ಕಾಲುವೆಗೆ ನೀರು ಹರಿಸಲು ರೈತರ ಮನವಿ


Team Udayavani, May 28, 2019, 12:14 PM IST

vp-tdy-2..

ಆಲಮಟ್ಟಿ: ದೇವರಹಿಪ್ಪರಗಿ ತಾಲೂಕಿನ ಬೊಮ್ಮನಜೋಗಿ ಕೆರೆ ಸೇರಿದಂತೆ ಹಲವು ಕೆರೆಗಳ ಭರ್ತಿಗೆ ಆಗ್ರಹಿಸಿ ರೈತರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಆಲಮಟ್ಟಿ: ಚಿಮ್ಮಲಗಿ ಏತ ನೀರಾವರಿ ಯೋಜನೆಯ ಕಾಲುವೆಯ ಮೂಲಕ ದೇವರಹಿಪ್ಪರಗಿ ತಾಲ್ಲೂಕಿನ ವಿವಿಧ ಕೆರೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಬೊಮ್ಮನಜೋಗಿಯ ರೈತರು ಸೋಮವಾರ ಆಲಮಟ್ಟಿಯ ಕೃಷ್ಣಾ ಭಾಗ್ಯಜಲ ನಿಗಮದ ಮುಖ್ಯ ಅಭಿಯಂತರರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಬೊಮ್ಮನಜೋಗಿ ಕೆರೆ ಭರ್ತಿಗೆ ಆಗ್ರಹಿಸಿ, ಈಗಾಗಲೇ ಈ ಕುರಿತು ಹಲವಾರು ಬಾರಿ ಆಲಮಟ್ಟಿಗೆ ಆಗಮಿಸಿ, ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರೂ ನಮ್ಮ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದು ಆರೋಪಿಸಿದರು.

ಕೃಷ್ಣಾ ಭಾಗ್ಯಜಲ ನಿಗಮದ ಆಲಮಟ್ಟಿ ವಲಯ ಮುಖ್ಯ ಅಭಿಯಂತರ ಆರ್‌.ಪಿ. ಕುಲಕರ್ಣಿ ಪ್ರತಿಭಟನಾನಿರತರನ್ನು ತಮ್ಮ ಕೊಠಡಿಯೊಳಗೆ ಕರೆಯಿಸಿ, ಚಿಮ್ಮಲಗಿ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆ ವ್ಯಾಪ್ತಿಯ 137ನೇ ಕಿ.ಮೀ.ದಲ್ಲಿ ನಾಗಠಾಣ, ಕೋರವಾರ ಶಾಖಾ ಕಾಲುವೆಯಡಿ ಈ ಕೆರೆಗಳ ಭರ್ತಿ ಮಾಡಬೇಕಿದೆ. ಆದರೆ ಚಿಮ್ಮಲಗಿ ಏತ ನೀರಾವರಿ ಮುಖ್ಯ ಕಾಲುವೆಯ ಕೆಲ ಕಡೆ ಭೂಸ್ವಾಧೀನ ಸಮಸ್ಯೆ ಕಾರಣ ಇನ್ನೂವರೆಗೂ ಕೆಲ ಮೀಟರ್‌ ಕಾಲುವೆ ನಿರ್ಮಾಣಗೊಂಡಿಲ್ಲ, ಅಲ್ಲಿಯ ರೈತರು ಕಾಲುವೆ ನಿರ್ಮಾಣಕ್ಕೆ ಅಡ್ಡವಾಗಿದ್ದಾರೆ. ಆ ಭೂಸ್ವಾಧೀನ ಸಮಸ್ಯೆ ಇನ್ನೂ ಬಗೆಹರಿದಿಲ್ಲ, ಅದಕ್ಕಾಗಿ ವಿಜಯಪುರ ಮುಖ್ಯ ಕಾಲುವೆಯ ಮೂಲಕ ದೇವರಹಿಪ್ಪರಗಿ ತಾಲೂಕಿನ ಕೆರೆಗಳ ಭರ್ತಿ ಕ್ರಮ ಕೈಗೊಳ್ಳಲಾಗಿದೆ. ದೇವರಹಿಪ್ಪರಗಿ ಭಾಗದ ಕೆರೆಗಳ ಭರ್ತಿಗೆ ಮಂಗಳವಾರವೇ ಖುದ್ದು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಆಲಮಟ್ಟಿ ಅಣೆಕಟ್ಟು ವೃತ್ತ ಪ್ರಭಾರಿ ಅಧೀಕ್ಷಕ ಅಭಿಯಂತರ ಬಿ.ಎಸ್‌. ಪಾಟೀಲ, ಆಲಮಟ್ಟಿ ಎಡದಂಡೆ ಕಾಳುವೆ ಕಾರ್ಯಪಾಲಕ ಅಭಿಯಂತರ ಎಂ.ಸಿ. ಛಬ್ಬಿ, ಅಧೀಕ್ಷಕ ಅಭಿಯಂತರ ಕಚೇರಿಯ ತಾಂತ್ರಿಕ ಸಹಾಯಕ ವಿ.ಜಿ. ಕುಲಕರ್ಣಿಯವರು ಕಾಳುವೆ ತೋಡಲು ಆಗಿರುವ ಸಮಸ್ಯೆಗಳನ್ನು ವಾಸ್ತವ ಸ್ಥಿತಿ ಕುರಿತು ರೈತರಿಗೆ ಮನವರಿಕೆ ಮಾಡಿದರು.

ರೈತರಾದ ರಾಮಚಂದ್ರ ಬಡಿಗೇರ, ಕಲ್ಲಪ್ಪ ಮೂಲಿಮನಿ, ಬಸವರಾಜ ಕಲ್ಲೂರ, ಚನ್ನು ಹೊರ್ತಿ, ಅಪ್ಪಣ್ಣ ಮೆಳ್ಳಿಗೇರಿ, ಅಶೋಕ ಸೂಳಿಭಾವಿ, ಬಸನಗೌಡ ಬಿರಾದಾರ, ಸಿದ್ಧನಗೌಡ ಬಿರಾದಾರ, ಮುಕ್ಕಣ್ಣ ಬಿರಾದಾರ, ಶಂಕರಗೌಡ ಬಿರಾದಾರ, ಆರ್‌.ಎನ್‌. ಪಾಟೀಲ, ಸುರೇಶಗೌಡ ಪಾಟೀಲ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.