ಇಂದು ಬೆಂಗಳೂರಲ್ಲಿ ಸಿಎಂಮನೆ ಮುಂದೆ ರೈತರ ಧರಣಿ
Team Udayavani, Feb 3, 2018, 3:27 PM IST
ವಿಜಯಪುರ: ರೈತರು ಜಮೀನಿಗೆ ಹೋಗುವ ದಾರಿ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಫೆ. 4ರಂದು ಬೆಂಗಳೂರಿನಲ್ಲಿರುವ
ಮುಖ್ಯಮಂತ್ರಿ ಮನೆ ಮುಂದೆ ಧರಣಿಗೆ ಅಖಂಡ ಕರ್ನಾಟಕ ರೈತ ಸಂಘ ನಿರ್ಧರಿಸಿದೆ.
ನಗರದಲ್ಲಿ ಜರುಗಿದ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರೈತರು ತಮ್ಮ ಜಮೀನುಗಳಿಗೆ ಹೋಗಲು ದಾರಿ ಸಮಸ್ಯೆ ತೀವ್ರವಾಗಿದ್ದು ಸೂಕ್ತ ಕಾನೂನು ತಿದ್ದುಪಡಿ ಮಾಡಿ ದಾರಿ ಮಾಡಿಕೊಡುವ ಅಧಿಕಾರವನ್ನು ತಹಶೀಲ್ದಾರ್ರಿಗೆ ನೀಡಬೇಕು. ಈ ಕುರಿತು ಮಾಡಿಕೊಂಡ ಮನವಿಗೆ ಸರ್ಕಾರ ಸ್ಪಂದಿಸದ ಕಾರಣ ರಾಜ್ಯಾದ್ಯಂತ ಹೋರಾಟ ವಿಸ್ತರಿಸಲು ನಿರ್ಧರಿಸಲಾಗಿದೆ. ಅಲ್ಲದೇ ಫೆ. 4ರಂದು ಮುಖ್ಯಮಂತ್ರಿ ನಿವಾಸದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ತಿಳಿಸಿದ್ದಾರೆ .
ಸಭೆಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ, ರಾಜ್ಯ ಉಪಾಧ್ಯಕ್ಷ ಬಿ.ಸಿ. ಪಾಟೀಲ, ಶ್ಯಾಮಸುಂದರ ಕೀರ್ತಿ, ಮಂಡ್ಯ ಜಿಲ್ಲಾಧ್ಯಕ್ಷ ಮುರುಗೇಂದ್ರಯ್ಯ ನಂದಿತಾವರೆ, ವಿಜಯಪುರ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ರಂಜಣಗಿ, ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಮೈಸೂರಿನ ಕೆಂಪಮ್ಮ, ಶೋಭಾ, ಡಾ| ಎಂ.ರಾಮಚಂದ್ರ ಬಮ್ಮನಜೋಗಿ, ಸದಾಶಿವ ಬರಟಗಿ, ಸಿದ್ರಾಮ ಅಂಗಡಗೇರಿ, ಗಿರೀಶ ಹಿರೇಮಠ, ದೋಂಡಿಬಾ ಪವಾರ, ಮುದ್ದುಗೌಡ ಪಾಟೀಲ, ಸುಭಾಷ್ ಬಿಸಿರೊಟ್ಟಿ, ವಿಠuಲ ಅಮಾತೆಗೌಡರ, ಮಹಾಂತೇಶ ಅಂಬಲಿ, ಚಂದ್ರಾಮ ತೆಗ್ಗಿ, ಸೋಮನಗೌಡ ಪಾಟೀಲ, ಗೋಲ್ಲಾಳಪ್ಪ ಚೌಧರಿ, ಹೊನಕೇರೆಪ್ಪ ತೆಲಗಿ , ಈರಪ್ಪ ತೇಲಿ, ಕಮಲಾಬಾಯಿ ಕೋಟ್ಯಾಳ, ಜಯಶ್ರೀ ಜಂಗಮಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ