ಕ್ಷೇತ್ರಕ್ಕೆ ಕೇಳಿದಷ್ಟು ಅನುದಾನ ನೀಡಿದ್ದಾರೆ ಸಿಎಂ
Team Udayavani, Nov 11, 2017, 4:35 PM IST
ಇಂಡಿ: ಅಭಿವೃದ್ಧಿಯಿಂದ ವಂಚಿತವಾದ ಇಂಡಿ ಮತಕ್ಷೇತ್ರದ ಅಭಿವೃದ್ಧಿಗೆ ನಾನು ಕೇಳಿದಷ್ಟು ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಅದರಿಂದಲೇ ಇಷ್ಟು ಪ್ರಮಾಣದಲ್ಲಿ ಮತಕ್ಷೇತ್ರ ಅಭಿವೃದ್ಧಿಯಾಗಲು ಸಾಧ್ಯವಾಯಿತು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಪೊಲೀಸ್ ಪರೇಡ್ ಮೈದಾನದಲ್ಲಿ ಇಂಡಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಲೋಕಾರ್ಪಣೆ, ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಅವರು ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅದರಿಂದ ಇಂದು ಈ ಭಾಗದ 31 ಹಳ್ಳಿಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಈಗ ಭುಂಯ್ನಾರ ಯೋಜನೆಯ ಮೂಲಕ 40 ಹಳ್ಳಿಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಈಗ ಆ ಯೋಜನೆಗೆ ಅನುಮತಿ ದೊರೆತಿದೆ ಎಂದರು.
ಇಂಡಿ ಭಾಗದ ನೀರಾವರಿಗೆ ಇಂಡಿ ಬ್ರ್ಯಾಂಚ್ ಕೆನಾಲ್, ಗುತ್ತಿ ಬಸವಣ್ಣ ಯೋಜನೆ, ಚಿಮ್ಮಲಗಿ ಏತ ನೀರಾವರಿ
ಯೋಜನೆ, ಮುಳವಾಡ ಏತ ನೀರಾವರಿ ಯೋಜನೆಗಳ ಮೂಲಕ ತಾಲೂಕಿನ ಬಹುತೇಕ ಹಳ್ಳಿಗಳಿಗೆ ನೀರಾವರಿ
ಮಾಡಲಾಗುತ್ತಿದೆ ಎಂದರು. ಪಟ್ಟಣದಲ್ಲಿನ ಬಡವರಿಗೆ ಅನುಕೂಲ ಕಲ್ಪಿಸಲು ಇಂದಿರಾ ಕ್ಯಾಂಟೀನ್ ಕಾರ್ಯಾರಂಭ
ಮಾಡಲಾಗುತ್ತಿದೆ. ಅದರಲ್ಲಿ ಕೇವಲ 10 ರೂ.ಗೆ ಊಟ, 5 ರೂ.ಗೆ ಬೆಳಗಿನ ಉಪಹಾರ ಸಿಗಲಿದೆ ಎಂದ ಅವರು,
2018ರ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ