ತಮ್ಮ ಜಮೀನಿನಲ್ಲಿ ವಿದ್ಯುತ್ ಸ್ಥಾವರ ನಿರ್ಮಾಣ: ವಿಷದ ಬಾಟಲಿ ಪ್ರದರ್ಶಿಸಿದ ರೈತ ಮಹಿಳೆಯರು
Team Udayavani, Feb 22, 2020, 5:10 PM IST
ವಿಜಯಪುರ: ತಮ್ಮ ಜಮೀನಿನಲ್ಲಿ ಸರ್ಕಾರ ವಿದ್ಯುತ್ ಸ್ಥಾವರ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ನಾಲವಾಡ ಬಳಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತ ಮಹಿಳೆಯರು, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿ ವಿಷದ ಬಾಟಲಿ ಪ್ರದರ್ಶಿಸಿದ ಘಟನೆ ಜರುಗಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕ ಪೀರಾಪುರ-ಬೂದಿಹಾಳ ಏತ ನೀರಾವರಿ ಯೋಜನೆಗಾಗಿ ಸರ್ಕಾರ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಮುಂದಾಗಿರುವ ಜಮೀನು ತಮಗೆ ಸೇರಿದ್ದು. ಆದರೆ ಸರ್ಕಾರ ಅಕ್ರಮವಾಗಿ ತಮ್ಮ ಜಮೀನಿನಲ್ಲಿ ಸ್ಥಾವರ ನಿರ್ಮಿಸುತ್ತಿದೆ ಎಂದು ರೈತರು ಪ್ರತಿಭಟನೆ ಮುಂದಾಗಿದ್ದರು.
ಸರ್ಕಾರ ತಕ್ಷಣ ಸ್ಥಾವರ ನಿರ್ಮಾಣ ಸ್ಥಗಿತಗೊಳಿಸದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದರು.
ಸರ್ಕಾರ ಸ್ಪಂದಿಸದ ಕಾರಣ ಶನಿವಾರ ರೈತರು ವಿಷದ ಬಾಟಲಿ ಸಮೇತ ನಾಲತವಾಡ ಬಳಿಯ ಧರಣಿ ಸ್ಥಳಕ್ಕೆ ಬಂದಿದ್ದರು. ಇದರಲ್ಲಿ ಓರ್ವ ರೈತ ಮಹಿಳೆ ವಿಷ ಸೇವನೆಗೆ ಯತ್ನಿಸುತ್ತಲೇ ಸ್ಥಳದಲ್ಲಿದ್ದ ಪೊಲೀಸರು ವಿಷದ ಬಾಟಲಿ ಕಸಿದು, ರೈತರನ್ನು ಧರಣಿ ಸ್ಥಳದಿಂದ ಹೊರ ಹಾಕಿದರು.
ಈ ಹಂತದಲ್ಲಿ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ಕೆಬಿಜೆಎನ್ಎಲ್ ಅಧಿಕಾರಿಗಳ ಸಮ್ಮುಖದಲ್ಲಿ ರೈತರೊಂದಿಗೆ ಚರ್ಚೆ ನಡೆಸಿದರು.
ಅಂತಿಮವಾಗಿ ರೈತರು ತಮ್ಮ ಜಮೀನು ಎನ್ನುವ ಕುರಿತು 15 ದಿನಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ಅಥವಾ ಆದೇಶ ತರಬೇಕು. 15 ದಿನಗಳಲ್ಲಿ ನ್ಯಾಯಾಲಯದ ಆದೇಶ ತರದಿದ್ದಲ್ಲಿ ಕಾಮಗಾರಿ ಮುಂದುವರೆಸುವುದಾಗಿ ಅಧಿಕಾರಿಗಳು ರೈತರಿಗೆ ಗಡುವು ನೀಡಿದರು. ಇದಕ್ಕೆ ಒಪ್ಪಿದ ರೈತರು ಧರಣಿ ಕೈಬಿಟ್ಟು, ಸ್ಥಳದಿಂದ ನಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ