ಕೂಡಗಿ ಎನ್.ಟಿ.ಪಿ.ಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅಗ್ನಿ ದುರಂತ: ತಪ್ಪಿದ ಅನಾಹುತ
Team Udayavani, Jun 10, 2022, 1:20 PM IST
ವಿಜಯಪುರ: ಜಿಲ್ಲೆಯ ಕೇಂದ್ರ ಸರ್ಕಾರಿ ಒಡೆತನದ ಕೂಡಗಿ ಎನ್.ಟಿ.ಪಿ.ಸಿ. ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ, ಅಪಾಯ ಸಂಭವಿಸಿಲ್ಲ.
ಸ್ಥಾವರದ ಟಿಪಿ-2 ಕಲ್ಲಿದ್ದಲು ಘಟಕದಲ್ಲಿ ಸ್ಫೋಟವಾಗಿದೆ. ಕಲ್ಲಿದ್ದಲು ಸಾಗಾಣಿಕೆಯ ಯಂತ್ರ ಚಾಲನೆಯಲ್ಲಿ ಇರುವಾಗ ಬೇರಿಂಗ್ ತಿರುಗುತ್ತ ಶಾಖ ಉತ್ಪದನೆಯಿಂದ ರಬ್ಬರ್ ಬೆಲ್ಟ್ ಗೆ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ.
ಶುಕ್ರವಾರ ಬೆಳಿಗ್ಗೆ 8.40 ರ ಸುಮಾರಿಗೆ ಆಕಸ್ಮಿಕ ಅವಘಡ ಸಂಭವಿಸಿದ್ದು, ಸುದೈವಶಾತ್ ಸ್ಥಳದಲ್ಲಿದ್ದ ಯಾವ ಕಾರ್ಮಿಕರಿಗೂ ಹಾನಿ ಸಂಭವಿಸಿಲ್ಲ.
ದುರಂತ ನಡೆದು ಗಂಟೆ ಮೇಲಾದರೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿಯೇ ಇರಲಿಲ್ಲ. ಹೀಗಾಗಿ ಕೇಂದ್ರ ಸರ್ಕಾರಿ ಒಡೆತನದ ಬೃಹತ್ ವಿದ್ಯುತ್ ಉತ್ಪನ್ನ ಘಟಕದಲ್ಲಿ ಸುರಕ್ಷತೆಯ ಪ್ರಶ್ನೆ ಎದ್ದಿದೆ.
ಇದನ್ನೂ ಓದಿ:ಅರೆಹಳ್ಳ ಅಣೆಕಟ್ಟು ಕಾಮಗಾರಿ ಮುಕ್ತಾಯ ಹಂತಕ್ಕೆ : ಕೇಶ್ವಾರ
ಕೂಡಗಿ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ ಕಾರ್ಯನಿರ್ವಹಣೆ ಮಾಡುವ ತುರ್ತು ಸ್ಪಂದನಾ ತಂಡ (ಕ್ವಿಕ್ ರೆಸ್ಪಾನ್ಸ್ ಟೀಮ್) ಕೆಲಸವೇನು? ಕ್ಯೂ.ಆರ್.ಟಿ. ವಿಭಾಗ ನಿಷ್ಕ್ರಿಯಗೊಂಡಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.
ಅಗ್ನಿ ದುರಂತ ಸಂಭವಿಸುತ್ತಲೇ ಸ್ಥಾವರ ವ್ಯಾಪ್ತಿಯ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?