ನಿಷೇಧದ ಮಧ್ಯೆ ಜಾತ್ರೆ: ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲು
Team Udayavani, Apr 19, 2021, 12:21 PM IST
ವಿಜಯಪುರ: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲಾಡಳಿತ ಜಿಲ್ಲೆಯಲ್ಲಿ ಜಾತ್ರೆಗಳನ್ನು ನಿಷೇಧಿಸಿದೆ. ಆದರೆ ನಿಷೇಧದ ಮಧ್ಯೆ ಜಾತ್ರೆ ನಡೆಸಿದ ಸಿಂದಗಿ ತಾಲೂಕಿನ ಮಲಘಾಣ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಿಂದಗಿ ತಹಶೀಲ್ದಾರ ಸಂಜೀವಕುಮಾರ ದಾಸರ ಆಲಮೇಲ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಮಲಘಾಣ ಜಡೆಶಾಂತಲಿಂಗೇಶ್ವರ ಜಾತ್ರಾ ಕಮಿಟಿ ಹಾಗೂ ಗ್ರಾಮಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನ: ದೇವರ ದೊಡ್ಡ ದರ್ಶನ ಬಲಿ ಉತ್ಸವ