ಗುಮ್ಮಟನಗರಿಯಲ್ಲಿ ಕಸ ನಿರ್ವಹಣೆ ಲೋಪ: ಲೋಕಾಯುಕ್ತರ ಅಸಮಾಧಾನ


Team Udayavani, Jan 27, 2023, 12:55 PM IST

ಗುಮ್ಮಟನಗರಿಯಲ್ಲಿ ಕಸ ನಿರ್ವಹಣೆ ಲೋಪ: ಲೋಕಾಯುಕ್ತರ ಅಸಮಾಧಾನ

ವಿಜಯಪುರ: ಪ್ರವಾಸಿಗರ ಸ್ವರ್ಗ ಎನಿಸಿರುವ ವಿಜಯಪುರ ಮಹಾನಗರದಲ್ಲಿ ಕಸ ವಿಲೇವಾರಿ ಮಾಡುವಲ್ಲಿನ ನಿರ್ಲಕ್ಷ್ಯದ ಬಗ್ಗೆ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಸಮಾಧಾನ ಹೊರಹಾಕಿದ್ದಾರೆ.

ಶುಕ್ರವಾರ ಬೆಳಿಗ್ಗೆ ವಿಜಯಪುರ ಮಹಾನಗರ ಪ್ರದಕ್ಷಿಣೆ ಹಾಕಿದ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ ಅವರು, ನಗರದಲ್ಲಿ ಕಸ ವಿಲೇವಾರಿ ಸ್ಥಿತಿಗತಿ ಪರಿಶೀಲನೆ ಮಾಡಿದ್ದಾರೆ.

ನಗರ ಪ್ರದಕ್ಷಿಣೆ ಬಳಿಕ ನಗರದ ಹೊರ ಭಾಗದಲ್ಲಿರುವ ಕಸ ವಿಲೇವಾರಿ ಮತ್ತು  ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ‌ಭೇಟಿ ವೀಕ್ಷಿಸಿದ ಲೋಕಾಯುಕ್ತರು,  ನಗರದ ತ್ಯಾಜ್ಯ ನಿರ್ವಹಣೆ ಹಾಗೂ ಸಂಸ್ಕರಣೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕಸ ವಿಲೇವಾರಿ ತ್ಯಾಜ್ಯ ‌ನಿರ್ವಹಣೆ ಕುರಿತು ನಗರದ ಪ್ರದಕ್ಷಿಣೆ ಹಾಕಿದ್ದೇನೆ. ಜಿಲ್ಲಾ ಕೇಂದ್ರವೂ ಆಗಿರುವ ವಿಜಯಪುರ ಪ್ರವಾಸಿಗರು ಹೆಚ್ಚಿನ‌ ಸಂಖ್ಯೆಯಲ್ಲಿ ಭೇಟಿ ನೀಡುವ ಐತಿಹಾಸಿಕ ಸ್ಮಾರಕಗಳ ನಗರವೂ ಹೌದು. ಆದರೆ ಇಂಥ ನಗರದಲ್ಲಿ ಕಸ ವಿಲೇವಾರಿ ವಿಷಯದಲ್ಲಿ ನಿರ್ಲಕ್ಷ್ಯ ಹಾಗೂ ಸಮಸ್ಯೆ ಕಂಡು ಬಂದಿದೆ ಎಂದು ಅಸಮಾಧಾನ ಹೊರಹಾಕಿದರು.

ಪುರಾತತ್ವ ಇಲಾಖೆ ವ್ಯಾಪ್ತಿಯ ಸ್ಥಳಗಳಲ್ಲೂ ಕಸ ಹಾಕಿರುವುದು ಕಂಡು‌ ಬಂದಿದೆ. ಪಾಲಿಕೆ ಸಿಬ್ಬಂದಿ ಅಲ್ಲಿಯ ಕಸ ತೆಗೆಯಲು ಪುರಾತತ್ವ ಇಲಾಖೆ ಅವಕಾಶ ನೀಡಿಲ್ಲ ಎಂಬ ವಿಷಯ ನಮ್ಮ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಪುರಾತತ್ವ ಇಲಾಖೆ, ಜಿಲ್ಲಾಡಳಿತ, ಪಾಲಿಕೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇತರೆ ಅಧಿಕಾರಿಗಳ ಸಭೆ ನಡೆಸುವುದಾಗಿ ಹೇಳಿದರು.

ಕಸ ನಿರ್ವಹಣೆ ಹಾಗೂ ಸಂಸ್ಕರಣೆ ವಿಷಯದ ಯಾವುದೇ ಇಲಾಖೆಯ ಅಧಿಕಾರಿಗಳು ತಪ್ಪು ಮಾಡಿದರೂ ಕ್ರಮ‌ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ನಗರ‌ ಹಾಗೂ ಜಿಲ್ಲೆಯಲ್ಲಿನ ಸ್ವಚ್ಛತೆಗೆ ಆದ್ಯತೆ ನೀಡಲು ಕ್ರಮ‌ ತೆಗೆದು ಕೊಳ್ಳಲಾಗುತ್ತದೆ. ಐತಿಹಾಸಿಕ ನಗರವಾದ ವಿಜಯಪುರ ಜಿಲ್ಲೆಗೆ ಪ್ರವಾಸಿಗರು ಭೇಟಿ ನೀಡುವ ಕಾರಣ ನಗರವನ್ನು ಸುಂದರವಾಗಿ ಇಡುವಲ್ಲಿ ಮಹಾನಗರ ಹಾಗೂ ಜಿಲ್ಲೆಯ ಜನತೆ ಜವಾಬ್ದಾರಿ ನಿಭಾಯಿಸಬೇಕು. ಕಸ‌‌ ನಿರ್ವಹಣೆ ಕುರಿತು ಜನರ ಸಹಭಾಗಿತ್ವ, ಸಹಕಾರ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತರಾಬೇಕು. ಸ್ಮಾರಕಗಳು, ರಸ್ತೆ, ಚರಂಡಿ ಅಂತೆಲ್ಲ ನೋಡದೇ ಎಲ್ಲೆಂದರಲ್ಲಿ ಕಸ ಸುರಿಯುವುದನ್ನು ಜನರೂ ಬಿಡಬೇಕು ಎಂದು ಸೂಚಿಸಿದರು.

ವಿಜಯಪುರ ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗತ್ತಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ , ವಿಜಯಪುರ ತಹಶೀಲ್ದಾರ ಸಿದ್ದರಾಯ ಭೋಸಗಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.