ಭೀಮಾ ತೀರದಲ್ಲಿ ಗುಂಡಿನ ಸದ್ದು: ಹಂತಕ ಶಶಿಧರ ಮೇಲೆ ಫೈರಿಂಗ್
Team Udayavani, Mar 10, 2018, 8:21 PM IST
ವಿಜಯಪುರ: ಜಿಲ್ಲೆಯ ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಅಕ್ರಮ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಆರೋಪಿ ಶಶಿ ಮುಂಡೆವಾಡಿ ಪೋಲಿಸರ ಕೈಗೆ ಚೂರಿ ಇರಿದ ಕಾರಣ ಪಿಎಸ್ಐ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಅರೋಪಿಯ ಕಾಲಿಗೆ ಗುಂಡುತಾಗಿ ಗಾಯಗೊಂಡಿರುವ ಘಟನೆ ಜರುಗಿದೆ.
ಚಡಚಣ ಬಳಿಯ ಬತಡೋಲ ಬಳಿ ಆರೋಪಿ ಶಶಿ ಮುಂಡೆವಾಡಿ ಅಕ್ರಮ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನೇಸಿದ ಚಡಚಣ ಪಿಎಸ್ಐ ಗೋಪಾಲ ಹಳ್ಳೂರ ಹಾಗೂ ಪೇದೆ ಮಾದರ ಮೇಲೆ ಚಾಕುವಿನಿಂದ ಆರೋಪಿ ಶಶಿ ದಾಳಿ ನಡೆಸಿದಾಗ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ, ಅರೋಪಿ ಕಾಲಿಗೆ ಫೈರ್ ಮಾಡಿದಾಗ ಗಾಯಗೊಂಡಿದ್ದಾನೆ. ಕೂಡಲೆ ಗಾಯಾಳು ಅರೋಪಿ ಹಾಗೂ ಪೋಲಿಸರನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಪಿಎಸ್ಐ ಗೋಪಾಲ ಹಾಗೂ ಪೇದೆ ಅರವಿಂದ ಮಾದರ ಇವರ ಕೈಗೆ ಗಾಯಗಳಾಗಿವೆ. ಘಟನೆಯ ಕುರಿತು ಚಡಚಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಎಎಸ್ಪಿ ಶಿವಕುಮಾರ ಗುಣಾರಿ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸ್ ಗುಂಡೇಟಿನಿಂದ ಗಾಯಗೊಂಡಿರುವ ಶಶಿಧರ ಮುಂಡೆವಾಡಿ ಪತ್ರಕರ್ತ ಸುನಿಲ ಹೆಗ್ಗರವಳ್ಳಿ ಹತ್ಯೆಗೆ ಮತ್ತೋರ್ವ ಪತ್ರಕರ್ತ ರವಿ ಬೆಳಗೆರೆ ಯಿಂದ ಸುಪಾರಿ ಪಡೆದ ಆರೋಪ ಎದುರಿಸುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!