ಭೂದೇವಿ ಮಡಿಲಿಗೆ ಮನಗೂಳಿ ಮುತ್ಯಾ
ಸರ್ಕಾರದ ಪರವಾಗಿ ಕುಶಾಲ ತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಲಾಯಿತು.
Team Udayavani, Jan 30, 2021, 4:57 PM IST
ವಿಜಯಪುರ: ಗುರುವಾರ ನಿಧನರಾದ ಮಾಜಿ ಸಚಿವ ಹಾಗೂ ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಅಂತ್ಯ ಸಂಸ್ಕಾರ ಶುಕ್ರವಾರ ನೆರವೇರಿತು.
ಸಿಂದಗಿ ಪಟ್ಟಣದಲ್ಲಿನ ತಮ್ಮದೇ ಅಧ್ಯಕ್ಷತೆಯಲ್ಲಿದ್ದ ಸಿ.ಎಂ. ಮನಗೂಳಿ ಮಹಾವಿದ್ಯಾಲಯದ ಆವರಣದಲ್ಲಿ ಮನಗೂಳಿ ಹಿರೇಮಠ ಅಭಿನವ ಸಂಗನಬಸವ ಶ್ರೀಗಳ ನೇತೃತ್ವದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯದ ಧಾರ್ಮಿಕ ಸಂಸ್ಕಾರದಂತೆ ಅಂತ್ಯ ಸಂಸ್ಕಾರದ ವಿಧಿವಿಧಾನ ನೆರವೇರಿಸಲಾಯಿತು.
ಹರಿಹರ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದ ಶ್ರೀ, ಕಡಕೋಳ ಮಡಿವಾಳ ಶ್ರೀ, ಸಿದ್ದಬಸವ ಕಬೀರ ಶ್ರೀ, ಬಂಥನಾಳ-ಯರನಾಳದ ಸಂಗನಬಸವ ಶ್ರೀ,
ಸಿಂದಗಿ ಸಾರಂಗಮಠದ ಸಾರಂಗ ಶ್ರೀ, ಬಬಲೇಶ್ವರ ಡಾ| ಮಹಾದೇವ ಶ್ರೀ, ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸಂಸದ ರಮೇಶ ಜಿಗಜಿಣಗಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ಎಚ್.ಡಿ.ರೇವಣ್ಣ, ಎಚ್.ಕೆ. ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಎ.ಎಸ್. ಪಾಟೀಲ ನಡಹಳ್ಳಿ, ಡಾ| ಅಜಯಸಿಂಗ್, ಎಂ.ವೈ. ಪಾಟೀಲ, ದೇವಾನಂದ ಚವ್ಹಾಣ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
ಮಾಜಿ ಶಾಸಕರಾದ ಅಪ್ಪು ಪಟ್ಟಣಶೆಟ್ಟಿ, ಡಾ| ಪಿ.ಎಂ. ನಾಡಗೌಡ, ರಮೇಶ ಭೂಸನೂರ, ಶರಣಪ್ಪ ಸುಣಗಾರ, ರಾಜು ಅಲಗೂರ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಬಾಗಲಕೋಟೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಸೇರಿದಂತೆ ಶಾಸಕ ಮನಗೂಳಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ಸರ್ಕಾರದ ಪರವಾಗಿ ಕುಶಾಲ ತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಲಾಯಿತು. ಸ್ಥಳದಲ್ಲಿದ್ದ ಮನಗೂಳಿ ಅವರ ಕುಟುಂಬ ಸದಸ್ಯರಾದ ಪತ್ನಿ ಸಿದ್ದಮ್ಮ, ಮಕ್ಕಳಾದ ಅರವಿಂದ, ಅಶೋಕ, ಡಾ| ಚನ್ನವೀರ, ಪುತ್ರಿ ಅನಿತಾ ಸೇರಿದಂತೆ ಕುಟುಂಬದವರಿಗೆ ಮಠಾಧೀಶರು, ಗಣ್ಯರು, ಸಾಂತ್ವನ ಹೇಳಿದರು. ಮನಗೂಳಿ ಮುತ್ಯಾನ ಅಂತಿಮ ದರ್ಶನ ಪಡೆಯಲು ಜಿಲ್ಲೆಯ ಮೂಲೆ ಮೂಲೆಗಳಿಂದ ಆಗಮಿಸಿದ್ದ ಹತ್ತಾರು ಸಾವಿರ ಅಭಿಮಾನಿಗಳು ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ