ಕೊನೆಗೂ ಇಂದಿರಾ ಕ್ಯಾಂಟೀನ್‌ಗೆ ಚಾಲನೆ


Team Udayavani, Dec 8, 2018, 12:28 PM IST

vij-1.jpg

ವಿಜಯಪುರ: ವಿಜಯಪುರ ಮಹಾನಗರದ ಜನರಿಗೆ ಕೊನೆಗೂ ಅಗ್ಗದ ದರದಲ್ಲಿ ಬಡವರಿಗೆ ಊಟ-ಉಪಾಹಾರ ನೀಡುವ ಇಂದಿರಾ ಕ್ಯಾಂಟೀನ್‌ಗೆ ಶುಕ್ರವಾರ ಮಹಾನಗರ ಪಾಲಿಕೆ ಆವರಣದಲ್ಲಿ ಚಾಲನೆ ದೊರೆತಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರು ಮಹಾನಗರ ಪಾಲಿಕೆ ಬಳಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದರು.

ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಡಾ| ದೇವಾನಂದ ಚವ್ಹಾಣ, ಮೇಯರ್‌ ಶ್ರೀದೇವಿ ಲೋಗಾಂವಿ, ಉಪ ಮೇಯರ್‌ ಗೋಪಾಲ ಘಟಕಾಂಬಳೆ, ಆಯುಕ್ತ ಔದ್ರಾಮ ಅವರು ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮೊದಲ ದಿನದ ಮೊದಲ ಉಪಾಹಾರ ಸೇವಿಸಿದರು. ಇಡ್ಲಿ-ಸಾಂಬಾರ್‌, ಕೇಸರಿ ಬಾತ್‌ ಸವಿದ ಜನಪ್ರತನಿಧಿಗಳು ಉಪಾಹಾರ ಸೇವಿಸಿ ಗುಣಮಟ್ಟದ ಕುರಿತು ಸಂತೃಪ್ತಿ ವ್ಯಕ್ತಪಡಿಸಿದರು.

ನಗರದಲ್ಲಿ ಸೊಲ್ಲಾಪುರ ರಸ್ತೆ ಕೈಗಾರಿಕಾ ತರಬೇತಿ ಕೇಂದ್ರದ ಆವರಣ, ಎಪಿಎಂಸಿ ಆವರಣ, ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ತೆರೆಯಲಾಗಿದೆ. ಈ ಎಲ್ಲ ಕ್ಯಾಂಟೀನ್‌ ಗಳಲ್ಲಿ ಇನ್ನು 5 ರೂ.ಗೆ ಉಪಾಹಾರ, 10 ರೂ.ಗೆ ಮಧ್ಯಾಹ್ನ ಹಾಗೂ ರಾತ್ರಿ ಊಟ ನೀಡುವ ವ್ಯವಸ್ಥೆಗೆ ಇದೆ. ಪ್ರತಿ ಕ್ಯಾಂಟೀನ್‌ನಲ್ಲಿ ತಲಾ 500 ಜನರಿಗೆ ಊಟ-ಉಪಾಹಾರದ ವ್ಯವಸ್ಥೆ ಇರಲಿದೆ. 

ಕಲ್ಕೂರ ರೆಫ್ರೀಜ್‌ರೇಷನ್‌ ಮತ್ತು ಕಿಚನ್‌ ಇ ಪ್ರಕ್ಯೂರ್‌ವೆುಂಟ್‌ ಪ್ರೈ ಲಿಮಿಟೆಡ್‌ ಹಾಗೂ ಕುಮಾರ ಇ-ಪ್ರಕ್ಯೂರ್‌ವೆುಂಟ್‌ ಇಂಡಿಯಾ ಪ್ರೈ ಲಿಮಿಟೆಡ್‌ ಕಂಪನಿಗಳು ಇಂದಿರಾ ಕ್ಯಾಂಟೀನ್‌ನಲ್ಲಿ ಬೃಹತ್‌ ಪ್ರೇಷರ್‌ ಕುಕ್ಕರ್‌, ಸ್ಟೀಮರ್‌, ಮಿಕ್ಸರ್‌ ಸೇರಿದಂತೆ ಪೂರಕವಾದ ಯಂತ್ರಗಳನ್ನು ಅಳವಡಿಸಿವೆ. ನಗರದಲ್ಲಿನ ಇಂದಿರಾ ಕ್ಯಾಂಟೀನ್‌ನ ಪ್ರತಿ ಕಟ್ಟಡಕ್ಕೆ 28 ಲಕ್ಷ ರೂ. ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ 48 ಲಕ್ಷ ರೂ. ವೆಚ್ಚ ಮಾಡಲಾಗಿದೆ.

ಆಹಾರ ಪೂರೈಕೆಗೆ ಪ್ರತಿ ವರ್ಷ 22,26,500 ರೂ. ವೆಚ್ಚದ ಅಂದಾಜಿದೆ. ಇದರಲ್ಲಿ ಶೇ. 30ರಷ್ಟು ಕಾರ್ಮಿಕ ಇಲಾಖೆ ಹಾಗೂ ಉಳಿದ ಮೊತ್ತವನ್ನು ಮಹಾನಗರ ಪಾಲಿಕೆ ಅನುದಾನ ಅಥವಾ ಎಸ್‌ ಎಫ್‌ಸಿ ಅನುದಾನದಡಿ ಒದಗಿಸುವ ಚಿಂತನೆ ನಡೆದಿದೆ ಎಂದು ಪಾಲಿಕೆ ಆಯುಕ್ತ ಡಾ| ಔದ್ರಾಮ
ತಾಂತ್ರಿಕ ವಿವರಣೆ ನೀಡಿದರು. 

ಊಟ-ಉಪಾಹಾರದ ಮೆನು: ವಾರದ ಏಳು ದಿನವೂ ಒಂದೊಂದು ಉಪಾಹಾರ ಹಾಗೂ ವೈವಿಧ್ಯಮ ಊಟದ ಮೆನು ಇರಲಿದೆ. ಉಪಾಹಾರಕ್ಕೆ ಸೋಮವಾರ ಪುಳಿಯೋಗರೆ, ಮಂಗಳವಾರ ಖಾರಾಬಾತ್‌, ಬುಧವಾರ ಪೊಂಗಲ್‌, ಗುರುವಾರ ಕಿಚಡಿ, ಶುಕ್ರವಾರ ಚಿತ್ರಾನ್ನ, ಶನಿವಾರ ವಾಂಗಿಬಾತ್‌, ರವಿವಾರ ಕೇಸರಿಬಾತ್‌ ಇರಲಿದೆ. ಅದರಂತೆ ಮಧ್ಯಾಹ್ನ ಹಾಗೂ ರಾತ್ರಿ ಅನ್ನ, ತರಕಾರಿ, ಸಾಂಬಾರ್‌, ಮೊಸರನ್ನ ವಾರದ ಏಳು ದಿನಗಳು ಲಭ್ಯವಾಗುತ್ತಿದ್ದು, ಇದರೊಂದಿಗೆ ಆಯಾ ವಾರಕ್ಕೆ ನಿಗದಿಗೊಳಿಸಲಾಗಿರುವ ಮೆನುವಿನಂತೆ ಬೇರೆ ಬೇರೆ ಉಪಾಹಾರ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.