ವೇತನ ಪಾವತಿಗೆ ಕೆಬಿಜೆಎನ್ನೆಲ್ ಗಾರ್ಡನ್ ನೌಕರರ ಆಗ್ರಹ
Team Udayavani, Sep 9, 2020, 4:30 PM IST
ವಿಜಯಪುರ: ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಲಮಟ್ಟಿ ಕೆಬಿಜೆಎನ್ನೆಲ್ ಗಾರ್ಡನ್ ಡಿ ಗ್ರೂಪ್ ನೌಕರರ 5 ತಿಂಗಳ ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಮಿಕರು ಬಾಕಿ ಇರುವ 4 ತಿಂಗಳ ವೇತನ ಕೂಡಲೆ ಪಾವತಿಸಲು ಕ್ರಮ ಕೈಗೊಳ್ಳಬೇಕು. ಸಮವಸ್ತ್ರ ಮತ್ತು ಅಗತ್ಯ ವಸ್ತುಗಳು ನೀಡಬೇಕು. ವಿಶ್ರಾಂತಿ ಕೋಣೆ ನಿರ್ಮಿಸಬೇಕು. ವಾರಕ್ಕೊಮ್ಮೆ ರಜೆ ನಿಡಬೇಕು ಎಂಬುದು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ವೇತನ ಸಿಗದ ಕಾರಣ ಜೀವನ ನಿರ್ವಹಣೆಗೆ ತಾವು ಎದುರಿಸುತ್ತಿರುವ ಸಮಸ್ಯೆ ನಿವೇದಿಸಿಕೊಂಡರು.
ಈ ವೇಳೆ ಎಐಯುಟಿಯುಸಿ ಸಂಘದ ಅಧ್ಯಕ್ಷ ಎಚ್.ಟಿ. ಮಲ್ಲಿಕಾರ್ಜುನ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಯಾವ ಕಾರ್ಮಿಕರ ವೇತನ ಬಾಕಿ ಉಳಿಸಿಕೊಳ್ಳದೆ ಪ್ರತಿ ತಿಂಗಳು ಪಾವತಿಸಲು ನಿರ್ದೇಶನ ನೀಡಿದೆ. ಆದರೂ ಜಿಲ್ಲೆಯ ಆಲಮಟ್ಟಿ ಗಾರ್ಡನ್ನಲ್ಲಿ ಕೆಲಸ ಮಾಡುವ ಕಾರ್ಮಿಕರ 5 ತಿಂಗಳ ವೇತನ ಪಾವತಿಸದೇ ಬಾಕಿ ಉಳಿಸಿಕೊಳ್ಳಲಾಗಿದೆ. ಇದರಿಂದ ಗಾರ್ಡನ್ ನೌಕರರ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ದೂರಿದರು.
ಇಲ್ಲಿವರೆಗೆ ಆಳ್ವಿಕೆ ಮಾಡಿದ ಎಲ್ಲ ಸರ್ಕಾರಗಳು ದೇಶದ ಸಂಪತ್ತನ್ನು ಲೂಟಿ ಮಾಡುವಬಂಡವಾಳಗಾರರ, ಕೋಟ್ಯಾಧಿಪತಿಗಳ ಸೇವೆ ಮಾಡಿವೆ. ಆದ್ದರಿಂದ ಈ ಸರ್ಕಾರಗಳ ಮೇಲೆ ಯಾವುದೇ ಭರವಸೆ ಇಡದೆ ಸಂಧಾನಾತೀತ ಹೋರಾಟ ಬೆಳೆಸುತ್ತ ಸಂಘಟನೆಯನ್ನು ಬಲಿಷ್ಠವಾಗಿಕಟ್ಟುವ ಮೂಲಕ ಕಾರ್ಮಿಕ ವಿರೋಧಿ , ಜನ ವಿರೋಧಿ ಸರ್ಕಾರಗಳನ್ನು ಕಿತ್ತೆಸೆಯಬೇಕೆಂದು ಕರೆ ನೀಡಿದರು.
ಬಾಕಿ ಇರುವ ವೇತನ, ಸಮವಸ್ತ್ರ ಮತ್ತು ವಿಶ್ರಾಂತಿ ಕೋಣೆ ಈ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿದಾಗ ಸ್ಥಳಕ್ಕೆ ಆಗಮಿಸಿದ್ದ ಅಪರ ಜಿಲ್ಲಾಧಿಕಾರಿಗಳು ಆಲಮಟ್ಟಿ ಕೆಬಿಜೆಎನ್ನೆಲ್ ಮುಖ್ಯ ಎಂಜಿನಿಯರ್ ಜೊತೆ ಮಾತನಾಡಿ ಹೆಚ್ಚಳ ವೇತನದೊಂದಿಗೆ 8 ದಿನದಲ್ಲಿ ಕಾರ್ಮಿಕರ ಖಾತೆಗೆವೇತನ ಪಾವತಿಸುವ ಭರವಸೆ ನೀಡಿದ್ದರು.ಇದೀಗ ಭರವಸೆ ಈಡೇರಿಸುವಲ್ಲಿ ಅಧಿ ಕಾರಿಗಳು ವಿಫಲವಾಗಿದ್ದಾರೆ ಎಂದು ದೂರಿದರು.
ಸಂಘಟನೆ ಪ್ರಮುಖರಾದ ದ್ಯಾಮಣ್ಣ ಬಿರಾದಾರ,ಮೀನಾಕ್ಷಿ ರಾಠೊಡ, ಸಿ.ಎ. ಕುಂಬಾರ, ಅಖಂಡೇಶಬಡಿಗೇರ, ಅನಿತಾ ಜಾಧವ, ಚಂದ್ರಶೇಖರ ಮಾಳಿ, ಯಮನೂರಿ, ಯಲ್ಲಮ್ಮ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.