ಗ್ರಾಮೀಣರೇ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ; ವೈದ್ಯ ನಟರಾಜ್‌

ಭಯ ಪಡದೆ ನಿಮ್ಮ ದಿನನಿತ್ಯದ ಆಹಾರ ಸೇವೆನೆ ಬದಲಿಸಿಕೊಳ್ಳಬೇಕು.

Team Udayavani, Apr 21, 2022, 5:55 PM IST

ಗ್ರಾಮೀಣರೇ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ; ವೈದ್ಯ ನಟರಾಜ್‌

ವಿಜಯಪುರ: ಗ್ರಾಮೀಣ ಭಾಗದ ಜನರು ಕೆಲಸದ ಒತ್ತಡದ ನಡುವೆಯೂ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ, ತಪಾಸಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಸಮಸ್ಯೆ ತಿಳಿದು ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸುವೀಕ್ಷಾ ಆಸ್ಪತ್ರೆ ವೈದ್ಯ ನಟರಾಜ್‌ ತಿಳಿಸಿದರು.

ಪಟ್ಟಣ ಸಮೀಪದ ಗೊಡ್ಲುಮುದ್ದೇನಹಳ್ಳಿ ಗ್ರಾಪಂ ವ್ಯಾಪ್ತಿಯ ಎ.ರಂಗನಾಥಪುರ ಗ್ರಾಮದಲ್ಲಿ ಸುವೀಕ್ಷ ಆಸ್ಪತ್ರೆ ಹಾಗೂ ಶ್ರೀ ಚನ್ನರಾಯಸ್ವಾಮಿ ದೇವಾಲಯದ ಟ್ರಸ್ಟ್ ವತಿಯಿಂದ ನಡೆದ ಉಚಿತ ಆರೋಗ್ಯ ತಾಪಸಣೆ ಶಿಬಿರದಲ್ಲಿ ಮಾತನಾಡಿ, ಇಂದಿನ ಆಹಾರ ಪದ್ಧತಿ, ಮಾನಸಿಕ ಒತ್ತಡ ಜೀವನ ಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಇದರಿಂದ ಮಧುಮೇಹ ರಕ್ತದೊತ್ತಡದಂತಹ ಕಾಯಿಲೆಗೆ ಜನರು ಬಹುಬೇಗು ತುತ್ತಾಗುತ್ತಿದ್ದಾರೆ.

ಆರೋಗ್ಯ ತಪಾಸಣೆಗೆ ಒಳಗಾದರೆ ವೈದ್ಯರು ಕಾಯಿಲೆ ಇದೆ ಎಂದು ಹೇಳಿ ಬಿಡುತ್ತಾರೋ ಎಂಬ ಭಯದಿಂದ ಬಹಳಷ್ಟು ಜನರು ತಪಾಸಣೆಗೆ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ರೋಗ ಉಲ್ಬಣಿಸಿದ ನಂತರ ಮರುಗುವ ಪರಿಸ್ಥಿತಿ ಉಂಟಾಗುತ್ತಿದೆ. ಇದು ಮನುಷ್ಯನ ಆರೋಗ್ಯದ ಬೆಳವಣಿಗೆ ಮೇಲೆ ದುಷ್ಟರಿಣಾಮ ಬೀರುತ್ತದೆ ಎಂದರು.

ತರಕಾರಿ, ಹಣ್ಣು ಸೇವಿಸಿ: ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಕನಕ ಸ್ವರೂಪ ನಟರಾಜ್‌ ಮಾತ ನಾಡಿ, ಪ್ರತಿಯೊಬ್ಬರೂ ಭಯ ತೊರೆದು ವೈದ್ಯ ಕೀಯ ತಪಾಸಣೆ ಮಾಡಿಸಿಕೊಂಡು ರೋಗ ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯ ಪೂರ್ಣ ಜೀವನ ನಡೆಸಬೇಕು. ಇಂದಿನ ಜನರು ಅನಾರೋಗ್ಯಕರವೆಂದು ತಿಳಿದಿರುವ ವಸ್ತುಗಳನ್ನು ಪದೇ ಪದೆ ಬಳಸುವುದರಿಂದ ಆರೋಗ್ಯದ ಸಮಸ್ಯೆ ಎದುರಾಗಬಹುದು. ಇದನ್ನು ಹೊರತುಪಡಿಸಿ ಪ್ರತಿಯೊಬ್ಬರೂ ಸುರಕ್ಷಿತವಾಗಿರುವಂತಹ ತರಕಾರಿ, ಹಣ್ಣು, ಧಾನ್ಯ ಹೆಚ್ಚು ಬಳಸಬೇಕು ಎಂದರು.

ಆಹಾರ ಪದ್ಧತಿ ಬದಲಿಸಿ: ಗ್ರಾಮದ ಮುಖಂಡ ಎಂ.ವೆಂಕಟೇಶ್‌ ಮಾತನಾಡಿ, ಮಧುಮೇಹ ಇಂದು ಪ್ರತಿಯೊಬ್ಬರಲ್ಲಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮಧುಮೇಹ ಬಂದಿದೆ ಎಂದು ಭಯ ಪಡದೆ ನಿಮ್ಮ ದಿನನಿತ್ಯದ ಆಹಾರ ಸೇವೆನೆ ಬದಲಿಸಿಕೊಳ್ಳಬೇಕು. ಪ್ರತಿದಿನವು ಯಾವೆಲ್ಲ ಆಹಾರ ಸೇವಿಸಬೇಕು. ಯಾವ ಹಣ್ಣು, ತರಕಾರಿ ತಿನ್ನಬೇಕು ಎನ್ನುವುದು ತಿಳಿಯಬೇಕುಂದರು.

ಗರ್ಭಿಣಿಯರಿಗೆ ಉಚಿತ ತಪಾಸಣೆ: ಮನೆಯಲೇ ತಪಾಸಣೆ ಮಾಡಿಕೊಳ್ಳುವುದನ್ನು ಬಿಟ್ಟು ಪ್ರತಿ ಎರಡು ಮೂರು ತಿಂಗಳಿಗೊಮ್ಮೆ ತಜ್ಞರಿಂದ ತಪಾಸಣೆ ಮಾಡಿಸಿ ಕೊಳ್ಳುವುದು ಉತ್ತಮ. ಶಿಬಿರದಲ್ಲಿ ಭಾಗವಾಹಿಸಿದ ಎಲ್ಲ ಗರ್ಭಿಣಿಯರಿಗೆ ಪ್ರತಿ ತಿಂಗಳು ಸುವೀಕ್ಷ ಆಸ್ಪತ್ರೆ ವೈದ್ಯರಿಂದ ಉಚಿತ ತಪಾಸಣೆ ಮಾಡಲಾಗುವುದು ಎಂದು ತಿಳಿಸಿದರು. ಡಾ.ಕವಿತಾ, ಗ್ರಾಪಂ ಅಧ್ಯಕ್ಷೆ ಆನಂದಮ್ಮ, ಸದಸ್ಯ ಕೃಷ್ಣಮೂರ್ತಿ, ಜಯಮ್ಮ ಚನ್ನಪ್ಪ, ಗ್ರಾಪಂ ಮಾಜಿ ಉಪಾಧ್ಯಕ್ಷ ರಾಮಚಂದ್ರ, ಮಾಜಿ ಸದಸ್ಯ ಕೆ.ವಿ. ಕೃಷ್ಣಪ್ಪ, ಚಿಕ್ಕಚನ್ನರಾಯಪ್ಪ, ಕುಮಾರಗೌಡ, ಎಂ.ರಮೇಶ್‌, ಎಂ.ಲೋಕೇಶ್‌, ಎಂ. ರವಿಕುಮಾರ್‌, ವಕೀಲ ರವಿಪ್ರಕಾಶ್‌, ಮುರಳಿ, ಕೆ. ನರಸಿಂಹಮೂರ್ತಿ, ವಿ. ಕುಮಾರ್‌, ದೇವಾರಾಜು, ಮಂಜುನಾಥ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.