ನಮ್ಮೂರ ಜಾತ್ರೆಗೆ ಮದ್ದಿನ ಮೆರುಗು


Team Udayavani, Jan 16, 2018, 12:48 PM IST

vij-1.jpg

ವಿಜಯಪುರ: ಶತಮಾನೋತ್ಸವದ ಸಂಭ್ರಮದಲ್ಲಿರುವ ಐತಿಹಾಸಿಕ ವಿಜಯಪುರ ನಗರದ ಸಂಕ್ರಾತಿಯ ನಮ್ಮೂರ ಹಬ್ಬದಲ್ಲಿ ಸೋಮವಾರ ರಾತ್ರಿ ಬಾನಂಗಳದ ಕಾರ್ಮೋಡದಲ್ಲಿ ಸಿಡಿಯುತ್ತಿದ್ದ ಪಟಾಕಿ ರಂಗು ಬೆಳಕಿನ ಚಿತ್ತಾರ ವೈಭವ ಮೂಡಿಸಿತ್ತು.

ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ದೇಶ್ವರ ಜಾತ್ರೆ ನಿಮಿತ್ತ ಹಮ್ಮಿಕೊಂಡಿದ್ದ ಮದ್ದು ಸುಡುವ ಕಾರ್ಯಕ್ರಮದಲ್ಲಿ ಕವಿದ ಕತ್ತಲೆ ಮೋಡದಲ್ಲಿ ಬಗೆ ಬಗೆಯ ಸದ್ದು ಹಾಗೂ ವರ್ಣರಂಜಿತ ಚಿತ್ತಾರದ ಬೆಳಕಿನ ಮೋಡಿ ಮಾಡುತ್ತಿದ್ದವು. ಮದ್ದು ಸುಡುವ ವೈಭವ ಕಣ್ತುಂಬಿಕೊಳ್ಳಲು ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಮದ್ದು ಸುಡುವ ಕಾರ್ಯಕ್ರಮಕ್ಕೆ ಚಾಲನೆ ದೊರೆಯುತ್ತಲೇ, ಪ್ರತಿ ಮದ್ದಿನ ವರ್ಣರಂಜಿತ ಸೋಟದ ಸಂದರ್ಭದಲ್ಲಿ ನೆರೆದ ಜನರಿಂದಲೂ ಮಕ್ಕಳಿಂದ ಕೇಳಿ ಬರುತ್ತಿದ್ದ ಕೇಕೆ ಹಾಗೂ ಚಪ್ಪಾಳೆಗಳು ಮುಗಿಲು ಮುಟ್ಟಿದ್ದವು. 

ಸಿಡಿಯುತ್ತಿದ್ದ ಪಟಾಕಿಗಳು ಸುಂಯ್‌ ಗುಡುತ್ತ ಬಾನಿಗೆ ನೆಗೆಯುತ್ತ ಬಣ್ಣದ ರಂಗೋಲಿ ಬಿಡಿಸುತ್ತಿದ್ದವು. ಬೆಂಕಿಯಲ್ಲಿಯೇ ಅರಳಿದ ನಾನಾ ರೀತಿಯ ಚಕ್ರಗಳು, ತ್ರಿಶೂಲ, ದೇವಾಲಯ, ಕಾರಂಜಿ, ಸ್ವಾಗತ ಕಮಾನು, ಜಲಪಾತ ಪಟಾಕಿಯ ವಿಶಿಷ್ಟ ಚಿತ್ತಾರಗಳು ಕಣ್ಮನ ಸೆಳೆಯುತ್ತಿದ್ದವು. 

ಚಿತ್ತಾಕರ್ಷಕ ಮದ್ದು ಸುಡುವ ಕಾರ್ಯಕ್ರಮ ವೀಕ್ಷಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ನೆರೆದಿದ್ದರು. ಮಧ್ಯಾಹ್ನದಿಂದಲೇ ಜಿಲ್ಲಾ ಕ್ರೀಡಾಂಗಣದತ್ತ ಧಾವಿಸುತ್ತಿದ್ದ ಜನರು ಮದ್ದಿನ ರಂಗಿನಾಟ ವೀಕ್ಷಿಸಲು ಸ್ಥಳ ಹಿಡಿದುಕೊಂಡು ಕುಳಿತಿದ್ದರು. ಮತ್ತೂಂದೆಡೆ ಪರಿಸ್ಥಿತಿ ನಿಭಾಯಿಸಲು ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್ ಕಂಡುಬಂತು.

ಚಾಲನೆ: ಸಿದ್ದೇಶ್ವರ ರತ್ನ ಪ್ರಶಸ್ತಿ ವಿತರಣೆ ಹಾಗೂ ಮದ್ದು ಸುಡುವ ಸಮಾರಂಭಕ್ಕೆ ಎಸ್‌ಪಿ ಕುಲದೀಪ ಜೈನ್‌ ಚಾಲನೆ ನೀಡಿದರು. ಸಿದ್ದೇಶ್ವರ ಸಂಸ್ಥೆ ದ್ಯಕ್ಷ, ಮೇಲ್ಮನೆ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಆಧ್ಯಕ್ಷತೆ ವಹಿಸಿದ್ದರು. ಶಾಸಕ ರಾಜು ಲಗೂರ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ಪಾಟೀಲ, ಸಹಾಯಕ ಆಯುಕ್ತ ಶಂಕರ ವಣಕ್ಯಾಳ, ಎಎಸ್‌ಪಿ ಶಿವಕುಮಾರ ಗುಣಾರಿ, ಶೈಲಜಾ ಪಾಟೀಲ ಯತ್ನಾಳ, ಸಂ.ಗು. ಸಜ್ಜನ ಇದ್ದರು.

ಸಿದ್ದೇಶ್ವರ ರತ್ನ ಪ್ರದಾನ ಹಿಂದೂಪರ ಹೋರಾಟಗಾರ ಪ್ರಮೋದ ಮುತಾಲಿಕ, ಸಮಾಜ ಸೇವಕ ದುಂಡಪ್ಪ
ಗುಡ್ಡೊಡಗಿ, ರವಿ ಕಿತ್ತೂರ, ಜಿಲ್ಲೆಯ ಮೊಟ್ಟ ಮೊದಲ ಮಹಿಳಾ ಪೈಲಟ್‌ ಪ್ರೀತಿ ಬಿರಾದಾರ, ಶಿಕ್ಷಣ ಕ್ಷೇತ್ರದ ಸಾಧನೆಗೆ ಬಸವರಾಜ ಕೌಲಗಿ, ಶಿವಾನಂದ ಕೆಲೂರ, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಮುಳವಾಡದ ಪರಗೊಂಡಪ್ಪ ಸಿದ್ದಾಪುರ, ಕಲಾ ಕ್ಷೇತ್ರದ ಸಾಧನೆಗಾಗಿ ಸಾರವಾಡದ ಶಿವನಗೌಡ ಕೋಟಿ, ಪ್ರಶಾಂತ ಚೌಧರಿ, ಕ್ರೀಡಾ ಕ್ಷೇತ್ರದಲ್ಲಿ ತೊನಶ್ಯಾಳದ
ಗಿರಿಮಲ್ಲಪ್ಪ ಉಮ್ಮವಗೋಳ, ಕ್ರೀಡೆ ಜೊತೆಗೆ ಸಾವಯವ ಕೃಷಿಯಲ್ಲಿ ಸಾಧನೆ ಮಾಡಿರುವ ಹುನ್ನೂರಿನ ರತನ ಮಠಪತಿ, ಕೃಷಿ ಸಾಧಕ ಬೆನಕನಹಳ್ಳಿಯ ರಾಜಶೇಖರ ನಿಂಬರಗಿ, ಎಸ್‌.ಎಚ್‌. ನಾಡಗೌಡ, ವೈದ್ಯಕೀಯ ಕ್ಷೇತ್ರದ
ಸಾಧನೆಗೆ ಸಿದ್ದಪ್ಪ ಪರಾಂಡೆ, ಪತ್ರಿಕಾ ಕ್ಷೇತ್ರದ ಸಾಧನೆಗಾಗಿ ಮಹೇಶ ಶಟಗಾರ, ಜಿ.ಎಸ್‌. ಕಮತರ, ಡಿ.ಬಿ. ನಾಗರಾಜ, ಕ್ಯಾಮೆರಾಮನ್‌ ಸಂಗಮೇಶ ಕುಂಬಾರ ಅವರಿಗೆ ಸಿದ್ದೇಶ್ವರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.