ಪಾಠ ಮಾಡೋದು ಬಿಟ್ಟು ಐವರು ಶಿಕ್ಷಕರು ಹೋಗಿದ್ದೆಲ್ಲಿಗೆ ಗೊತ್ತಾ?
Team Udayavani, Jun 20, 2017, 5:51 PM IST
ವಿಜಯಪುರ: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ವಿದ್ಯಾರ್ಥಿಗಳಿಗೆ ಪಾಠ ಮಾಡೋದನ್ನು ಬಿಟ್ಟು ಐದು ಮಂದಿ ಶಿಕ್ಷಕರು ಏಕಾಏಕಿ ಕನ್ನಡದ ರಾಮಾ ರಾಮಾ ರೇ ಚಿತ್ರದ ತೆಲುಗು ಅವತರಣಿಕೆ ಶೂಟಿಂಗ್ ನೋಡಲು ಹೋದ ಘಟನೆ ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದಲ್ಲಿ ನಡೆದಿದೆ.
ಕೊಟ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು ಆರು ಮಂದಿ ಶಿಕ್ಷಕರಿದ್ದರು. ಅದರಲ್ಲಿ ಒಬ್ಬರು ಶಿಕ್ಷಕಿ. ಏತನ್ಮಧ್ಯೆ ಶೂಟಿಂಗ್ ನಡೆಯುತ್ತಿದೆ ಎಂಬ ವಿಚಾರ ಕೇಳಿದ್ದೆ ತಡ ಪಾಠ ಮಾಡೋದನ್ನು ಬಿಟ್ಟು ಶೂಟಿಂಗ್ ನೋಡಲು ಹೋಗಿದ್ದರು. ಅದು ಐದು ಮಂದಿ ಶಿಕ್ಷಕರು! ಒಬ್ಬರು ಶಿಕ್ಷಕಿ ಮಾತ್ರ ಶಾಲೆಯಲ್ಲಿದ್ದರು. ಮಕ್ಕಳು ಶಿಕ್ಷಕರಿಗಾಗಿ ಕಾದು, ಕಾದು ಸುಸ್ತಾಗಿದ್ದರು. ವಿಷಯ ತಿಳಿದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಆದರೆ ಸ್ಥಳಕ್ಕೆ ಶಿಕ್ಷಣ ಇಲಾಖೆಯ ಯಾವುದೇ ಅಧಿಕಾರಿಗಳು ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ