ಜಪಾನ್ ಪ್ರಧಾನಿ ಶಿಷ್ಯವೇತನಕ್ಕೆ ಮುದ್ದೇಬಿಹಾಳದ ಗೌರಿ ಬಗಲಿ ಆಯ್ಕೆ
Team Udayavani, Oct 14, 2021, 11:32 AM IST
ಮುದ್ದೇಬಿಹಾಳ : ಜಪಾನ್ ಪ್ರಧಾನ ಮಂತ್ರಿಗಳ ಪ್ರತಿಷ್ಠಿತ ಏಷಿಯಾ ಕಾಕೇಹಾಸಿ ಶಿಷ್ಯವೇತನಕ್ಕೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಎಂಜಿವಿಸಿ ವಿದ್ಯಾಪ್ರಸಾರಕ ಟ್ರಸ್ಟನ ಧರ್ಮದರ್ಶಿಯಾಗಿರುವ ಇಂಡಿಯ ಸಂಕೇತ ಬಗಲಿ ಮತ್ತು ಜಯಲಕ್ಷ್ಮೀ ಬಗಲಿ ಅವರ ಪುತ್ರಿ ಗೌರಿ ಬಗಲಿ ಆಯ್ಕೆಯಾಗಿದ್ದಾರೆ.
ಗೌರಿ ಸದ್ಯ ಮಹಾರಾಷ್ಟ್ರದ ಕೊಲ್ಹಾಪೂರದ ಸಂಜಯ ಘೋಡಾವತ್ ಶಾಲೆಯಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಈ ಶಿಷ್ಯವೇತನಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ಲಿಖಿತ ಹಾಗೂ ಮೌಖಿಕ ಪರೀಕ್ಷೆ ನಡಸಲಾಗುತ್ತದೆ. ಅದರಲ್ಲಿ ಸಾಧನೆ, ಪ್ರತಿಭೆ ಆಧಾರದಲ್ಲಿ ಆಯ್ಕೆಯಾದ 21 ವಿದ್ಯಾರ್ಥಿಗಳಲ್ಲಿ ಗೌರಿಯೂ ಕೂಡ ಒಬ್ಬರಾಗಿದ್ದಾರೆ.
ಈ ಮೂಲಕ ಗೌರಿ ಕರ್ನಾಟಕ ರಾಜ್ಯವನ್ನು ಇಡೀ ದೇಶದಲ್ಲೇ ಹೆಸರಾಗುವಂತೆ ಮಾಡಿದ್ದು ಹೆಮ್ಮೆಯ ಸಂಗತಿ ಎನ್ನಿಸಿಕೊಂಡಿದೆ.
ವಿದ್ಯಾರ್ಥಿನಿಯ ಸಾಧನೆಗೆ ಅವರ ಅಜ್ಜ ಮುದ್ದೇಬಿಹಾಳ ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಅಧ್ಯಕ್ಷ ಸತೀಶ ಜಿಗಜಿನ್ನಿ, ಕಾರ್ಯದರ್ಶಿ ಅಶೋಕ ತಡಸದ, ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಸ್.ಎನ್.ಪೊಲೇಶಿ, ಪಪೂ ಕಾಲೇಜಿನ ಪ್ರಾಚಾರ್ಯ ಪ್ರೊ.ಐ.ಎಸ್.ತಳವಾರ, ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಕೆ.ಕುಲಕರ್ಣಿ ಸೇರಿ ಅನೇಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್