ರಾಜ್ಯ ಸರ್ಕಾರದ ದಿವಾಳಿಗೆ ಸ್ವಪಕ್ಷದ ಶಾಸಕರೇ ಸಾಕ್ಷಿ: ಎಂ.ಬಿ.ಪಾಟೀಲ ವ್ಯಂಗ್ಯ
Team Udayavani, Aug 27, 2020, 1:15 PM IST
ವಿಜಯಪುರ: ಕುಮಾರಸ್ವಾಮಿ ಸರ್ಕಾರ ನಗರದ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನ ಯಡಿಯೂರಪ್ಪ ಸರ್ಕಾರ ಕಿತ್ತುಕೊಂಡಿದೆ ಎಂದು ಆಡಳಿತ ಪಕ್ಷದ ಶಾಸಕರೇ ಬಹಿರಂಗ ಆರೋಪಿಸಿದ್ಧಾರೆ. ಸರ್ಕಾರ ದಿವಾಳಿ ಆಗಿರುವುದಕ್ಕೆ ಈ ಹೇಳಿಕೆಯೇ ನಿದರ್ಶನ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಾ.ಎಂ.ಬಿ.ಪಾಟೀಲ ಕುಟುಕಿದ್ದಾರೆ.
ನಗರದಲ್ಲಿ ಗಣೇಶ ಮಹಾಮಂಡಳದ ವಿಘ್ನೇಶ್ವರ ಮೂರ್ತಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸರ್ಕಾರ ದಿವಾಳಿ ಆಗಿದೆ. ಸರ್ಕಾರದ ಬಳಿ ಶಾಸಕರಿಗೆ ಅಭಿವೃದ್ಧಿಗೆ ನೀಡಲು ಹಣವೇ ಇಲ್ಲ. ಕನಿಷ್ಟ ನಗರದಲ್ಲಿ ಗುಂಡಿ ಬಿದ್ದ ರಸ್ತೆಗಳಿಗೆ ಮಣ್ಣು ಹಾಕಲು ಸರ್ಕಾರದ ಬಳಿ ಹಣವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ನಶೆ ನಂಜು: ನಟ, ಗಾಯಕರಿಗೆ ಮಾದಕ ವಸ್ತು ನೀಡುತ್ತಿದ್ದ ಗ್ಯಾಂಗ್ ಬಂಧನ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸೂಪರ್ ಸಿಎಂ ಆರೋಪದ ಕುರಿತು ಪ್ರತಿಕ್ರಿಯಿಸಲಾರೆ. ವೈಯುಕ್ತಿಕ ಟೀಕೆ ಮಾಡುವುದಿಲ್ಲ, ವಿಜಯೇಂದ್ರ ಕುರಿತು ಮಾಧ್ಯಮದಲ್ಲಿ ವರದಿ ನೋಡಿದ್ದೇನೆ. ಇದರ ಬಗ್ಗೆ ಬಹಳ ಚರ್ಚೆ ನಡೆದಿದೆ. ಮಾಧ್ಯಮದ ಹೇಳಿಕೆ ಆಧರಸಿ ನಾನು ಆರೋಪ ಮಾಡಲಾರೆ ಎಂದರು.
ಟಿಪ್ಪು ಸುಲ್ತಾನ್ ವಿಷಯದಲ್ಲಿ ಆಡಳಿತ ಬಿಜೆಪಿ ಮೇಲ್ಮನೆ ಸದಸ್ಯ ವಿಶ್ವನಾಥ ಸತ್ಯವನ್ನೇ ಹೇಳಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು