ಗ್ರಾಪಂ ವಾರ್ಡ್‌ ಬದಲಾವಣೆಯಲ್ಲಿ ಲೋಪವಾಗಿದ್ದು ಖಚಿತ: ಎಸಿ

ಚುನಾವಣೆಯಲ್ಲಿ 3 ಮತ್ತು 1 ಎಂದು ಅಂತರ್‌ ಬದಲಾವಣೆ ಮಾಡಿ ಮೋಸ ಮಾಡಲಾಗಿದೆ

Team Udayavani, Jan 23, 2021, 5:33 PM IST

ಗ್ರಾಪಂ ವಾರ್ಡ್‌ ಬದಲಾವಣೆಯಲ್ಲಿ ಲೋಪವಾಗಿದ್ದು ಖಚಿತ: ಎಸಿ

ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಪಂನ 1 ಮತ್ತು 3ನೇ ವಾರ್ಡ್‌ ಕ್ರಮ ಸಂಖ್ಯೆ ಬದಲಾವಣೆ ಕುರಿತು ಆ ವಾರ್ಡ್‌ಗಳ ಜನರು ಸಲ್ಲಿಸಿದ್ದ ಮನವಿ ಕುರಿತು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು ಲೋಪ ಆಗಿರುವುದು ಖಚಿತಪಟ್ಟಿದೆ ಎಂದು ವಿಜಯಪುರ ಉಪ ವಿಭಾಗಾಧಿಕಾರಿ ರಾಮಚಂದ್ರ ಗಡಾದೆ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸೂಚನೆ ಮೇರೆಗೆ ಗ್ರಾಮಕ್ಕೆ ತೆರಳಿ ಎರಡೂ ವಾಡ್‌ ìಗಳಿಗೆ ಭೇಟಿ ನೀಡಿ, ಮತದಾರರ ಪಟ್ಟಿಗಳನ್ನೂ
ಪರಿಶೀಲಿಸಿದ ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಬಿಎಲ್‌ಒ, ಮುದ್ದೇಬಿಹಾಳ ತಹಶೀಲ್ದಾರ್‌ ಕಚೇರಿಯ ಚುನಾವಣಾ ಶಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಇರುವುದು ಗೊತ್ತಾಗಿದೆ. ಈ ಕುರಿತು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಿದ್ದು ಅವರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

2015ರ ಗ್ರಾಪಂ ಚುನಾವಣೆಯಲ್ಲಿ ಇದ್ದ ಒಂದನೇ ವಾರ್ಡ್‌ನ್ನು 2020ರ ಗ್ರಾಪಂ ಚುನಾವಣೆಯಲ್ಲಿ 3ನೇ ವಾರ್ಡ್‌ ಎಂದು, ಆಗಿನ 3ನೇ ವಾರ್ಡ್‌ನ್ನು 1ನೇ ವಾರ್ಡ್‌ ಎಂದು ಬದಲಾಯಿಸಿ 2015ರಲ್ಲಿ ಬಂದಿದ್ದ ಮೀಸಲಾತಿಗಳೇ ಪುನರಾವರ್ತನೆಯಾಗುವಂತೆ ಮಾಡಿದ್ದಾರೆ. ಇದರಲ್ಲಿ ನಿರ್ಲಕ್ಷ್ಯ, ಬೇಜವಾಬ್ದಾರಿ, ಕರ್ತವ್ಯಲೋಪ ಸಾಬೀತಾಗಿದೆ ಎಂದರು.

ತಪ್ಪಾಗಿದ್ದರೆ ಕ್ರಮ-ಡಿಸಿ: ಬಿದರಕುಂದಿ ಗ್ರಾಮದ 1, 3ನೇ ವಾರ್ಡ್‌ ಸಮಸ್ಯೆ ಕುರಿತು ಶುಕ್ರವಾರ ಇಲ್ಲಿನ ಅಂಬೇಡ್ಕರ್‌ ಭವನಕ್ಕೆ ಗ್ರಾಪಂಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರಿಗೆ ಈ ಬಗ್ಗೆ ತಿಳಿಸುತ್ತ, ಆ ವಾರ್ಡ್‌ನವರು ಕೊಟ್ಟ ಅರ್ಜಿಯನ್ನು ಪರಿಶೀಲಿಸಿದ್ದೇನೆ. 2015ರ ಗ್ರಾಪಂ ಚುನಾವಣೆಯಲ್ಲಿದ್ದ 1 ಮತ್ತು 3ನೇ ವಾರ್ಡ್‌ ಕ್ರಮ ಸಂಖ್ಯೆಗಳನ್ನು 2020ನೇ ಗ್ರಾಪಂ
ಚುನಾವಣೆಯಲ್ಲಿ 3 ಮತ್ತು 1 ಎಂದು ಅಂತರ್‌ ಬದಲಾವಣೆ ಮಾಡಿ ಮೋಸ ಮಾಡಲಾಗಿದೆ.

2015ರಲ್ಲಿ ಬಂದಿರುವ ವಾರ್ಡ್‌ವಾರು ಮೀಸಲಾತಿಗಳನ್ನೇ 2020ರಲ್ಲೂ ಪುನರಾವರ್ತನೆಯಾಗುವಂತೆ ನೋಡಿಕೊಳ್ಳಲಾಗಿದೆ ಎಂದು ಅರ್ಜಿದಾರರು ಆರೋಪಿಸಿ ಅವುಗಳಿಗೆ ನಡೆಸಿದ ಚುನಾವಣೆ ರದ್ದುಪಡಿಸಿ ಮರು  ಚುನಾವಣೆಗೆ ಆಗ್ರಹಿಸಿದ್ದಾರೆ.

ಇದನ್ನು ಸ್ಥಳ ತನಿಖೆ ನಡೆಸಿ, ಆಯಾ ವಾರ್ಡ್‌ಗಳ ಜನರೊಂದಿಗೆ ಅಹವಾಲು ಆಲಿಸಲು ಉಪ ವಿಭಾಗಾಧಿಕಾರಿಗೆ ಸೂಚಿಸಿದ್ದೆ. ಅದರಂತೆ ಅವರು ವಿಚಾರಣೆ
ನಡೆಸಿದ್ದಾರೆ. ಅವರು ಲಭ್ಯ ದಾಖಲೆ ಮತ್ತು ವಾರ್ಡ್‌ ಜನರ ಹೇಳಿಕೆ ಪಡೆದುಕೊಂಡು ವರದಿ ಸಲ್ಲಿಸುತ್ತಾರೆ. ವರದಿ ಬಂದ ಮೇಲೆ ಅದರಲ್ಲಿನ ಅಂಶಗಳನ್ನು ಆಧರಿಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಎಸಿ ಭೇಟಿ-ವಿಚಾರಣೆ: ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಶುಕ್ರವಾರ ಮೀಸಲಾತಿ ನಿಗದಿ ಸಭೆಯಲ್ಲಿ  ಪಾಲ್ಗೊಳ್ಳಬೇಕಿದ್ದ ಉಪ ವಿಭಾಗಾಧಿಕಾರಿಯವರು
ಅರ್ಜಿದಾರರೊಂದಿಗೆ ಗ್ರಾಮಕ್ಕೆ ತೆರಳಿ ವಿಚಾರಣೆ ನಡೆಸಿದರು. ಅರ್ಜಿದಾರರ ಬಳಿ ಇದ್ದ ದಾಖಲೆ ಪರಿಶೀಲಿಸಿದರು. ಅರ್ಜಿದಾರರಾದ ಲಕ್ಷ್ಮಣ ವಡ್ಡರ, ಗಿರೀಶ ಬಿಜೂjರ ವಕೀಲರು, ಕೆ.ಕೆ. ಬನ್ನೆಟ್ಟಿ, ಚನಮಲ್ಲಪ್ಪ ಕಡೂರ, ಪಿಡಿಒ, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.