ಸರ್ಕಾರದ ನೆರವಿಗೆ ಕೈ ಚಾಚದೇ ಗೋ ಸಂರ್ವರ್ಧನೆಗೆ ಮುಂದಾಗಿ


Team Udayavani, Dec 19, 2017, 2:54 PM IST

vij-2.jpg

ವಿಜಯಪುರ: ದೇಶಿ ಗೋವುಗಳ ಸಂರಕ್ಷಣೆ ಆಗಬೇಕಿದ್ದರೆ, ಗೋವು ಪಾಲನೆ ಉದ್ಯಮವಾಗಿ ರೂಪುಗೊಳ್ಳಬೇಕು. ಸರ್ಕಾರದ ನೆರವಿಗೆ ಕೈ ಚಾಚದೇ ಗೋವು ಗೋಸಂರ್ವರ್ಧನೆಗೆ ಆದ್ಯತೆ ನೀಡಲು ರೈತರನ್ನು ಪ್ರೇರೇಪಿಸಬೇಕು. ಗೋ ಪತಂಜಲಿಯನ್ನು ಉದ್ಯಮವಾಗಿ
ಬೆಳೆಸುವುದು ನಮ್ಮ ಉದ್ದೇಶ. ಇದಕ್ಕಾಗಿ ರಾಮಚಂದ್ರಾಪುರ ಮಠ ತನ್ನನ್ನು ಸಂಪೂರ್ಣ ಸಮರ್ಪಿಸಿಕೊಂಡಿದೆ ಎಂದು ರಾಘವೇಶ್ವರ ಭಾರತಿ ಶ್ರೀಗಳು ಹೇಳಿದರು.

ಸೋಮವಾರ ಎಳ್ಳ ಅಮಾವಾಸ್ಯೆ ಸಂದರ್ಭದಲ್ಲಿ ನಗರದಲ್ಲಿ ಗೋ ಸಂರಕ್ಷಣೆ ಜಾಗೃತಿ ಜಾಥಾ ಬಳಿಕ ಸಿದ್ದೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು, ಅನ್ನ ನೀಡಿದ ಭೂಮಿಗೆ ಕೃತಜ್ಞತೆ ಸಲ್ಲಿಸುವ ಚರಗ ಚೆಲ್ಲುವ ಪರ್ವಕಾಲದಲ್ಲಿ ಮನುಷ್ಯನಿಗೆ ತನ್ನ ಜೀವನವೆ ಧಾರೆ ಎರೆಯುವ ಗೋವುಗಳ ಸಂರಕ್ಷಣೆ ಜಾಥಾ-ಸಮಾವೇಶ ಐತಿಹಾಸಿಕ ವಿಜಯಪುರ ನಗರದಲ್ಲಿ ನಡೆಯುತ್ತಿರುವುದು ಮಹತ್ವದ ಸಂಗತಿ ಎಂದರು.

ದೇಶದ ಸಂಪತ್ತಿನಲ್ಲಿ ಪ್ರಮುಖವಾಗಿರುವ ಗೋವುಗಳ ಸಂರಕ್ಷಣೆ ದೇಶದ ಧರ್ಮ ಹಾಗೂ ಸಂಸ್ಕೃತಿಗೆ ನೀಡಬಹುದಾದ ಅತಿದೊಡ್ಡ ಸೇವೆ ಎಂದರೆ ಗೋ ಸೇವೆ. ಭಾರತ ಭವಿಷ್ಯದ ಪೀಳಿಗೆಗೆ ಬಹು ದೊಡ್ಡ ಕೊಡುಗೆ ಆಗಲಿದೆ. ಸ್ವಾರ್ಥಮುಕ್ತ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೂ ಮಿಗಿಲಾದ ಆಂದೋಲನ ರೂಪಿಸಿರುವ ಶ್ರೀಮಠದ ಆಶಯ ಈಡೇರಿಸಲು ರೈತರು ಮಾತ್ರವಲ್ಲ ಸಮಾಜದ ಎಲ್ಲರೂ ಕೈ ಜೋಡಿಸಬೇಕು. ಗೋವು ಸಾಕಲಾಗದ ಪರಿಸ್ಥಿತಿ ನಿರ್ಮಾಣವಾದಲ್ಲಿ ರೈತರು ನಮ್ಮ ಶ್ರೀಮಠದ ಗೋಶಾಲೆಗೆ ನೀಡಿದರೂ ನಾವು ಸಾಕುತ್ತೇವೆ. ಇದಕ್ಕಾಗಿ ಗೋ ಸಂಜೀವಿನಿ ನಿ  ಸ್ಥಾಪಿಸಿ ಗೋಮಾತೆ ಸಂರಕ್ಷಣೆಗೆ ರಾಮಚಂದ್ರಾಪುರ ಮಠ ತನ್ನ ಬದ್ಧತೆ ತೋರಲಿದೆ ಎಂದರು.

ಮನುಷ್ಯ ಮಾತ್ರ ಎಲ್ಲ ಜೀವಿಗೂ ಬದುಕುವ ಹಕ್ಕಿದ್ದು, ಯಾವುದೇ ಜೀವಿಯನ್ನು ಕೊಲ್ಲುವ ಅಕಾರ ಯಾರಿಗೂ ಇಲ್ಲ. ಹೀಗಾಗಿ ಗೋ ಸಂರಕ್ಷಣೆ ಅಗತ್ಯದ ಕುರಿತಿ ಪ್ರತಿ ಮನೆಗೆ ಆಂದೋಲನದ ಮಾದರಿಯಲ್ಲಿ ತಲುಪಿಸುವ ಮಹ್ವದ ಕಾರ್ಯವನ್ನು ಗೋಕಿಂಕರರು ಮಾಡಬೇಕು.

ಎತ್ತು ರೈತನ ಬದುಕನ್ನು ಮಾತ್ರವಲ್ಲದೇ ದೇಶದ ಆರ್ಥಿಕತೆಯನ್ನೇ ಎತ್ತುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ಕೃಷಿಯಲ್ಲಿ ಯಾಂತ್ರಿಕ ಜೀವನ ಎಂದಿಗೂ ಗೋವು-ಎತ್ತುಗಳಿಗೆ ಸಮನಾಗಲು ಸಾಧ್ಯವಿಲ್ಲದ ಕಾರಣ ಹೋಲಿಕೆಯೂ ಅಸಮಂಜಸ. ಯಂತ್ರಗಳಿಂದ ಮಾಡುವ ಉಳುಮೆ ಕೃಷಿಯಲ್ಲಿ ಸೂಕ್ಷ್ಮಜೀವಿಗಳನ್ನು ನಾಶ ಮಾಡುತ್ತದೆ. ಈ ಹಿನ್ನೆಲೆಯಲ್ಲಿಯೇ ಖ್ಯಾತ ವಿಜ್ಞಾನಿ ಐನ್‌ಸ್ಟಿàನ್‌ ಅವರು ಭಾರತದ ಸಿ.ವಿ.ರಾಮನ್‌ ಅವರಿಗೆ ಪತ್ರ ಬರೆದು ಗೋ ಆಧಾರಿತ ಕೃಷಿಯನ್ನೇ ಎಂದಿಗೂ ಮಾಡಬೇಕು ಎಂದು ಹೇಳಿದ್ದನ್ನು ಸ್ಮರಿಸಿದರು. 

ಗೋವು ಎಲ್ಲ ಧರ್ಮೀಯರ ಪಾಲಿಗೂ ಪವಿತ್ರ. ಆದ್ದರಿಂದ ಗೋಸಂರಕ್ಷಣೆ ಸಮಸ್ತ ಭಾರತೀಯರ ಹೊಣೆ. ಗೋಹತ್ಯೆಯನ್ನು ಭಾರತದಲ್ಲಿ ಸಂಪೂರ್ಣ ನಿಷೇಧಿಸಿ, ಕಠಿಣ ಕಾನೂನು ತರುವುದು ಸರ್ಕಾರದ ಕರ್ತವ್ಯ. ಇದಕ್ಕಾಗಿ ಭಾರತೀಯರ ಈ ಭಾವನೆಯನ್ನು ಆಳುವ ವರ್ಗಕ್ಕೆ ತಿಳಿಸಬೇಕಿದೆ. ಹಾಗಂತ ರಾಜಕೀಯ ನಾಯಕರ ಮನೆ ಅಲೆಯದೇ ಜನರ ಮನೆಗೆ ಅಲೆದು ಜಾಗೃತಿ ಮೂಡಿಸುತ್ತಿದ್ದೇವೆ. ಸಮಾಜವೇ ಗೋ ಸಂರಕ್ಷಣೆಗೆ ಆಗ್ರಹ ಮಾಡಿ, ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತದೆ ಎಂದರು. 

ಬಾಗಲಾಂವ್‌ ಗುರುದೇವಾಶ್ರಮದ ಅಮೃತಾನಂದ ಶ್ರೀಗಳು, ಕೊಲ್ಹಾರ ದಿಂಗಬರೇಶ್ವರ ಮಠದ ಕಲ್ಲಿನಾಥ ಶ್ರೀಗಳು, ಮೇಲ್ಮನೆ ಸದಸ್ಯ ಬಸವನಗೌಡ ಪಾಟೀಲ ಯತ್ನಾಳ ಮಾತನಾಡಿದರು. ರಾಮಚಂದ್ರಾಪುರ ಮಠದ ಜಿಲ್ಲಾ ಸಂಪರ್ಕಾಧಿ ಕಾರಿ ಕೆ.ಪಿ. ಅಮ್ಮಂಗಲ್ಲು, ಬಸವರಾಜ ಶ್ರೀಗಳು, ಶಿವಾನಂದ ಶ್ರೀಗಳು, ಆನಂದ ಕುಲಕರ್ಣಿ, ರಾಜ್ಯ ಗೋಯಾತ್ರೆ ಸಂಚಾಲಕ ಸಾರಂಗ ಶ್ರೀನಾಥ, ಗುರು ಗಚ್ಚಿನಮಠ ಇದ್ದರು. ವಿನಾಯಕ ತಲವಟ್ಟ ನಿರೂಪಿಸಿದರು. 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.