ಎಲ್‌ಕೆಜಿಯಿಂದ ಎಸ್ಸೆಸ್ಸೆಎಲ್ ಸಿವರೆಗೆ ಉಚಿತ ಶಿಕ್ಷಣ: ಮದರಿ


Team Udayavani, May 29, 2021, 7:23 PM IST

xcvh

ಮುದ್ದೇಬಿಹಾಳ: ಕೊರೊನಾ ಎರಡನೇ ಅಲೆಯಿಂದ ತೀವ್ರ ಸಂಕಷ್ಟಕ್ಕೊಳಗಾಗಿರುವ ಕುಟುಂಬದವರ ಮಕ್ಕಳಿಗೆ ಎಲ್‌ಕೆಜಿಯಿಂದ 10ನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮದಲ್ಲಿ 2021-22ನೇ ಸಾಲಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಲು ಇಲ್ಲಿನ ಅಹಿಲ್ಯಾದೇವಿ ಹೋಳ್ಕರ್‌ ಶೈಕ್ಷಣಿಕ ಸಂಸ್ಥೆ ತೀರ್ಮಾನಿಸಿ ರಾಜ್ಯದಲ್ಲೇ ವಿನೂತನ ಮಾದರಿಯ ಸ್ಪಂದನೆಗೆ ಮುಂದಾಗಿದೆ.

ಶುಕ್ರವಾರ ಇಲ್ಲಿನ ಅಭ್ಯುದಯ ಸೈನ್ಸ್‌ ಪಿಯು ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಕುರುಬರ ಸಂಘದ ಅಧ್ಯಕ್ಷರೂ ಆಗಿರುವ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ಈ ವಿಷಯ ತಿಳಿಸಿ, ಇದಕ್ಕಾಗಿ ಸಿದ್ಧಪಡಿಸಿರುವ ಪ್ರಚಾರ ಸಾಮಗ್ರಿಗಳನ್ನು ಪ್ರದರ್ಶಿಸಿದರು. ಈಗಾಗಲೇ ನಮ್ಮ ಸಂಸ್ಥೆಯಿಂದ ಮುದ್ದೇಬಿಹಾಳ ಪಟ್ಟಣದಲ್ಲಿ ಅಭ್ಯುದಯ ಸೈನ್ಸ್‌ ಪಿಯು ಕಾಲೇಜು ಆರಂಭಿಸಿ ಈ ಭಾಗದ ಶೈಕ್ಷಣಿಕ ಚಟುವಟಿಕೆ ಹೆಚ್ಚುವಂತೆ ನೋಡಿಕೊಳ್ಳಲಾಗಿದೆ.

ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಡಿ ತಾಲೂಕಿನ ಜನರಿಗೆ ಉತ್ತಮ, ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಲು ಮುದ್ದೇಬಿಹಾಳ ಪಟ್ಟಣ, ಅಡವಿ ಹುಲಗಬಾಳ ಮತ್ತು ಕೋಳೂರ-ಯರಗಲ್ಲ ವ್ಯಾಪ್ತಿಯಲ್ಲಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಯ ಕನ್ನಡ, ಇಂಗ್ಲಿಷ್‌ ಮಾಧ್ಯಮದ, ಸುಸಜ್ಜಿತ, ಅತ್ಯಾಧುನಿಕ ಸೌಲಭ್ಯ ಹೊಂದಿರುವ ಶಾಲಾ ಕಟ್ಟಡಗಳನ್ನು ಸ್ವಂತ ಖರ್ಚಿನಲ್ಲಿ ನಿರ್ಮಿಸಿ ಶೈಕ್ಷಣಿಕ ಚಟುವಟಿಕೆ ನಡೆಸಲು 2019-20ನೇ ಸಾಲಿನಲ್ಲೇ ಸರ್ಕಾರದಿಂದ ಅನುಮತಿ ಪಡೆದುಕೊಳ್ಳಲಾಗಿದೆ. ಆದರೆ ಕೊರೊನಾ ಮೊದಲ ಅಲೆಯಿಂದ 2020-21ನೇ ಸಾಲಿನಲ್ಲಿ ಶಾಲೆ ಆರಂಭಿಸುವುದು ಆಗಿರಲಿಲ್ಲ ಎಂದು ತಿಳಿಸಿದರು. ಕೊರೊನಾ ಲಾಕ್‌ಡೌನ್‌ ಸೇರಿ ಹಲವು ಸಂಕಷ್ಟಗಳಿಗೆ ದಾನಿಗಳು ಊಟೋಪಚಾರ, ಆಹಾರ ಸಾಮಗ್ರಿ ಕಿಟ್‌ ನೀಡುವ ಮೂಲಕ ಸ್ಪಂ ದಿಸಿದ್ದಾರೆ.

ಆದರೆ ಇವುಗಳು ನಿಜವಾದ ಅರ್ಹರಿಗೆ ತಲುಪಿಲ್ಲ. ಹೆಚ್ಚಿನ ಪ್ರಮಾಣ ಅನರ್ಹರ ಪಾಲಾಗಿವೆ. ನಾವೂ ನಮ್ಮ ಸಂಸ್ಥೆಯಿಂದ ಇಂಥ ಕಾರ್ಯ ಮಾಡಲು ತೀರ್ಮಾನಿಸಿದ್ದೇವು. ಆದರೆ ಕೊರೊನಾ ಮಹಾಮಾರಿ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ಹಾಗಾಗಿ ಅದಕ್ಕಿಂತ ಉತ್ತಮ ಯೋಜನೆಯಾಗಿರುವ ಬಡವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಿ ಜಾರಿಗೊಳಿಸಲಾಗುತ್ತಿದೆ. ಆಯಾ ಭಾಗದಲ್ಲಿರುವ ಶಾಲೆಗಳಲ್ಲಿ ಆಯಾ ಭಾಗದ ಮಕ್ಕಳಿಗೇ ಪ್ರವೇಶ ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೆಗೂ ಯಾವುದೇ ಶುಲ್ಕ ಪಡೆಯುವುದಿಲ್ಲ.

ಯಾರು ಬೇಕಾದರೂ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬಹುದು ಎಂದರು. ಗುಣಮಟ್ಟದ ಶಿಕ್ಷಣಕ್ಕಾಗಿ ಕಾರವಾರ, ಮಂಗಳೂರು, ಕೇರಳ ಭಾಗದ ನುರಿತ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಪ್ರತಿ ಶಾಲೆಯಲ್ಲಿ ಅಂದಾಜು 2000 ಮಕ್ಕಳವರೆಗೂ ದಾಖಲಾತಿ ಸೌಲಭ್ಯ ಇದೆ. ಉಚಿತ ಶಿಕ್ಷಣ ಕುರಿತು ಈಗಾಗಲೇ ತಾಲೂಕಿನ ಎಲ್ಲ ಕಡೆ ಪ್ರಚಾರ ಆರಂಭಿಸಲಾಗಿದೆ. ಈ ಸೌಲಭ್ಯ ಪಡೆಯಲು ಮುದ್ದೇಬಿಹಾಳ ತಾಲೂಕಿನವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಗತ್ಯ ಬಿದ್ದರೆ ಈ ತಾಲೂಕಿಗೆ ಹೊಂದಿಕೊಂಡಿರುವ ಅಕ್ಕಪಕ್ಕದ ತಾಲೂಕಿನ ಬಡವರಿಗೂ ಸೌಲಭ್ಯ ವಿಸ್ತರಿಸಲಾಗುತ್ತದೆ ಎಂದು ಮದರಿ ತಿಳಿಸಿದರು. ಸಂಸ್ಥೆಯ ರವಿ ಜಗಲಿ, ವೈ.ಕೆ. ಹೊಸಮನಿ, ವಿ.ಸಿ. ನಾಯೊRàಡಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.