಿ ಎಂದು ರೈತರ ಮನವೋಲಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ಅಜೀಜ್‌ ಎಲಗಾರ, ರೈತರಾದ ಪ್ರಭು ಕಬಾಡಗಿ, ಜವಾಹಾರ ದೇಶಪಾಂಡೆ, ಶ್ರೀಶೈಲ್‌ ಹದರಿ, ಶರಣಪ್ಪ ತಳವಾರ, ಸಿದ್ದು ಬಿರಾದಾರ, ಬಸವರಾಜ ಮನಗೂಳಿ, ಶರಣಗೌಡ ಸುರಗಳ್ಳಿ, ಶ್ರೀಶೈಲ ಮಠಪತಿ, ಮಲ್ಲು ಬಿರಾದಾರ ಸೇರಿದಂತೆ ನೂರಾರು ರೈತರು ಇದ್ದರು.

ದೇವರಹಿಪ್ಪರಗಿ ತಾಲೂಕಿನ ರೈತರಿಗೆ ಕೊರತೆ ಆಗಬಾರದು ಎಂಬ ಉದ್ದೇಶದಿಂದ 940 ಕ್ವಿಂಟಲ್‌ ಬಿತ್ತನೆ ಬೀಜಕ್ಕೆ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅದರಲ್ಲಿ 250 ಕ್ವಿಂಟಲ್‌ ಮಾತ್ರ ಬಂದಿದ್ದು ರೈತರಿಗೆ ವಿತರಿಸಲಾಗಿದೆ. ಮಂಗಳವಾರ ಬೆಳಗ್ಗೆ 60 ಕ್ವಿಂಟಲ್‌ ತೊಗರಿ ಬೀಜ ಬರಲಿದ್ದು ಅದನ್ನೂ ವಿತರಿಸುತ್ತೇವೆ. ತಾಲೂಕಿನ ಯಾವ ರೈತರಿಗೂ ಬೀಜದ ಕೊರತೆಯಾಗದಂತೆ ನೊಡಿಕೊಳ್ಳುತ್ತೇವೆ. -ಸೋಮನಗೌಡ ಬಿರಾದಾರ, ಕೃಷಿ ಅಧಿಕಾರಿ, ದೇವರಹಿಪ್ಪರಗಿ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.