ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ರೈತರಿಂದ ಪ್ರತಿಭಟನೆ
Team Udayavani, Apr 30, 2022, 4:51 PM IST
ಮುದ್ದೇಬಿಹಾಳ: ತಾಲೂಕಿನ ಕೃಷ್ಣಾ ನದಿ ದಂಡೆಯಲ್ಲಿನ ಹಂಡರಗಲ್ ಗ್ರಾಮವು ಮೂರು ವರ್ಷಗಳ ಹಿಂದೆ ಪ್ರವಾಹ ಪೀಡಿತಗೊಂಡಿತ್ತು. ಆ ವೇಳೆ ನೆಲಕ್ಕುರುಳಿದ್ದ ವಿದ್ಯುತ್ ಕಂಬಗಳನ್ನು ಮರಳಿ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ಸಮಸ್ಯೆ ಬಗೆಹರಿಸುವಲ್ಲಿ ಹೆಸ್ಕಾಂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಹಂಡರಗಲ್ ರೈತರು ಇಲ್ಲಿನ ಹೆಸ್ಕಾಂ ಕಚೇರಿಗೆ ಶುಕ್ರವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಈ ವೇಳೆ ಹೆಸ್ಕಾಂ ಎಇಇ ಮತ್ತು ಸೆಕ್ಷನ್ ಅಧಿಕಾರಿ ಜೊತೆ ವಾಗ್ವಾದ ನಡೆಸಿದರು. ರೈತ ಬಸವರಾಜ ನರಸಣ, ಪ್ರಮುಖರಾದ ಸಂಗನಗೌಡ ಪಾಟೀಲ, ಸಾಹೇಬಪಟೇಲ ಮೊಕಾಶಿ, ರಾಮಣ್ಣ ತುರುಡಗಿ ಮತ್ತಿತರರು ಮಾತನಾಡಿದರು.
ಎಇಇ ಆರ್. ಎನ್. ಹಾದಿಮನಿ, ರೈತರ ಅಹವಾಲು ಆಲಿಸಿದರು. ಆದರೆ ಇದಕ್ಕೊಪ್ಪದ ರೈತರು ಎಇಇ ಅವರನ್ನೇ ತಮ್ಮೂರಿಗೆ ಕರೆದೊಯ್ದು, ಊರೆಲ್ಲ ಸುತ್ತಾಡಿಸಿ, ಬಳಿಕ ಕಚೇರಿಗೆ ಆಗಮಿಸಿ ವಾಸ್ತವ ಪರಿಸ್ಥಿತಿ ಅರಿತುಕೊಳ್ಳುವಂತೆ ಮಾಡಿದರು. ವಾಸ್ತವ ತಿಳಿದ ಬಳಿಕ 15 ದಿನಗಳ ಕಾಲಾವಕಾಶ ಬೇಡಿಕೆಗೆ ಒಪ್ಪಿ ಪ್ರತಿಭಟನೆ ಕೈಬಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್