Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ
Team Udayavani, Nov 30, 2023, 3:02 PM IST
ವಿಜಯಪುರ: ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ಪ್ರಕರಣ ಅತ್ಯಂತ ಹೇಯ, ಅಮಾನವೀಯ ಹಾಗೂ ಅಕ್ಷಮ್ಯ ಅಪರಾಧ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂಥ ಹೀನಾಯ ಕೃತ್ಯದಲ್ಲಿ ವೈದ್ಯರು, ಶಾಮೀಲಾದವರು ಯಾರೇ ಇದ್ದರೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ನಾಗರಿಕ ಸಮಾಜ ತಲೆ ತಗ್ಗಿಸುವಂಥ ಕೃತ್ಯ ಎಸಗಿದವರು ಯಾರೇ ಇದ್ದರೂ, ಯಾವುದೇ ಸರ್ಕಾರ ಇದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.
ಭವಿಷ್ಯದಲ್ಲಿ ಇಂಥ ಕೃತ್ಯಗಳು ಜರುಗದಂತೆ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಅಲ್ಲದೇ ಸಮಾಜದಲ್ಲಿ ಹೆಣ್ಣು ಭ್ರೂಣ ಹತ್ಯೆ, ಮಕ್ಕಳ ಮಾರಾಟ ಪ್ರಕರಣಗಳು ನಡೆಯದಂತೆ ಜಾಗೃತಿ ಮೂಡಿಸಲು ವಿಶೇಷ ತಂಡ ರಚಿಸಲಾಗುತ್ತದೆ ಎಂದರು.
12ನೇ ಶತಮಾನದಲ್ಲಿ ಬಸವಾದಿ ಶರಣರು ಗಂಡು-ಹೆಣ್ಣು ಎಂಬ ಭೇದಭಾವ ಅಳಿಸಿ ಹಾಕಿದ್ದರೂ. ನಾಗರಿಕ ಸಮಾಜ ತಲೆತಗ್ಗಿಸುವಂಥ ಈ ಕೃತ್ಯ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಗಂಡು ಮಕ್ಕಳ ಮೇಲಿನ ಮೋಹದಿಂದ ಸ್ತ್ರೀ ವಿರೋಧಿ ಮನಸ್ಥಿತಿಯಿಂದ ಸಮಾಜ ಹೊರಬರಬೇಕು. ವೃದ್ಧಾಪ್ಯದಲ್ಲಿ ಹೆತ್ತವರನ್ನು ಪಾಲನೆ ಪೋಷಣೆ ಮಾಡುವಲ್ಲಿ ಹೆಣ್ಣುಮಕ್ಕಳೇ ವಿಶೇಷ ಕಾಳಜಿ ತೋರುತ್ತಾರೆ ಎಂದರು.
3-4 ರಾಜ್ಯಗಳಲ್ಲಿ ಕಾಂಗ್ರೆಸ್: ದೇಶದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಟ 3-4 ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಸಂಜೆ ವೇಳೆಗೆ ಎಕ್ಸಿಟ್ ಪೋಲ್ ಬರಲಿದೆ, ಕಾಯಿರಿ ಎಂದ ಅವರು ದೇಶದಲ್ಲಿ ಪ್ರಧಾನಿ ಮೋದಿ ವರ್ಚಸ್ಸು ಕಡಿಮೆಯಾಗಿದೆ ಎಂಬುದನ್ನು ಮಾಧ್ಯಮದವರೇ ಹೇಳುತ್ತಿದ್ದೀರಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ