ಚಲಿಸುತ್ತಿದ್ದ ಬಸ್ನಲ್ಲಿ ಬೆಂಕಿ:35 ಪ್ರಯಾಣಿಕರು ಪಾರು
Team Udayavani, Feb 25, 2019, 10:04 AM IST
ಆಲಮಟ್ಟಿ: ವಿಜಯಪುರದಿಂದ ಬೀಳಗಿ ಮಾರ್ಗವಾಗಿ ಬಾಗಲಕೋಟೆಗೆ ಸಂಚರಿಸುತ್ತಿದ್ದ ಬೀಳಗಿ ಘಟಕದ ಸಾರಿಗೆ ಸಂಸ್ಥೆ ಬಸ್ಗೆ ಆಕಸ್ಮಿಕ ಬೆಂಕಿ ತಗುಲಿದ್ದು, 35 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕೊಲ್ಹಾರ ಯುಕೆಪಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಸ್ನ ಡೀಸೆಲ್ ಟ್ಯಾಂಕ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೆ.ಎಸ್. ಚೂರಿ ಮತ್ತು ನಿರ್ವಾಹಕ ವಿ.ಎಂ. ಬಿರಾದಾರ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಪ್ರಯಾಣಿಕರು ಗಾಬರಿಯಿಂದ ಕೆಳಗಿಳಿಯುವ ಭರದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ಪತ್ರಿಕೆಗೆ ತಿಳಿಸಿದ್ದಾರೆ.
ಕೊಲ್ಹಾರ ಸಮೀಪ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಬೆಂಕಿ ನಂದಿಸಿದ್ದಾರೆ. ಎಲ್ಲ ಪ್ರಯಾಣಿಕರನ್ನು ಬೇರೆ ಬಸ್ಗಳ ಮೂಲಕ ಕಳುಹಿಸಲಾಗಿದೆ. ಸಾರಿಗೆ ಸಂಸ್ಥೆ ಹಿರಿಯ ಸಿಬ್ಬಂದಿ ಘಟನೆ ನಡೆದ ಸ್ಥಳಕ್ಕೆ ಬರದೆ, ಬೆಂಕಿ ಹತ್ತಿಕೊಂಡ ಬಸ್ನ್ನು ಬೀಳಗಿ ಘಟಕಕ್ಕೆ ಸಾಗಿಸಿದ್ದಾರೆ. ಈ ತರಾತುರಿ ಹಿಂದೆ ಸಿಬ್ಬಂದಿಗಳ ವೈಫಲ್ಯ ಎದ್ದು ಕಾಣುತ್ತಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.
ಬೆಳಗ್ಗೆ ಬಸ್ ಹೊರಡುವಾಗ ಸಂಪೂರ್ಣ ಪರಿಶೀಲಿಸಿ ರಸ್ತೆಗೆ ಇಳಿಸಲಾಗಿದೆ. ಆದರೂ ಕೂಡ ಘಟನೆ ಜರುಗಿದೆ. ಪ್ರಯಾಣಿಕರಿಗೆ ಯಾವುದೆ ತೊಂದರೆಯಾಗಿಲ್ಲ. ಘಟನೆಗೆ ಕುರಿತಂತೆ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಎಸ್.ಆರ್. ಒಡೆಯರ, ಬೀಳಗಿ ಸಾರಿಗೆ ಘಟಕ ವ್ಯವಸ್ಥಾಪಕ
ಬಸ್ನಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಪ್ರಯಾಣಿಕರು ಕೂಗಿಕೊಳ್ಳುತ್ತ ಇಳಿದು ಓಡಿ ಹೋಗುತ್ತಿರುವುದನ್ನು ಕಂಡು ನಾವು ಹೋಗಿ ನೋಡಿದಾಗ ಬೆಂಕಿ ಹತ್ತಿರುವುದು ಗಮನಕ್ಕೆ ಬಂತು. ತಕ್ಷಣ ನೀರು ಹಾಕಿ ಬೆಂಕಿ ನಂದಿಸಿದೆವು.
ಮೈನುದ್ದೀನ್ ಗಿರಗಾಂವಿ, ಬೆಂಕಿ ನಂದಿಸಿದ ವ್ಯಕ್ತಿ, ಘಟನೆ ಪ್ರತ್ಯಕ್ಷದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್