ಆರೋಗ್ಯದಲ್ಲಿ ವಿಜಯಪುರ ಮಾದರಿಗೆ ಪಣ


Team Udayavani, Dec 17, 2018, 12:39 PM IST

vij-1.jpg

ವಿಜಯಪುರ: ಹಲವು ರಂಗಗಳಲ್ಲಿ ಅತ್ಯಂತ ಹಿಂದುಳಿರುವ ಆರೋಗ್ಯ ಸಚಿವರ ತವರು ಜಿಲ್ಲೆ ವಿಜಯಪುರ ಜಿಲ್ಲೆಯನ್ನು ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ರಾಜ್ಯಕ್ಕೆ ಮಾದರಿ ಮಾಡಲು ಪಣ ತೊಡಲಾಗಿದೆ. ಇದಕ್ಕಾಗಿ ಹಲವು ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ಅಧಿಕಾರಿಗಳ ತಂಡವನ್ನು ಸಜ್ಜುಗೊಳಿಸುವ ಕೆಲಸ ಭರದಿಂದ ನಡೆದಿದೆ.

ಭಾರತೀಯ ಆರೋಗ್ಯ ಸೇವಾ ವ್ಯವಸ್ಥೆ (ಐಪಿಎಚ್‌ಎಸ್‌) ಮಾರ್ಗಸೂಚಿ ಅನ್ವಯ ಈಗಿರುವ 35 ವೈದ್ಯರ ಜೊತೆಗೆ ಇನ್ನೂ 15 ವೈದ್ಯರು ಸೇರಿದಂತೆ ಮಂಜೂರಾಗಿರುವ ವೈದ್ಯರು ಹಾಗೂ ಸಿಬ್ಬಂದಿಯನ್ನು ಪೂರ್ಣಪ್ರಮಾಣದಲ್ಲಿ ನೇಮಿಸವುದು. ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿರುವ ವೈದ್ಯರ ಸೇವೆಯನ್ನು ಸಮರ್ಥವಾಗಿ ಬಳಸಿಕೊಳ್ಳಲು ಸಲಹಾ ಸಮಿತಿ ರಚಿಸುವುದು. ಖಾಸಗಿ ಆರೋಗ್ಯ ಸೇವೆಯಲ್ಲಿರುವ ವಿವಿಧ ತಜ್ಞ ವೈದ್ಯರ ಸೇವೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಬಳಸಿಕೊಂಡು ಗುಣಮಟ್ಟದ ಯೋಜನೆ ರೂಪಿಸಲಾಗಿದೆ.

ಅಲ್ಲದೇ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಆಧುನಿಕ ಸುಧಾರಿತ ವೈದ್ಯಕೀಯ ಯಂತ್ರೋಪಕರಣಗಳು, ಶೌಚಾಲಯ, ನಿರಂತರ ವಿದ್ಯುತ್‌, ಕುಡಿಯುವ ನೀರು, ಸುಂದರ ಉದ್ಯಾನವನ ನಿರ್ಮಾಣದಂಥ ಸೇವೆಗಳನ್ನು ಕಲ್ಪಿಸುವ ಮೂಲಕ ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲೇ ಇಂಥ ಪ್ರಯೋಗ ಮಾಡಲಾಗುತ್ತಿದೆ.

ಇದಕ್ಕಾಗಿ ಆರೋಗ್ಯ ಸಚಿವ ಶಿವಾನಂದ ಪಾಟೀಲ ಅವರು ವಿಶೇಷ ಆಸಕ್ತಿ ವಹಿಸಿದ್ದು, ಕಳೆದ ಎರಡು ದಿನಗಳಿಂದ ವಿಜಯಪುರ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಅಧಿಕಾರಿಗಳ ತಂಡದೊಂದಿಗೆ ಮ್ಯಾರಾಥಾನ್‌ ಸಭೆ ನಡೆಸಿದ್ದಲ್ಲದೇ, ಆಸ್ಪತ್ರೆಯ ಪ್ರತಿ ವಾರ್ಡ್‌ನಲ್ಲೂ ಸುತ್ತು ಹಾಕಿ ವ್ಯವಸ್ಥೆಯನ್ನು ಖುದ್ದು ಅವಲೋಕಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿರುವ
ವಿಶಾಲ ಸ್ಥಳದಲ್ಲಿ ರಾಜ್ಯದಲ್ಲೇ ಎಲ್ಲೂ ಇಲ್ಲದ ಆರೋಗ್ಯ ಸೇವೆಗಳ ಘಟಕಗಳನ್ನು ನಿರ್ಮಾಣ ಮಾಡಲು ಯೋಚಿಸುತ್ತಿದ್ದಾರೆ.

ರಾಜ್ಯದ ಯಾವ ಆಸ್ಪತೆಯಲ್ಲೂ ದೊರೆಯದ ಆರೋಗ್ಯ ಸೇವೆಗಳು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ದೊರೆಯುವಂತೆ ಮಾಡಬೇಕು. ಇಲ್ಲಿನ ಮಾರಿಯನ್ನೇ ರಾಜ್ಯದ ಇತರೆ ಜಿಲ್ಲಾ ಆಸ್ಪತ್ರೆಯಲ್ಲಿ ಮಾದರಿಯಾಗಿ ಅನುಸರಿಸುವಂತಾಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಇದಕ್ಕಾಗಿ ಡಿಎಚ್‌ಒ ಡಾ| ಮಹೇಂದ್ರ ಕಾಪ್ಸೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ| ಶರಣಪ್ಪ ಕಟ್ಟಿ ನೇತೃತ್ವದ ಅಧಿಕಾರಿಗಳ ತಂಡಕ್ಕೆ ಮಾದರಿ ಯೋಜನೆಯ ನೀಲ ನಕ್ಷೆ ಹಾಗೂ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಿದ್ದಾರೆ. ಅಲ್ಲದೇ ಈ ಮಹತ್ವ ಕೆಲಸಕ್ಕೆ ನಿವೃತ್ತ ಡಿಎಚ್‌ಒ ಡಾ| ಗುಂಡಪ್ಪ ಸೇರಿದಂತೆ ಇತರೆ ವೈದ್ಯಕೀಯ ಅಧಿಕಾರಿಗಳ ಸಲಹೆ, ಸೂಚನೆ ಸಹಿತ ಅಗತ್ಯ ಸಹಕಾರ ನೀಡಲು ಕೂಡ ಕೋರಿದ್ದಾರೆ.

ಅಂದುಕೊಂಡಂತೆ ನಿರೀಕ್ಷಿತ ಈ ಆರೋಗ್ಯ ಸೇವೆ ಮಾದರಿ ಯೋಜನೆ ಅನುಷ್ಠಾನಕ್ಕೆ ಬಂದಲ್ಲಿ ವಿಜಯಪುರ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿ ರಾಜ್ಯದ ವೈದ್ಯ ಲೋಕ ಇತ್ತ ಚಿತ್ತ ನೆಡುವ ಕಾಲ ದೂರ ಇಲ್ಲ.

ಐಪಿಎಚ್‌ಎಸ್‌ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸರ್ಕಾರಿ ಆರೋಗ್ಯ ಸೇವೆಯನ್ನು ಗುಣಮಟ್ಟ ಹೆಚ್ಚಿಸಲು
ಯೋಜನೆ ರೂಪಿಸಲಾಗುತ್ತಿದೆ. ಆರೋಗ್ಯ ಸಚಿವ ಶಿವಾನಂದ ಪಾಟೀಲ ಅವರ ಮಾರ್ಗದರ್ಶನದಲ್ಲಿ ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 
ಡಾ| ಶರಣಪ್ಪ ಕಟ್ಟಿ, ಶಸ್ತ್ರ ಚಿಕಿತ್ಸಕರು, ಸರ್ಕಾರಿ ಜಿಲ್ಲಾ ಆಸ್ಪತೆ

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.