ಪ್ರಥಮ ಚಿಕಿತ್ಸೆ ಜ್ಞಾನ ಅವಶ್ಯ


Team Udayavani, Feb 24, 2019, 9:26 AM IST

vij-2.jpg

ಸಿಂದಗಿ: ಪ್ರಥಮ ಚಿಕಿತ್ಸೆ ಹೆಚ್ಚಿನ ಅನಾಹುತ ತಪ್ಪಿಸುವ ಕೆಲಸ ಮಾಡುತ್ತದೆ ಎಂದು ಸ್ಥಳೀಯ ಭಾವಿಕಟ್ಟಿ ಆಸ್ಪತ್ರೆ ವೈದ್ಯ ಡಾ| ಸಂಗಮೇಶ ಪಾಟೀಲ ಹೇಳಿದರು.

ಶನಿವಾರ ಸಿ.ಎಂ. ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಭಾಭವನದಲ್ಲಿ ಮಹಾವಿದ್ಯಾಲಯದ ಯುವ ರೆಡ್‌ಕ್ರಾಸ್‌ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ತಾಲೂಕು ಶಾಖೆ, ಜೆ.ಎಚ್‌. ಪಟೇಲ್‌ ಶಿಕ್ಷಣ ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪ್ರಥಮ ಚಿಕಿತ್ಸೆ ಕುರಿತು ಅವರು ಉಪನ್ಯಾಸ ನೀಡಿದರು.

ಪ್ರಥಮ ಚಿಕಿತ್ಸೆ ತರಬೇತಿ ಎಲ್ಲರೂ ಪಡೆಯಬೇಕಾಗಿರುವುದು ಅವಶ್ಯವಾಗಿದೆ. ಪ್ರಥಮ ಚಿಕಿತ್ಸೆ ತರಬೇತಿ ಪಡೆದ ವ್ಯಕ್ತಿಗಳು ರೋಗಿಗೆ ಅಥವಾ ಗಾಯಾಳುಗಳಿಗೆ ಸರಿಯಾದ ವೈದ್ಯಕೀಯ ಪ್ರಥಮ ಚಿಕಿತ್ಸೆ ನೀಡುತ್ತಾರೆ. ಒಂದು ಸಂದರ್ಭದಲ್ಲಿ ಇದು ಸರಳ ಚಿಕಿತ್ಸೆಯಾಗಿರುತ್ತದೆ. ಕೆಲ ಸಂದರ್ಭದಲ್ಲಿ ಜೀವರಕ್ಷಕ ತಂತ್ರವಾಗಿರುತ್ತದೆ ಎಂದರು.

ಯುದ್ಧ ಭೂಮಿಯಲ್ಲಿ ಭಯಾನಕತೆ ಕಂಡು ಗಾಯಾಳು ಯೋಧರಿಗೆ ಚಿಕಿತ್ಸೆ ನೀಡಲು ಹೆನ್ರಿ ಡ್ಯುನಾಂಟ್‌ ಅವರು ಪ್ರಾರಂಭಿಸಿದ ರೆಡ್‌ಕ್ರಾಸ್‌ ಸಂಸ್ಥೆಯೊಂದಿಗೆ ಪ್ರಥಮ ಚಿಕಿತ್ಸೆ ಪ್ರಾರಂಭವಾಯಿತು. ಯುದ್ಧ ಭೂಮಿಯಲ್ಲಿ ರೆಡ್‌ಕ್ರಾಸ್‌ ಸಂಸ್ಥೆ ಗಾಯಾಳು ಯೋಧರಿಗೆ ಪ್ರಥಮ ಚಿಕಿತ್ಸೆ ಮೂಲಕ ವೈದ್ಯಕೀಯ ಚಿಕಿತ್ಸೆ ನೀಡಿತು ಎಂದು ವಿವರಿಸಿದರು.

ರೋಗಿ ಅಥವಾಗಿ ಅಪಘಾತಕ್ಕಿಡಾದ ವ್ಯಕ್ತಿ ಜೀವ ಉಳಿಸುವುದು, ಆಗಿರುವ ಅವಘಡ ತೀವ್ರವಾಗದಂತೆ ತಡೆಯುವುದು, ಉಂಟಾದ ತೀವ್ರ ರಕ್ತಸ್ರಾವ ತಡೆಗಟ್ಟುವುದು ಪ್ರಥಮ ಚಿಕಿತ್ಸೆ ಉದ್ದೇಶವಾಗಿದೆ ಎಂದರು.

ವಿಶ್ರಾಂತ ಪ್ರಾಚಾರ್ಯ ಬಿ.ಎಂ. ಬಿರಾದಾರ, ಅಧ್ಯಕ್ಷತೆ ವಹಿಸಿ ಜೆ.ಎಚ್‌. ಪಟೇಲ್‌ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಡಾ| ಬಿ.ಎಂ. ಹುರಕಡ್ಲಿ ಮಾತನಾಡಿ, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗಿ ಸಾಮಾಜಿಕ ಸೇವೆ ಸಲ್ಲಿಸಬೇಕು ಎಂದರು.

ಮಹಾವಿದ್ಯಾಲಯದ ಪ್ರಾಧ್ಯಾಪಕ ಎಸ್‌.ಎ. ಕೆರೂಟಗಿ ನೈಸರ್ಗಿಕ ಆಪತ್ತು ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು. ಭಾರತೀಯ ರೆಡ್‌ಕ್ರಾಸ್‌ ತಾಲೂಕು ಶಾಖೆ ಚೇರಮನ್‌ ಬಿ.ಎನ್‌. ಪಾಟೀಲ ಇಬ್ರಾಹಿಂಪುರ ಮಾತನಾಡಿದರು. ಪ್ರಾಧ್ಯಾಪಕ ಡಾ| ಅರವಿಂದ ಮನಗೂಳಿ, ಬಿ.ಎ. ಪಾಟೀಲ, ಡಾ| ಎ.ಬಿ. ಸಿಂದಗಿ, ಡಾ| ಬಿ.ಜಿ. ಪಾಟೀಲ, ಡಾ| ಜೆ.ಜಿ. ಜೋಶಿ, ಎಂ.ಜಿ. ಬಿರಾದಾರ, ಜಿ.ಜಿ. ಕಾಂಬಳೆ, ಶಶಿಕಾಂತ ಹೂಗಾರ, ಬಿ.ಡಿ. ಮಾಸ್ತಿ, ಬಿ.ಜಿ. ಮಠ, ಎಂ.ಎಸ್‌. ಹೊಸಮನಿ, ಎಸ್‌.ಎಸ್‌. ಪಾಟೀಲ, ವಿ.ಜಿ. ಇನಾಮದಾರ, ಶೋಭಾ ಪೂಜಾರಿ, ಪ್ರಕಾಶ ಪೂಜಾರಿ, ಆರ್‌.ಪಿ. ಬಿರಾದಾರ,
ವಿ.ಬಿ. ಪಾಟೀಲ ಇದ್ದರು. ಸಿದ್ದಬಸವ ಕುಂಬಾರ ಸ್ವಾಗತಿಸಿದರು. ಅಶೋಕ ಮಾಲಳ್ಳಿ ನಿರೂಪಿಸಿದರು. ಪದ್ಮಾವತಿ ಮಲ್ಲೇದ ವಂದಿಸಿದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.