ಬಸ್ ಗೆ ಫಾರ್ಚುನರ್ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರ ಸಾವು
Team Udayavani, Nov 29, 2021, 8:58 AM IST
ವಿಜಯಪುರ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಫಾರ್ಚುನರ್ ಕಾರು ಮಧ್ಯೆ ಮುಖಾಮುಖಿ ಅಪಘಾತದಲ್ಲಿ, ಜಿಲ್ಲೆಯ ಶಾಸಕರೊಬ್ಬರ ಅಳಿಯ ಸೇರಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತರಲ್ಲಿ ಜಿಲ್ಲೆಯ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಅವರ ಅಕ್ಕನಮಗ ವಿಜಯ ದೊಡಮನಿ (45 ವ), ಆತನ ಸ್ನೇಹಿತರಾದ ಚಿದಾನಂದ ನಾಗೇಶ ಸೂರ್ಯವಂಶಿ (45 ವ), ಸೋಮನಾಥ ಕಾಳೆ (43 ವ) ಹಾಗೂ ಸಂದೀಪ ಪವಾರ (40 ವ) ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ನಾಂದೇಡ ಮೂಲದವರು.
ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಭಾನುವಾರ ರಾತ್ರಿ ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಜುಮನಾಳ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಫಾರ್ಚುನರ್ ಕಾರಿನ ಅತೀವೇಗ ಹಾಗೂ ಚಾಲಕನ ಆಜಾಗರೂಕತೆ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಪುನೀತ್ ಇಲ್ಲದೇ ಒಂದು ತಿಂಗಳು: ಮಾಸ ಕಳೆದರೂ ಮಾಸದ ನೋವು
ನಿಶ್ಚಿತಾರ್ಥಕ್ಕಾಗಿ ಗುತ್ತಿಯ ಬಾಡಿಗೆ ಪಡೆದಿದ್ದ ಕೆಎ 22 ಎಫ್ 2198 ಸಂಖ್ಯೆಯ ಬಸ್ ನರಗುಂದ ನಗರದತ್ತ ತೆರಳುತ್ತಿದ್ದಾಗ ಎದುರಿಗೆ ವೇಗವಾಗಿ ಆಗಮಿಸಿದ ಎಂಎಚ್ 13 ಸಿಎಸ್ 3330 ಸಂಖ್ಯೆಯ ಕಾರು ಮುಖಾಮುಖಿ ಡಿಕ್ಕಿಯಾಗಿವೆ.
ಅಪಘಾತದ ಸುದ್ದಿ ತಿಳಿಯುತ್ತಲೇ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಅಪಘಾತ ದುರಂತದ ಕಾರಣ ರಾಷ್ಟ್ರೀಯ ಹೆದ್ದಾರಿ- 52 ರಲ್ಲಿ ಸಂಚಾರಕ್ಕೆ ಕೆಲಕಾಲ ವ್ಯತ್ಯಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ