ಏಪ್ರಿಲ್‌ ಕೊನೆಯವಾರದವರೆಗೆ ನೀರು ಕೊಡಿ: ಅರವಿಂದ ಕುಲಕರ್ಣಿ


Team Udayavani, Mar 11, 2022, 3:22 PM IST

14water

ಆಲಮಟ್ಟಿ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಮಳೆಯು ಸಕಾಲಕ್ಕೆ ಸಮರ್ಪಕವಾಗಿ ಮಳೆಯಾಗದಿರುದರಿಂದ ಕಾಲುವೆ ನೀರನ್ನು ನಂಬಿ ಬಿತ್ತನೆ ಮಾಡಿದ ರೈತರ ಬೆಳೆಗಳಿಗೆ ಏಪ್ರಿಲ್ ಕೊನೆಯ ವಾರದವರೆಗೆ  ನೀರು ಕೊಡದಿದ್ದರೆ ಬೆಳೆಹಾನಿಯಾಗಲಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.

ಶುಕ್ರವಾರ ಇಲ್ಲಿನ ಕೆಬಿಜೆನ್ನೆಲ್ ಮುಖ್ಯ ಅಭಿಯಂತರರಿಗೆ ಮನವಿ ಅರ್ಪಿಸಿ ಮಾತನಾಡಿದರು.

ಆಲಮಟ್ಟಿ ಲಾಲಬಹದ್ದೂರಶಾಸ್ತ್ರಿ ಜಲಾಶಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಹಿಂಗಾರು ಮಳೆಗಳು ಸಕಾಲಕ್ಕೆ ಸಮರ್ಪಕವಾಗಿ ಆಗದಿರುವದರಿಂದ  ರೈತರು ಶಾಸ್ತ್ರಿ ಜಲಾಶಯದ ನೀರನ್ನು ನಂಬಿ ಬಿತ್ತನೆ ಮಾಡಿದ್ದಾರೆ. ಕಾಲುವೆ ನೀರನ್ನು ನಂಬಿ ಬಿತ್ತನೆ ಮಾಡಿದ ಬೆಳೆಗಳು ರೈತರ ಕೈಗೆ ಬರಬೇಕಾದರೆ ಎಪ್ರಿಲ್ ಕೊನೆಯವರೆಗೆ ಕಾಲುವೆಗಳ ಮುಖಾಂತರ ರೈತರ ಜಮೀನಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಸಂಘದವತಿಯಿಂದ ಆಮರಣ ಉಪವಾಸ ಸತ್ಯಾಗ್ರಹವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬೆಂಗಳೂರಿನಲ್ಲಿ ಜಲಸಂಪನ್ಮೂಲ ಇಲಾಖೆಯ ಆಪರ ಕಾರ್ಯದರ್ಶಿ ರಾಕೇಶಸಿಂಗ್ ನೇತೃತ್ವದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯ ವೇಳೆ ಜಲಾಶಯಗಳಲ್ಲಿರುವ ನೀರಿನ ಲಭ್ಯತೆಯ ಆಧಾರದಲ್ಲಿ 2022 ಮಾರ್ಚ್ 17ವರೆಗೆ ಕಾಲುವೆಗಳ ಮೂಲಕ ರೈತರ ಜಮೀನಿಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು  ಸಭೆಯ ನಂತರದ ದಿನಗಳಲ್ಲಿ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗಿ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದು ಕಳೆದ ವರ್ಷಕ್ಕಿಂತಲೂ ಈ ವರ್ಷ 19ಟಿಎಮ್ ಸಿ ನೀರು ಸಂಗ್ರಹವಿದೆ ಎಂದರು.

ಸಂಗ್ರಹವಿರುವ ನೀರಿನಲ್ಲಿ ಕಾಲುವೆಗಳ ಮೂಲಕ ರೈತರ ಜಮೀನಿಗೆ ನೀರು ಹರಿಸಬೇಕು ಬೇಸಿಗೆಯಲ್ಲಿ ಜನ-ಜಾನುವಾರು ಹಾಗೂ ವನ್ಯಜೀವಿಗಳ ರಕ್ಷಣೆಗೆ ಕಾಲುವೆಗಳ ಮೂಲಕ ಎಲ್ಲ ಕೆರೆಗಳನ್ನು ತುಂಬಿಸಬೇಕು  ಮಾರ್ಚ್ 17ರ ನಂತರ ನೀರು ಬಂದ್ ಮಾಡಬಾರದು ಎಂದು ಹೇಳಿದರು.

ಐಸಿಸಿ ಸಭೆಯಲ್ಲಿ ತೀರ್ಮಾನಿಸಿದಂತೆ ಮಾ. 17ಕ್ಕೆ ನೀರು ಹರಿಸುವದನ್ನು ಬಂದ್ ಮಾಡುವದನ್ನು ಕೈಬಿಟ್ಟು ನೀರು ಹರಿಸುವ ತೀರ್ಮಾನವನ್ನು 3 ದಿನಗಳ ಒಳಗಾಗಿ ತಿಳಿಸದೇ ಇದ್ದರೆ ಸಂಘದವತಿಯಿಂದ ಆಮರಣ ಉಪವಾಸ ಮಾಡಲಾಗುವದು ಎಂದು ಜಿಲ್ಲಾ ಪ್ರಧಾನಕಾರ್ಯದರ್ಶಿ ಅರವಿಂದ ಕುಲಕರ್ಣಿ ಎಚ್ಚರಿಸಿದರು.

ಇದನ್ನೂ ಓದಿ:ರೈತ ಸಮಾವೇಶದಲ್ಲಿ ಚುನಾವಣೆ ರಾಜಕೀಯ ನಿರ್ಧಾರ

ಮುಖ್ಯ ಅಭಿಯಂತರ ಪರವಾಗಿ ಮನವಿ ಸ್ವೀಕರಿಸಿದ ಅಣೆಕಟ್ಟು ವೃತ್ತ ಅಧೀಕ್ಷಕ ಅಭಿಯಂತರ ಡಿಬಸವರಾಜ ಅವರು ತಮ್ಮ ಮನವಿಯನ್ನು ಮುಖ್ಯ ಅಭಿಯಂತರರಿಗೆ ತಲುಪಿಸಲಾಗುವುದು. ರೈತರ ಬೇಡಿಕೆ ಹಾಗೂ ನೀರಿನ ಲಭ್ಯತೆಯ ಬಗ್ಗೆ ಮಾ10ರಂದು ವಿಡಿಯೋ ಕಾನ್ಫರೆನ್ಸ್ ಮ‌ೂಲಕ ನಾಲ್ಕು ವಲಯಗಳ ಮುಖ್ಯ ಅಭಿಯಂತರರ  ಸಭೆಯನ್ನು ಐಸಿಸಿ ಸಮಿತಿಯ ಕಾರ್ಯದರ್ಶಿಗಳು ನಡೆಸಿದ್ದಾರೆ. ಸರ್ಕಾರದ ಆದೇಶದಂತೆ ಮುಂದಿನ ಕ್ರಮಕೈಗೊಳ್ಳಲಾಗುವದು ಎಂದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಈರಣ್ಣ ದೇವರಗುಡಿ, ರಾಜೇಸಾ ವಾಲಿಕಾರ, ರೇವಪ್ಪ ಪೋಲೇಶಿ, ಬಸಪ್ಪ ಉಪ್ಪಾರ, ಶ್ರೀಶೈಲ ಸಾಸನೂರ, ಗುರಲಿಂಗಪ್ಪ ಪಡಸಲಗಿ, ಶೇಖಪ್ಪ ಸಜ್ಜನ, ಮಲ್ಲಪ್ಪ ಪಡಸಲಗಿ, ಸಿಕಿಂದ್ರಪ್ಪ ಕೊಠಾರ ಮೊದಲಾದವರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.