ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು
Team Udayavani, Oct 23, 2017, 12:01 PM IST
ತಾಳಿಕೋಟೆ: ಬಡವರ, ದೀನ ದಲಿತರ, ಅಲ್ಪಸಂಖ್ಯಾತರ ಮತ್ತು ನೊಂದವರ ಕಣ್ಣೀರು ಒರಿಸುವ ಕಾರ್ಯವನ್ನು ಶಾಸಕ ಎ.ಎಸ್. ಪಾಟೀಲ ಮಾಡುತ್ತಿದ್ದಾರೆ ಎಂದು ಜಿಪಂ ಸದಸ್ಯ ಬಸನಗೌಡ ವಣಕ್ಯಾಳ ಹೇಳಿದರು. ರವಿವಾರ ಪಟ್ಟಣದ ಸಗರಪೇಟ ಬಡಾವಣೆಯಲ್ಲಿ ಎ.ಎಸ್. ಪಾಟೀಲ ನಡಹಳ್ಳಿ ಗೆಳೆಯರ ವತಿಯಿಂದ ದೀಪಾ ಧಡೇದ ಎಂಬ ಬಡ ಮಹಿಳೆ ಶಸ್ತ್ರ ಚಿಕಿತ್ಸೆಗೆ 20 ಸಾವಿರ ರೂ. ನೀಡಿ ಮಾತನಾಡಿದ ಅವರು, ದಡೇಡ ಕುಟುಂಬದ ಮಹಿಳೆಗೆ ಶಸ್ತ್ರ ಚಿಕಿತ್ಸೆ ಜೊತೆಗೆ ವೈದ್ಯಕೀಯ ಸೌಲಭ್ಯ ಉಚಿತವಾಗಿ ಒದಗಿಸಿದ್ದಾರೆ ಎಂದರು.
ಜಿಲ್ಲೆಯ ವಿವಿಧಡೆ ಸಾಮೂಹಿಕ ವಿವಾಹ ಮೂಲಕ ಸಾವಿರಾರು ಮಹಿಳೆಯರಿಗೆ ಕಂಕಣಭಾಗ್ಯ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ಮತ್ತು ಬೂದಿಹಾಳ-ಫಿರಾಪುರ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ನಡಹಳ್ಳಿ ಅವರು ಹೋರಾಟಗಳನ್ನು ಮಾಡಿ ಯಶಸ್ಸು ಕಂಡಿದ್ದಾರೆಂದರು. ಸತೀಶ ಸರಶೆಟ್ಟಿ ಮಾತನಾಡಿ, ಮಹಿಳೆ ದೀಪಾ ಧಡೇದ ಅವರು ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಮುಂದಿನ ದಿನಗಳಲ್ಲಿ ತಮ್ಮ ಕುಟುಂಬವನ್ನು ಈ ಮಹಿಳೆ ಸಮರ್ಥವಾಗಿ ನಿಭಾಯಿಸಿ ಸಮಾಜದ ಕೀರ್ತಿ ಹೆಚ್ಚಿಸಲಿ ಎಂದು ಹಾರೈಸಿದರು.
ವಾಸುದೇವ ಹೆಬಸೂರ, ಅರುಣ ದಢೇದ, ರಾಮನಗೌಡ ಬಾಗೇವಾಡಿ, ಅಮರಣ್ಣ ಗೋನಾಳ, ವಿರೇಶ ಬಾಗೇವಾಡಿ, ಅಶೋಕ ಚಿನಗುಡಿ, ಬಸವರಾಜ ಹೊಟ್ಟಿ, ಮಲ್ಲು ಭಟ್ಟ, ಬಾಬು ಕಾರಜೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್