ಎಸ್ಟಿ ಮೀಸಲಾತಿಗೆ ಶೀಘ್ರ ವಿಶ್ವ ಕರ್ಮರ ಹೋರಾಟ
Team Udayavani, May 29, 2022, 3:00 PM IST
ನಾಲತವಾಡ: ವಿಶ್ವಕರ್ಮ ಸಮಾಜದ ಮಕ್ಕಳು ಕೂಡ ಶಿಕ್ಷಣವಂತರಾದಾಗ ಮಾತ್ರ ಸಮಾಜ ಏಳ್ಗೆಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಹೇಳಿದರು.
ಸ್ಥಳೀಯ ಕಾಳಮ್ಮ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಸಮಾಜದ ಸಭೆಯಲ್ಲಿ ಮಾತನಾಡಿದ ಅವರು, ಇವತ್ತು ಸಮ್ಮ ಸಮಾಜವನ್ನು ಎಲ್ಲ ಕ್ಷೇತ್ರದಲ್ಲಿ ತುಳಿಯುವ ಕೆಲಸ ನಡೆಯುತ್ತಿದೆ. ನಮ್ಮ ಸಮಾಜದ ಏಳ್ಗೆಯಾಗಬೇಕಾದರೆ ನಾವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಖೀಯವಾಗಿ ಮುಂದೆ ಬರಬೇಕು ಎಂದರು.
ನಮ್ಮ ಮಕ್ಕಳನ್ನು ಉನ್ನತ ವಿದ್ಯಾಭ್ಯಾಸ ನೀಡಿ ದೊಡ್ಡ ದೊಡ್ಡ ಅಧಿಕಾಯನ್ನಾಗಿ ಮಾಡುವ ಗುರಿ ನಾವೆಲ್ಲರೂ ಹೊಂದಬೇಕಾಗಿದೆ. ಜಗತ್ತು ಅತಿ ವೇಗವಾಗಿ ಸಾಗುತ್ತಿದೆ. ನಮ್ಮ ಸಮಾಜದ ಬಾಂಧವರು ಕೂಡ ಜಗತ್ತಿನ ಜೊತೆ ಜೊತೆಯಲ್ಲಿ ಸಾಗಬೇಕು. ನಮ್ಮ ಮಕ್ಕಳನ್ನು ನಮ್ಮಂತಯೇ ಕಾರ್ಮಿಕರನ್ನಾಗಿ ಮಾಡದೇ ಅವರನ್ನು ಸಮಾಜದಲ್ಲಿ ದೊಡ್ಡ ವ್ಯಕ್ತಿಯನ್ನಾಗಿ ಮಾಡಬೇಕು ಎಂದರು.
ವಿಶ್ವಕರ್ಮ ಸಮಾಜದ ಈಗಾಗಲೆ 2ಎ ಮೀಸಲಾತಿ ಹೊಂದಿದೆ. ಆದರೆ ಬಹುಸಂಖ್ಯಾತರ ಜೊತೆಯಲ್ಲಿ ನಮಗೆ ಈ ಮೀಸಲಾತಿಯ ಲಾಭ ದೊರಕುತ್ತಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡಬೇಕೆಂದು ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಎಲ್ಲ ಬಾಂಧವರು ಕೂಡ ಒಗ್ಗಟ್ಟಾಗಿ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕಾಗಿದೆ. ನಾವು ರಾಜಕೀಯವಾಗಿ ಹಿಂದೆ ಉಳಿದಿರುವ ಕಾರಣ ನಮಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಒಂದು ವೇಳೆ ನಾವು ರಾಜಕೀಯವಾಗಿ ಬೆಳೆದರು ನಮ್ಮ ಹಕ್ಕನ್ನು ನಾವು ಪಡೆದುಕೊಳ್ಳಬಹುದು ಎಂದರು.
ಪ್ರಾಸ್ತಾವಿಕವಾಗಿ ನಾರಾಯಣ ಮಾಯಾಚಾರಿ ಮಾತನಾಡಿ, ರಾಜ್ಯದಲ್ಲಿ ವಿಶ್ವಕರ್ಮ ಸಮಾಜವನ್ನು ಪರಿಚಯಿಸಿದ್ದು ಯಾರಾದರು ಇದ್ದರೆ ಅವರು ಕೆ.ಪಿ. ನಂಜುಂಡಿ. ಅನೇಕ ವರ್ಷಗಳಿಂದ ಸಮಾಜದ ಏಳ್ಗೆಗಾಗಿ ಕೆ.ಪಿ. ನಂಜುಂಡಿಯವರು ಹೋರಾಟ ಮಾಡಿದ್ದಾರೆ. ಸಮಾಜದ ಕಟ್ಟ ಕಡೆ ವ್ಯಕ್ತಿಗೂ ಕೂಡ ಸರಕಾರದ ಸೌಲಭ್ಯ ಮುಟ್ಟಿಸುವ ಪ್ರಯತ್ನವನ್ನು ನಂಜುಂಡಿಯವರು ಮಾಡುತಿದ್ದಾರೆ ಎಂದರು.
ಸಮಾಜದಲ್ಲಿ ಸ್ವಲ್ಪ ಅಸಮಾಧಾನ ವಾತಾವರಣದಿಂದ ಸಂಘಟನೆಯಿಂದ ದೂರು ಸರಿದಿದ್ದರು. ಎಲ್ಲರೂ ಅವರಿಗೆ ಸಮಾಜದ ಏಳ್ಗೆಗಾಗಿ ತಾವು ಸಂಘಟನೆಯನ್ನು ಬಲಪಡಿಸಬೇಕು ಎಂದು ಮನವಿ ಮಾಡಿದಾಗ ಮತ್ತೇ ಅವರು ವಿಶ್ವಕರ್ಮ ಸಮಾಜ ಒಗ್ಗೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಎಸ್ಟಿ ಮೀಸಲಾತಿಗಾಗಿ ಸರಕಾರಕ್ಕೆ ಒತ್ತಾಯಿಸಬೇಕು ಎಂದು ಕೆ.ಪಿ.ನಂಜುಂಡಿ ಅವರಿಗೆ ಮನವಿ ಮಾಡಿದರು.
ಈ ವೇಳೆ ಅಖೀಲ ಕರ್ನಾಟಕ ವಿಶ್ವಕರ್ಮ ಯುವ ಘಟಕ ಮಹಾಸಭಾ ರಾಜ್ಯಾಧ್ಯಕ್ಷ ಶ್ರೀನಿವಾಸ ಮಳವಳ್ಳಿ, ವಿಶ್ವಕರ್ಮ ಮಹಾಸಭಾ ವಿಜಯಪುರ ಜಿಲ್ಲಾಧ್ಯಕ್ಷ ಬಾಳು ಗಿರಗಾಂವಕರ, ವಿಶ್ವಕರ್ಮ ಮಹಾಸಭಾ ಯಾದಗಿರಿ ಜಿಲ್ಲಾಧ್ಯಕ್ಷ ಆನಂದ ಲಕ್ಷ್ಮೀಪುರ, ವಿಶ್ವಕರ್ಮ ಮಹಾಸಭಾ ತಾಲೂಕಾಧ್ಯಕ್ಷ ಮಲ್ಲಣ್ಣ ಪತ್ತಾರ (ತಾರನಾಳ), ಮುದ್ದೇಬಿಹಾಳ ಪುರಸಭೆ ಅಧ್ಯಕ್ಷೆ ಸಹನಾ ಬಡಿಗೇರ ಹಾಗೂ ನಾಲತವಾಡದ ವಿಶ್ವಕರ್ಮ ಸಮಾಜದ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ