ಜಾತ್ರೋತ್ಸವದಲ್ಲಿ ಗಮನ ಸೆಳೆದ ಭಾರ ಎತ್ತುವ ಸ್ಪರ್ಧೆ


Team Udayavani, Aug 19, 2017, 3:12 PM IST

vijaypur 2.jpg

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ಜಾತ್ರೆಯ ಅಂಗವಾಗಿ ಬುಧವಾರ ಜರುಗಿದ ಭಾರ ಎತ್ತುವ ಕಸರತ್ತಿನ ಸ್ಪರ್ಧೆಗಳು ಗಮನ ಸೆಳೆದವು. ಶ್ರೀ ಬಸವೇಶ್ವರ ದೇವಾಲಯದ ಅಂತಾರಾಷ್ಟ್ರೀಯ ಶಾಲೆಯ ಆವರಣದಲ್ಲಿ ನೆರೆದಿದ್ದ ಜನರು ಭಾರವಾದ ಚೀಲ, ಗುಂಡು, ಕಬ್ಬಿಣದ ಹಾರಿ, ಸಂಗ್ರಾಣಿ ಕಲ್ಲುಗಳನ್ನು ಎತ್ತುವ ಜಟ್ಟಿಗಳನ್ನು ಹುರಿದುಂಬಿಸಿದರು. ಸ್ಪರ್ಧೆಯಲ್ಲಿ ಬಾಗಲಕೋಟೆ, ಬೆಳಗಾವಿ, ಬ್ಯಾಡಗಿ, ಬೀಳಗಿ ಸೇರಿದಂತೆ ವಿವಿಧ ಭಾಗಗಳ ಜಟ್ಟಿಗಳು ಭಾಗವಹಿಸಿದ್ದರು. ಭಾರ ಎತ್ತುವ ಸ್ಪರ್ಧೆಯಲ್ಲಿ ವಿಜೇತರಿಗೆ ಜಾತ್ರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಬೆಳ್ಳಿ ಕಡಗ ತೊಡಿಸಿ ಸನ್ಮಾನಿಸಿದರು. ವಿವಿಧ ಭಾರ ಎತ್ತುವ ಸ್ಪರ್ಧೆಗಳಲ್ಲಿ ವಿಜೇತರು: ಸಂಗ್ರಾಣಿ ಕಲ್ಲು ಸಾಗ ಎತ್ತುವ ಸ್ಪರ್ಧೆ: ಕೊಣ್ಣೂರಿನ ಕರೆಪ್ಪ ಧರೆಪ್ಪ ಅಬ್ಬುನವರ ಪ್ರಥಮ, ಬೀಳಗಿಯ ಸಂಘಣ್ಣ ಕೊಂಚಿಕಲ್ಲ ದ್ವಿತೀಯ, ಹೊನವಾಡದ ಉಮೇಶ ಹರಗೆ ತೃತೀಯ ಸ್ಥಾನ ಪಡೆದರು. ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ : ಹಳಗೇರಿಯ ಸಾಯಪ್ಪ ಕೆಂದೂರ ಪ್ರಥಮ, ಕುಂಟೋಜಿಯ ಮಲ್ಲು ತಳವಾರ ದ್ವಿತೀಯ, ಗುಳೇದಗುಡ್ಡದ ಮಂಜು ಸಂಗೋಣ್ಣಿ ತೃತೀಯ ಸ್ಥಾನ ಪಡೆದರು. ಗುಂಡು ಎತ್ತುವ ಸ್ಪರ್ಧೆ: ಗುನ್ನಾಪುರದ ಶಿವಲಿಂಗಪ್ಪ ಶಿರೂರ (ಪ್ರಥಮ), ಹಳ್ಳೂರಿನ ಚಂದ್ರಶೇಖರ ಯಾಳವಾರ (ದ್ವಿತೀಯ) ಗಪಳಸಂಗಿಯ ಕೃಷ್ಣಾ ಪವಾರ ತೃತೀಯ ಸ್ಥಾನ ಪಡೆದರು. ಉಸುಕಿನ ಚೀಲ ಎತ್ತುವ ಸ್ಪರ್ಧೆ: ಯಲಗೂರಿನ ಗಂಗಪ್ಪ ಶಿರೂರ ಪ್ರಥಮ, ಗೋನಾಳದ ವಿಠ್ಠಲ ಹಡಗಲಿ ದ್ವಿತೀಯ, ಸಂಗೋಂದಿಯ ಮಳೇಪ್ಪ ಮೇಟಿ ತೃತೀಯ ಸ್ಥಾನ ಪಡೆದರು.ವಿವಿಧ ಭಾರ ಎತ್ತುವ ಸ್ಪರ್ಧೆಯಲ್ಲಿ ಗುನ್ನಾಪುರದ ಬಾಲಕ ಬೀರಪ್ಪ ಲೋಣಿ ಮೆಟ್ನಾಲಿಗೆ ಮೇಲೆ ನಿಂತು 68 ಕೆ.ಜಿ. ತೂಕದ ಅಕ್ಕಿ ಚೀಲ ಎತ್ತುವ ಮೂಲಕ ಗಮನ ಸೆಳೆದರು. ಇಂಗಳಯ ಮಾಳಪ್ಪ ಪೂಜಾರಿ, ಮುಳಸಾವಳಗಿಯ ರಮೇಶ ಪಾಟೀಲ ಅವರು ಹಲ್ಲಿನ ಸಹಾಯದಿಂದ ಭಾರವಾದ ಕಬ್ಬಿಣದ ಹಾರಿ ಎತ್ತಿದರು. ನಾಗರಾಜ ಗಾಣಗೇರಿ, ನಿಜಾನಂದ ಹಳ್ಳಿ ಮೆಟನಾಲಿಗೆ ಮೇಲೆ ನಿಂತು. ಭಾರವಾದ ಚೀಲ ಎತ್ತಿದರು. ಪರಶುರಾಮ ಮನಗೂಳಿ ಮೆಟ್‌ ನಾಲಿಗೆ ಮೇಲೆ ನಿಂತು ಕಬ್ಬಿಣದ ಹಾರಿ ಎತ್ತುವ ಮೂಲಕ ಸ್ಪರ್ಧೆಯ ಮೆರಗು ಹೆಚ್ಚಿಸಿದರು. ವಿವಿಧ ಕಸರತ್ತಿನ ಸ ರ್ಧೆಗಳಲ್ಲಿ ವಿಜೇತರಾದವರಿಗೆ ನಾಗರಾಜ ಗುಂದಗಿ ಅವರು ಕಳೆದ 13 ವರ್ಷಗಳಿಂದ ಬೆಳ್ಳಿ ಕಡೆ ಬಹುಮಾನವಾಗಿ ನೀಡುತ್ತಿರುವುದು ವಿಶೇಷ. ಕಸರತ್ತಿನ ಸ್ಪರ್ಧೆಯಲ್ಲಿ ಸಿದ್ದಲಿಂಗ ಸ್ವಾಮೀಜಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಬಸಪ್ಪ ಹಾರಿವಾಳ, ಬಸವರಾಜ ಗೊಳಸಂಗಿ, ಬಸಣ್ಣ ದೇಸಾಯಿ, ಮೀರಾಸಾಬ್‌ ಕೊರಬು, ಅಪ್ಪು ಮಟ್ಟಿಹಾಳ, ಶರಣು ಕೂಡಗಿ, ಶ್ರೀಶೈಲ ಹಾರಿವಾಳ, ಸಂಗಪ್ಪ ಡಂಬಳ, ಸಂಗಯ್ಯ ಒಡೆಯರ, ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ರವಿ ಹಂಜಗಿ, ಸಂಗಮೇಶ ಓಲೇಕಾರ, ಬಸವರಾಜ ಕೋಟಿ, ಸಂಗಪ್ಪ ವಾಡೇದ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.