ಫುಟ್‌ಪಾತ್‌ ಅತಿಕ್ರಮಣ


Team Udayavani, Apr 2, 2019, 3:33 PM IST

bij-1

ಇಂಡಿ: ಕಳೆದ ಒಂದೂವರೆ ವರ್ಷದ ಹಿಂದೆ ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ ಸುಮಾರು 5 ಕೋಟಿ ವೆಚ್ಚದಲ್ಲಿ ಪಾದಚಾರಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಸ್ತೆ ಅಗಲೀಕರಣಗೊಳಿಸಿ ಫುಟ್‌ಪಾತ್‌ ನಿರ್ಮಿಇಸಿದ್ದರೂ ವ್ಯಾಪಾರಿಗಳ ಅತಿಕ್ರಮಣದಿಂದ ಫುಟ್‌ಪಾತ್‌ ಎಲ್ಲಿದೆ
ಎಂಬುದೇ ತಿಳಿಯದಂತಾಗಿದೆ.

ಪಟ್ಟಣದ ಬಸವೇಶ್ವರ ವೃತ್ತದಿಂದ ಸ್ಟೇಶನ್‌ ರಸ್ತೆ ಹಳ್ಳದವರೆಗೆ ಮಾರ್ಗ ನಿರ್ಮಿಸಿ ಕಬ್ಬಿಣದ ಗ್ರಿಲ್‌ ಅಳವಡಿಸಲಾಗಿತ್ತು. ಪಾದಚಾರಿಗಳಿಗೆ ಅನುಕೂಲವಾಗಬೇಕು, ವಾಹನ ಸವಾರರಿಂದ ಪಾದಚಾರಿಗಳಿಗೆ ತೊಂದರೆಯಾಗಬಾರದು ಎಂಬ ಸುದ್ದೇಶದಿಂದ ಫುಟ್‌ಪಾತ್‌ ನಿರ್ಮಿಸಿದ್ದು, ಸದ್ಯ ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಫುಟ್‌ಪಾತ್‌ ಮಾಯವಾಗಿದೆ.

ಫುಟ್‌ಪಾತ್‌ ಮೇಲೆ ಡಬ್ಟಾ ಅಂಗಡಿಗಳು ತಲೆ ಎತ್ತಿವೆ. ಕೆಲ ಅಂಗಡಿಕಾರರು ಫುಟ್‌ಪಾತ್‌ ಮೇಲೆ ತಮ್ಮ ಅಂಗಡಿ ಸಾಮಾನುಗಳನ್ನು ಫುಟ್‌ಪಾತ್‌ ಮೇಲಿರಿಸಿ ಪಾದಚಾರಿಗಳು ಫುಟ್‌ಪಾತ್‌ ಮೇಲೆ ಹಾಯದಂತೆ ತಡೆಯೊಡ್ಡಿದ್ದಾರೆ. ಪಟ್ಟಣದ ಮುಖ್ಯ ರಸ್ತೆಗಳ ಅಭಿವೃದ್ದಿಗೆ ಖರ್ಚಾದ ಹಣ ಲೆಕ್ಕ ಹಾಕುತ್ತ ಹೋದರೆ ಸರ್ಕಾರದ ಅನುದಾನ ನಾಗರಿಕರಿಗೆ ಅನಕೂಲವಾಗುವ ರೀತಿಯಲ್ಲಿ ಖರ್ಚು ಮಾಡಿದರೂ
ಆ ಕಾಮಗಾರಿಗಳ ಪ್ರಯೋಜನ ಸಾರ್ವಜನಿಕರಿಗೆ ಮರೀಚಿಕೆಯಾಗಿದೆ. ಕರ್ನಾಟಕ ರಾಜ್ಯದ ಗಡಿ ಭಾಗದಲ್ಲಿರುವ ಇಂಡಿ ಪಟ್ಟಣವನ್ನು ಸೌಂದಯೀಕರಣ ಮಾಡುವ ಉದ್ದೇಶದಿಂದ ಶಾಸಕರ ವಿಶೇಷ ಅನುದಾನ ಸೇರಿದಂತೆ ನಗರೋತ್ಥಾನ ಯೋಜನೆಯಡಿಯಲ್ಲಿ ಅಂದಾಜು 5 ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ ಮಾಡಿ ಪಾದಚಾರಿ ರಸ್ತೆ ನಿರ್ಮಿಸಲಾಗಿದೆ.

ಆದರೆ ಇದೇ ಪಾದಚಾರಿ ರಸ್ತೆಗಳ ಮೇಲೆ ಡಬ್ಟಾ ಅಂಗಡಿಕಾರರು ಹಾಗೂ ಇನ್ನಿತರ ಅಂಗಡಿಕಾರರು
ತಮ್ಮ ಅಂಗಡಿಗಳ ಮುಂದೆ ತಮ್ಮ ಸಾಮಾನುಗಳನ್ನಿಟ್ಟು ಪಾದಚಾರಿಗಳು ನಡೆದಾಡದಂತೆ ಮಾಡಿದ್ದಾರೆ. ಅನಿವಾರ್ಯವಾಗಿ ಪಾದಚಾರಿಗಳು ವಾಹನ ದಟ್ಟಣೆಯ ಮುಖ್ಯ ರಸ್ತೆ ಮೇಲೆ ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾಗಿದೆ. ಇನ್ನಾದರೂ ಪುರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿ
ಸಮಸ್ಯೆ ಪರಿಹರಿಸುವರೇ ಕಾದು ನೋಡೋಣ.

ಕೋಟ್ಯಂತರ ರೂ. ಖರ್ಚು ಮಾಡಿ ಪಾದಚಾರಿಗಳ ಅನುಕೂಲಕ್ಕಾಗಿ ನಿರ್ಮಿಸಿದ ಫುಟ್‌ಪಾತ್‌ ಮೇಲೆ
ವ್ಯಾಪಾರಸ್ಥರು ಡಬ್ಟಾ ಅಂಗಡಿಗಳನ್ನಿಟ್ಟು ಅತಿಕ್ರಮಣ ಮಾಡಿದ್ದಾರೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಸುಮ್ಮನಿರುವುದು ಸಂಶಯಕ್ಕೆ ಎಡೆ ಮಾಡಿ ಕೊಟ್ಟಿದೆ.
ಮಲ್ಲಿಕಾರ್ಜುನ ಆಳೂರ, ಸ್ಥಳೀಯ ನಿವಾಸಿ

ಫುಟ್‌ಪಾತ್‌ ಅತಿಕ್ರಮಣವಾಗಿದೆ. ಪುರಸಭೆ ಅಧಿಕಾರಿಗಳು ಇದ್ದೂ ಸತ್ತಂತೆ ವರ್ತಿಸುತ್ತಿದ್ದಾರೆ.
ಅತಿಕ್ರಮಣವಾದ ಫುಟ್‌ಪಾತ್‌ ಮೇಲಿನ ಅಂಗಡಿಗಳನ್ನು ತೆರವುಗೊಳಿಸಿ ಪಾದಚಾರಿಗಳಿಗೆ ಅನುಕೂಲ ಕಲ್ಪಿಸಬೇಕು.
ಪ್ರವೀಣ ತಾಂಬೆ, ಸ್ಥಳೀಯ ನಿವಾಸಿ

ನಾನು ಕೆಲಸಕ್ಕೆ ಹಾಜರಾಗಿ ಎರಡು ದಿನವಾಯಿತು. ಫುಟ್‌ಪಾತ್‌ ಅತಿಕ್ರಮಣದ ಬಗ್ಗೆ ನನ್ನ ಗಮನಕ್ಕಿಲ್ಲ.
ನೀವು ಹೇಳಿದ ಮೇಲೆಯೇ ನನಗೆ ನನಗೆ ಗೊತ್ತಾಗಿದೆ. ಈ ಕುರಿತು ಪರಿಶೀಲಿಸುತ್ತೇನೆ.
ಬಾಬುರಾಯ ವಿಭೂತಿ, ಪುರಸಭೆ ಮುಖ್ಯಾಧಿಕಾರಿ

ಫುಟ್‌ಪಾತ್‌ ಸಂಪೂರ್ಣ ಪುರಸಭೆ ವ್ಯಾಪ್ತಿಯಲ್ಲಿ ಬರುತ್ತದೆ. ಈಗಾಗಲೆ ಒಮ್ಮೆ ಪುರಸಭೆಯವರು
ಬಂದೋಬಸ್ತ್ಗಾಗಿ ನಮ್ಮ ಸಹಾಯ ಕೇಳಿದ್ದರು. ಆಗ ನಾವು ನಮ್ಮ ಸಿಬ್ಬಂದಿ ಕಳುಹಿಸಿ ಕೊಟ್ಟು ಫುಟ್‌ಪಾತ್‌ ಜಾಗ ಖಾಲಿ ಮಾಡಿಸಿದ್ದೇವು. ಈಗ ಅವರು ನಮ್ಮ ಸಹಾಯ ಕೇಳಿಲ್ಲ.
ರವಿ ಯಡವಣ್ಣವರ, ನಗರ ಠಾಣೆ ಪಿಎಸೈ

„ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.