ಕೆರೆ-ಹಳ್ಳಿಗಳಿಗೆ ನೀರು ಹರಿಸಲು ರೈತರ ಮನವಿ
Team Udayavani, Apr 26, 2022, 5:52 PM IST
ಆಲಮಟ್ಟಿ: ಜಾನುವಾರು ಮತ್ತು ವನ್ಯ ಜೀವಿಗಳ ಕುಡಿಯುವ ನೀರಿಗಾಗಿ ಆಲಮಟ್ಟಿ ಬಲದಂಡೆ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ರೈತರು ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ಸೋಮವಾರ ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರ ಕಚೇರಿಗೆ ಬಾಗಲಕೋಟೆ ಜಿಲ್ಲೆಯ ಸುತಗುಂಡಾರ, ಡೊಮನಾಳ, ಬೊಮ್ಮಣಗಿ, ಹಂಡರಗಲ್ಲ, ತುರುಡಗಿ ಹಾಗೂ ಕೂಡಲಸಂಗಮದಿಂದ ಆಗಮಿಸಿದ್ದ ರೈತರು ಆಲಮಟ್ಟಿ ಬಲದಂಡೆ ಕಾಲುವೆ ಮೂಲಕ ಹಳ್ಳಗಳಿಗೆ ನೀರು ಹರಿಸುವುದರಿಂದ ಬೇಸಿಗೆಯ ಬಿರು ಬಿಸಿಲಿಗೆ ಜನ ಜಾನುವಾರುಗಳು ಹಾಗೂ ವನ್ಯ ಜೀವಿಗಳು ನೀರಿಗಾಗಿ ಪರಿತಪಿಸುವಂತಾಗಿದೆ. ಆದ್ದರಿಂದ ಆಲಮಟ್ಟಿ ಬಲದಂಡೆ ಕಾಲುವೆ ಮೂಲಕ ಕೆರೆ ಹಳ್ಳಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
ಮುಖ್ಯ ಅಭಿಯಂತರರ ಪರವಾಗಿ ಮನವಿ ಸ್ವೀಕರಿಸಿದ ಕಾರ್ಯಪಾಲಕ ಅಭಿಯಂತರ ಬಿ.ಎಸ್. ಪಾಟೀಲ ಅವರು ತಮ್ಮ ಮನವಿ ಹಿರಿಯ ಅಧಿಕಾರಿಗಳಿಗೆ ತಲುಪಿಸಲಾಗುವುದು ಎಂದರು.
ಮಂಜುನಾಥ ಬೂದಿಹಾಳ, ಶ್ರೀಶೈಲ ಬಿದರಕುಂದಿ, ಪರಸಪ್ಪ ಚಲವಾದಿ, ಬಿ.ಎಸ್.ನಾಗೋಡ, ಎಂ.ಎಂ.ಪಾಟೀಲ, ಪರಶು ಹಬ್ಬದ, ಎಸ್.ಎಸ್.ರೊಟ್ಟಿ, ಜಿ.ವೈ. ಮೇಟಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ