ಮಾಜಿ ಸಚಿವೆ ವಿಮಲಾಬಾಯಿ ದೇಶ ಮುಖ ಅಂತ್ಯಸಂಸ್ಕಾರ
Team Udayavani, Jul 24, 2018, 7:20 AM IST
ನಾಲತವಾಡ: ಅನಾರೋಗ್ಯದಿಂದ ಭಾನುವಾರ ವಿಜಯಪುರದಲ್ಲಿ ನಿಧನರಾದ ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ ಅವರ ಅಂತ್ಯಕ್ರಿಯೆ ಸೋಮವಾರ ಪಟ್ಟಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅಂತ್ಯಕ್ರಿಯೆಗೂ ಮುನ್ನ ಸಚಿವರು,ಶಾಸಕರು, ಅಪಾರ ಅಭಿಮಾನಿಗಳು ದೇಶಮುಖರ ಅಂತಿಮ ದರ್ಶನ ಪಡೆದರು.
ಜನಸಮೂಹದ ಮಧ್ಯೆ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ ವೀರೇಶ್ವರ ವಿದ್ಯಾ ಸಂಸ್ಥೆ ಆವರಣದಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ಪೂರೈಸಿ ಅಂತ್ಯಸಂಸ್ಕಾರ ಮಾಡಲಾಯಿತು.
ಸಚಿವರಾದ ಶಿವಾನಂದ ಪಾಟೀಲ, ಎಂ.ಸಿ. ಮನಗೂಳಿ, ಶಾಸಕ ಎ.ಎಸ್. ಪಾಟೀಲ ನಡಹಳ್ಳಿ, ಮಾಜಿ ಸಚಿವ ಸಿ.ಎಸ್.ನಾಡಗೌಡ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಇಳಕಲ್ಲ ಗುರುಮಹಾಂತ ಮಹಾಸ್ವಾಮಿಗಳು, ತಹಶೀಲ್ದಾರ್ ಎಂ.ಎ.ಎಸ್. ಬಾಗವಾನ, ಡಿವೈಎಸ್ಪಿ ಎಸ್. ಮಹೇಶ್ವರ, ಎಂ.ಎಸ್. ಪಾಟೀಲ ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.