ಉದ್ಯೋಗ-ವೇತನ ಭಾಗ್ಯ ನೀಡಲಿ
Team Udayavani, Aug 8, 2017, 3:22 PM IST
ವಿಜಯಪುರ: ರಾಜ್ಯದ ಜನರಿಗೆ ಹಲವು ಭಾಗ್ಯ ಕಲ್ಪಿಸಿರುವ ರಾಜ್ಯ ಸರ್ಕಾರ ಕಾರ್ಮಿಕರಿಗೆ ವೇತನ ಭಾಗ್ಯ ಹಾಗೂ ಉದ್ಯೋಗ ಭದ್ರತೆ ಭಾಗ್ಯ ಜಾರಿಗೆ ತರಬೇಕು ಎಂದು ಸಿಐಟಿಯು ಅಧ್ಯಕ್ಷೆ ಎಸ್. ವರಲಕ್ಷ್ಮೀ ಆಗ್ರಹಿಸಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಭಾಗ್ಯಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ದುಡಿಯುವ
ಕೈಗಳಿಗೆ ಕೆಲಸ ಒದಗಿಸಲು ಉದ್ಯೋಗ ಭಾಗ್ಯ ಕಲ್ಪಿಸುವತ್ತ ಚಿತ್ತ ಹರಿಸಬೇಕು. ದುಡಿಯುವ ಶ್ರಮಿಕರಿಗೆ ಶ್ರಮಕ್ಕೆ ತಕ್ಕ ಪ್ರತಿಫಲವಾಗಿ ಕನಿಷ್ಠ
ವೇತನ ಭಾಗ್ಯ ಕಲ್ಪಿಸಬೇಕು. ಇದರಿಂದ ದುರ್ಬಲ ವರ್ಗದ ಜನರು ಕೂಡ ಆರ್ಥಿಕ ಸಬಲೀಕರಣಕ್ಕೆ ಸಾಧ್ಯವಾಗಲಿದೆ ಎಂದರು.
ಕಾರ್ಮಿಕರ ಶಕ್ತಿ ಹಾಗೂ ಧ್ವನಿ ಅಡಗಿಸಲು ಕೇಂದ್ರ ಸರ್ಕಾರ ಕಾರ್ಮಿಕ ಪರವಾದ ಕಾನೂನುಗಳನ್ನು ವ್ಯವಸ್ಥಿತವಾಗಿ ನಿರಂತರವಾಗಿ ರದ್ದು ಮಾಡುತ್ತ ಸಾಗಿದೆ. ಕಾರ್ಮಿಕ ಸಂಘಟನೆಗಳ ಹೋರಾಟ ಹತ್ತಿಕ್ಕುವ ಹುನ್ನಾರ ನಡೆಸಿದೆ. 40ಕ್ಕಿಂತ ಕಡಿಮೆ ಕಾರ್ಮಿಕರನ್ನು ಹೊಂದಿರುವ ಕೈಗಾರಿಕೆಗಳಿಗೆ ಕಾರ್ಖಾನೆ ಕಾಯ್ದೆಯಿಂದ ವಿನಾಯ್ತಿ ನೀಡಲು ಮುಂದಾಗಿದೆ. ಇದರಿಂದ ಕಾರ್ಮಿಕರು ಅನ್ಯಾಯದ ವಿರುದ್ಧ ಧ್ವನಿ ಎತ್ತದಂತೆ ಮಾಡುತ್ತಿದೆ. ದೇಶದ
ಎಲ್ಲೆಡೆ ಹೆಚ್ಚುತ್ತಿರುವ ಹೊರ ಗುತ್ತಿಗೆ ವ್ಯವಸ್ಥೆಯಿಂದ ಕಾರ್ಮಿಕರ ಶೋಷಣೆ ಮಿತಿ ಮೀರಿದ್ದು, ವೇತನ, ರಜೆ, ವೈದ್ಯಕೀಯ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುತ್ತಿಲ್ಲ. ಪ್ರಶ್ನಿಸುವ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಕಿಡಿ ಕಾರಿದರು. ಮತ್ತೂಂದೆಡೆ ಸರ್ಕಾರಿ ಉದ್ದಿಮೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಇದರಿಂದ ಭವಿಷ್ಯದಲ್ಲಿ ನಿರುದ್ಯೋಗಿಗಳು ಉದ್ಯೋಗ ದೊರೆತರೂ ಭವಿಷ್ಯ ರೂಪಿಸಿಕೊಳ್ಳಲು ಬಂಡವಾಳಶಾಹಿ ಜನರ ಕೈಗೊಂಬೆಯಂತೆ ಜೀವನ ನಡೆಸುವಂತೆ ಮಾಡುವ ಹುನ್ನಾರ ನಡೆದಿದೆ ಎಂದು ದೂರಿದರು. ಇಂಧನ ಇಲಾಖೆ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಎರಡು ದಶಕಗಳಿಂದ ಗುತ್ತಿಗೆ ಆಧಾರಿತ ಸೇವೆ ಸಲ್ಲಿಸುತ್ತಿರುವರನ್ನೇ ನೇಮಿಸಬೇಕು. ಇಲ್ಲವಾದಲ್ಲಿ ವಯೋಮಿತಿ ಮೀರುತ್ತಿರುವ ಈ ನೌಕರರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಈಗಿರುವ ಸಿಬ್ಬಂದಿ ಸೇವೆಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ತಮಿಳುನಾಡಿನಲ್ಲಿ ಯಾವುದೇ ಕಾರ್ಮಿಕ 365 ದಿನ ಸೇವೆ ಸಲ್ಲಿಸಿದ್ದರೆ ಸೇವೆ ಕಾಯಂ ಮಾಡುವ ಕಾನೂನು ಜಾರಿಗೆ ಬಂದಿದೆ. ಅದೇ ಮಾದರಿ ಕಾನೂನು ರಾಜ್ಯದಲ್ಲೂ ಜಾರಿಗೆ ಬರಬೇಕು. ಗುತ್ತಿಗೆ ಸಂಸ್ಥೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುವ ಕಾರ್ಮಿಕರ ಸೇವೆ ಕಾಯಂ ಮಾಡಬೇಕು ಎಂದರು.
ಕಾರ್ಮಿಕ ಸಂಘಟನೆ ಮುಖಂಡರಾದ ಭೀಮಶಿ ಕಲಾದಗಿ, ಅಣ್ಣಾರಾಯ ಈಳಿಗೇರ, ಸುರೇಖಾ ರಜಪೂತ, ಲಕ್ಷ್ಮ ಣ ಹಂದ್ರಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ