ವಿವಿಗಾಗಿ ಹೋರಾಟ ಸಮಿತಿ ಅಸ್ತಿತ್ವಕ್ಕೆ

ರಾಜ್ಯದ ಸಾವಯವ ಕೃಷಿ ಮೊದಲ ವಿಶ್ವವಿದ್ಯಾಲಯ ವಿಜಯಪುರ ಜಿಲ್ಲೆಯಲ್ಲೇ ಸ್ಥಾಪನೆ ಆಗಬೇಕು.

Team Udayavani, Feb 17, 2021, 5:56 PM IST

ವಿವಿಗಾಗಿ ಹೋರಾಟ ಸಮಿತಿ ಅಸ್ತಿತ್ವಕ್ಕೆ

ವಿಜಯಪುರ: ಸಾವಯವ ಕೃಷಿ ತವರು ಎನ್ನುವಂತೆ ಸಮೃದ್ಧ ಸಾವಯವ ಕೃಷಿ ಪ್ರದೇಶ ಇರುವ ಬಸವನಾಡಿಗೆ ರಾಜ್ಯದ ಮೊಟ್ಟ ಮೊದಲ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಬೇಡಿಕೆ ಜೋರಾಗುವ ಮುನ್ಸೂಚನೆ ಸಿಕ್ಕಿದೆ. ಜಿಲ್ಲೆಗೆ ಸಾವಯವ ವಿಶ್ವವಿದ್ಯಾಲಯ ಪಡೆಯುವುದಕ್ಕೆ ಜಿಲ್ಲೆಯ ಸಾವಯವ ಕೃಷಿಕರು ಹೋರಾಟ ಸಮಿತಿ ರಚಿಸಲು ಸಿದ್ಧತೆ ನಡೆಸಿದ್ದಾರೆ.

ರಾಜ್ಯ ಸರ್ಕಾರ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಚಿಂತನೆ ಆರಂಭಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆ ಮಲೆನಾಡಿನ ಶಿವಮೊಗ್ಗದಲ್ಲಿ ಆರಂಭಿಸಲು ಯೋಜಿಸುತ್ತಿದೆ. ಇದನ್ನು ಅರಿತ ಜಿಲ್ಲೆಯ ಸಾವಯವ ಕೃಷಿಕರು ವಿಜಯಪುರ ಜಿಲ್ಲೆಗೆ ಸಾವಯವ ಕೃಷಿ ವಿಶ್ವವಿದ್ಯಾಲಯ ತರಲು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಹೋರಾಟ ಸಮಿತಿ ರಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲು ಸಿದ್ಧತೆ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಶೇ. 75 ಕ್ಕೂ ಹೆಚ್ಚು ಪ್ರದೇಶ ರಸಗೊಬ್ಬರ ಮುಕ್ತವಾದ ಹಾಗೂ ಶೇ. 60ಕ್ಕಿಂತ ಹೆಚ್ಚು ಪ್ರದೇಶ ಸಾವಯವ ಕೃಷಿಯನ್ನು ಅವಲಂಬಿಸಿದೆ. ಜಿಲ್ಲೆಯ ಅನಕ್ಷರಸ್ತ ಹಾಗೂ ಪಾರಂಪರಿಕ ಕೃಷಿ ಮಾಡುವ ಮುಗ್ಧ ರೈತರಿಗೆ ತಾವು ಮಾಡುತ್ತಿರುವುದು ಸಾವಯವ ಕೃಷಿ ಎಂಬ ಅರಿವೂ ಇಲ್ಲದಂತೆ ತಮ್ಮ ಪಾಡಿಗೆ ತಾವು ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರೊಂದಿಗೆ ಮುಂದಿನ ಪೀಳಿಗೆಗೆ ವಿಷಮುಕ್ತ ಭೂಮಿಯನ್ನು ಹಾಗೂ ಕಲುಷಿತ ಮುಕ್ತ ಪ್ರದೇಶವನ್ನು ಧಾರೆ ಎರೆಯುವಲ್ಲಿ ನಿರತರಾಗಿದ್ದಾರೆ.

ಜಾಗತಿಕ ಮಟ್ಟದಲ್ಲಿ ತಾಪಮಾನ ಹೆಚ್ಚಳದ ವಿರುದ್ಧ ಕಳವಳದ ಧ್ವನಿ ಏಳುವ ಮುನ್ನವೇ ಜಿಲ್ಲೆಯಲ್ಲಿ ನೂರಾರು ರೈತರು ಸಾವಯವ ಕೃಷಿ ಜಾಗೃತಿಯಲ್ಲಿ
ತೊಡಗಿದ್ದಾರೆ. ಭವಿಷ್ಯದ ಪೀಳಿಗೆಯನ್ನೂ ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಶೂನ್ಯ ಬಂಡವಾಳದ ಕೃಷಿಯ ಸಾವಯವಕ್ಕಾಗಿ ಸುಭಾಷ್‌ ಪಾಳೇಕರ ಅವರ ಜಾಗೃತಿ ಕಾರ್ಯಕ್ರಮ ನಡೆಸಿದ್ದಾರೆ.

ಇದಲ್ಲದೇ ಜಪಾನಿನ ಒಂದು ಹುಲ್ಲಿನ ಕ್ರಾಂತಿ ಪುರುಷ ಎಂದೇ ಕರೆಸಿಕೊಂಡಿರುವ ನೈಸರ್ಗಿಕ ಕೃಷಿ ಸಾಧಕ ಮಸುನೊಬು ಫುಕುವೋಕು ಅವರ ನೈಸರ್ಗಿಕ ಕೃಷಿ ಪದ್ಧತಿಯಲ್ಲೂ ಜಿಲ್ಲೆಯ ಹಲವು ರೈತರು ತೊಡಗಿಸಿಕೊಂಡಿದ್ದಾರೆ. ಜನರಲ್ಲಿ ಇದಲ್ಲದೇ ವಿಷಮುಕ್ತ ಆಹಾರ ಉತ್ಪಾದಿಸಿ, ಸಣ್ಣ ಸಣ್ಣ ಸಂಘಟನೆಗಳನ್ನು ಕಟ್ಟಿಕೊಂಡು ತಮ್ಮ ಪಾಡಿಗೆ ತಾವು ಸಾವಯವ ಕೃಷಿ ಜಾಗೃತಿಯಲ್ಲಿ ತೊಡಗಿದ್ದಾರೆ.

ಸಾವಯವವನ್ನೇ ಉಸಿರಾಗಿಸಿಕೊಂಡಿರುವ ಹಾಗೂ ಸಾವಯವ ಕೃಷಿಗಾಗಿ ಬದುಕನ್ನೇ ಮುಡಿಪಾಗಿಸಿ ಇರಿಸಿಕೊಂಡಿರುವ ವಿಜಯಪುರ ಜಿಲ್ಲೆ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸೂಕ್ತ ಹಾಗೂ ಯೋಗ್ಯ ಜಿಲ್ಲೆ. ಹೀಗಾಗಿ ಬಸವನಾಡಿನಲ್ಲೇ ರಾಜ್ಯದ ಸಾವಯವ ಕೃಷಿ ಮೊದಲ ವಿಶ್ವವಿದ್ಯಾಲಯ ವಿಜಯಪುರ ಜಿಲ್ಲೆಯಲ್ಲೇ ಸ್ಥಾಪನೆ ಆಗಬೇಕು. ಇದಕ್ಕಾಗಿ ಸರ್ಕಾರ ಮೇಲೆ ಒತ್ತಡ ಹೇರಲು ಜಿಲ್ಲೆಯ ಸರ್ವಪಕ್ಷ ಪಕ್ಷಾತೀತವಾಗಿ ಸಾವಯವ ಕೃಷಿ ವಿಶ್ವವಿದ್ಯಾಲಯ ಹೋರಾಟ ಸಮಿತಿ ಕಟ್ಟಲು ನಿರ್ಧರಿಸಿದ್ದಾರೆ.

ಇದಲ್ಲದೇ ಸದರಿ ಹೋರಾಟ ಸಮಿತಿ ಮೂಲಕ ಫೆ. 22ರಂದು ಇಂಡಿ ಪಟ್ಟಣದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಕಟ್ಟಡ ಲೋಕಾರ್ಪಣೆಗೆ ಬರುವ ಕೃಷಿ ಸಚಿವ ಬಿ.ಸಿ.
ಪಾಟೀಲ ಅವರಿಗೆ ಮೊದಲ ಹಂತದಲ್ಲಿ ಮನವಿ ಸಲ್ಲಿಸುವ ಯೋಜನೆ ರೂಪಿಸಿದ್ದಾರೆ. ಇದಾದ ಬಳಿಕ ಬೆಂಗಳೂರಿಗೆ ನಿಯೋಗದಲ್ಲಿ ತೆರಳಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸರ್ಕಾರದ ಉದ್ದೇಶಿತ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ವಿಜಯಪುರ ಜಿಲ್ಲೆ ಸೂಕ್ತ ಏಕೆ ಎಂಬುದನ್ನು ಮನವರಿಕೆ ಮಾಡಿಕೊಡಲು ಚಿಂತನೆ ನಡೆಸಿದ್ದಾರೆ. ಆ ಮೂಲಕ ಸರ್ಕಾರ ಮೇಲೆ ಒತ್ತಡ ಹೇರಿ ರಾಜ್ಯದ ಮೊಟ್ಟ ಮೊದಲ ಸಾವಯವ ಕೃಷಿ ವಿಶ್ವವಿದ್ಯಾಲಯವನ್ನು ವಿಜಯಪುರ ಜಿಲ್ಲೆಯಲ್ಲಿ ಸ್ಥಾಪಿಸಿಕೊಳ್ಳಲು ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

ರಾಜ್ಯ ಸರ್ಕಾರ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹ. ಆದರೆ ಅದನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪಿಸುವ ಚಿಂತನೆಗಿಂತ ಸರ್ಕಾರದ ಉದ್ದೇಶ ಈಡೇರಿಕೆಗೆ ಪೂರಕ ಸಂಪನ್ಮೂಲ ಇರುವ ವಿಜಯಪುರ ಜಿಲ್ಲೆಯಲ್ಲೇ ಸ್ಥಾಪಿಸಬೇಕು. ಇದಕ್ಕಾಗಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಹಾಗೂ ಒತ್ತಡ ಹೇರಲು ಒಂದೆರಡು ದಿನಗಳಲ್ಲಿ ಹೋರಾಟ ಸಮಿತಿ ರಚಿಸಲು ಸಭೆ ನಡೆಸುತ್ತೇವೆ.
ಎಸ್‌.ಟಿ. ಪಾಟೀಲ, ಸಾವಯವ ಕೃಷಿ ಪಂಡಿತ
ಪ್ರಶಸ್ತಿ ವಿಜೇತರು, ನಾದ ಬಿಕೆ ಗ್ರಾಮ

*ಜಿ.ಎಸ್‌. ಕಮತರ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.