ವಿಮಲಾಬಾಯಿಗೆ ಅಂತಿಮ ವಿದಾಯ
Team Udayavani, Jul 24, 2018, 2:31 PM IST
ನಾಲತವಾಡ: ಅನಾರೋಗ್ಯದಿಂದ ರವಿವಾರ ವಿಜಯಪುರದಲ್ಲಿ ನಿಧನರಾಗಿದ್ದ ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ ಅವರ ಅಂತ್ಯಕ್ರಿಯೆ ಸೋಮವಾರ ಪಟ್ಟಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.
ಅಂತ್ಯಕ್ರಿಯೆಗೂ ಮುನ್ನ ಸಚಿವರು, ಶಾಸಕರು, ಅಪಾರ ಅಭಿಮಾನಿಗಳು ದೇಶಮುಖರ ಅಂತಿಮ ದರ್ಶನ ಪಡೆದರು. ಜನಸಮೂಹದ ಮಧ್ಯೆ ಪಾರ್ಥೀವ ಶರೀರದ ಮೆರವಣಿಗೆ ನಡೆಸಿ ವೀರೇಶ್ವರ ವಿದ್ಯಾ ಸಂಸ್ಥೆ ಆವರಣದಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ಪೂರೈಸಿ ಅಂತ್ಯಸಂಸ್ಕಾರ ಮಾಡಲಾಯಿತು.
ಸಚಿವರುಗಳಾದ ಶಿವಾನಂದ ಪಾಟೀಲ, ಎಂ.ಸಿ. ಮನಗೂಳಿ, ಶಾಸಕ ಎ.ಎಸ್. ಪಾಟೀಲ ನಡಹಳ್ಳಿ, ಮಾಜಿ ಸಚಿವ ಸಿ.ಎಸ್. ನಾಡಗೌಡ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಇಳಕ್ಲದ ಗುರುಮಹಾಂತ ಮಹಾಸ್ವಾಮಿಗಳು, ತಹಶೀಲ್ದಾರ್ ಎಂ.ಎ.ಎಸ್. ಬಾಗವಾನ, ಡಿವೈಎಸ್ಪಿ ಎಸ್.ಮಹೇಶ್ವರ, ಎಂ.ಎಸ್. ಪಾಟೀಲ ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
ನಂದಿನಿ ದೇಶಮುಖ, ಗುರುಪ್ರಸಾದ ದೇಶಮುಖ, ಶಂಕರರಾವ್ ದೇಶಮುಖ, ಲೊಹಿತ್ ದೇಶಮುಖ, ಅಮರ್ ದೇಶಮುಖ, ಮುನ್ನಾಧಣಿ ನಾಡಗೌಡ, ನಾನಾಸಾಹೇಬ್ ದೇಶಮುಖ, ಪಪಂ ಅಧ್ಯಕ್ಷ ಪೃಥ್ವಿರಾಜ್ ನಾಡಗೌಡ, ಸೋಮಶೇಖರ ನಾಡಗೌಡ, ರಾಹುಲ್ ನಾಡಗೌಡ, ಚಿನ್ನು ನಾಡಗೌಡ, ಗದಗ ಕಪ್ಪದಗುಡ್ಡದ ಶಿವಕುಮಾರ ಮಹಾಸ್ವಾಮಿಗಳು, ಸುರೇಶ ಹಿರೇಮಠ, ಸೋಮಶೇಖರ ನಾಡಗೌಡ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!