ಜಲಸಾಕ್ಷರ ಯಾತ್ರೆಗೆ ಭವ್ಯ ಸ್ವಾಗತ


Team Udayavani, Aug 3, 2017, 10:11 AM IST

03-BJP-9.jpg

ವಿಜಯಪುರ: ಬರ ಮುಕ್ತ ಭಾರತ ನಿರ್ಮಾಣಕ್ಕಾಗಿ ಜಲ ಸಾಕ್ಷರತೆಗಾಗಿ ರಾಷ್ಟ್ರೀಯ ಜಲ ಬಿರಾದರಿ ಸಂಘಟನೆಯಿಂದ ಗೋವಾ-ಗುವಾಹತಿ ಜಲಸಾಕ್ಷರತೆ ಯಾತ್ರೆ ಬುಧವಾರ ವಿಜಯಪುರಕ್ಕೆ ಆಗಮಿಸಿದಾಗ ಅದ್ಧೂರಿ ಸ್ವಾಗತ ನೀಡಲಾಯಿತು.

ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತಕ್ಕೆ ಆಗಮಿಸಿದ ಜಲಯಾತ್ರೆ ಹಾಗೂ ಜಲ ಸಾಕ್ಷರತಾ ಯಾತ್ರಾರ್ಥಿಗಳು ಜಲ ಸಂರಕ್ಷಣೆ ಮಹತ್ವ ಹೇಳುವ ಬರ ಮುಕ್ತ ಭಾರತ ನಿರ್ಮಾಣದ ಜಾಗೃತಿ ಯಾತ್ರೆಯ ಕಾರ್ಯ ಚಟುವಟಿಕೆ ತಿಳಿಸುವ ಕರಪತ್ರ ವಿತರಿಸಿದರು. ಜಲ ಸಾಕ್ಷರತಾ ಯಾತ್ರಾರ್ಥಿಗಳು ಜಲ ಕೀ ರಕ್ಷಾ ಪ್ರಕೃತಿ ಕೀ ರಕ್ಷಾ…’ ಜಲ ಹೈ ತೋ ಬಲ ಹೈ… , “ಜಲ ಹೀ ಜೀವನ ಹೈ…, “ಜಲ ಹೀ ಜೀವನ ಹೈ…’, ಎಂಬಿತ್ಯಾದಿ ಘೋಷಣೆ ಕೂಗಿ ಸ್ವಾಗತಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸ್ವಾಗತಿಸಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಿದರು. ರೋಟರಿ ಕ್ಲಬ್‌ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಲ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು. 

ಈ ಯಾತ್ರೆಯು ಸೊಲ್ಲಾಪುರ ಮಾರ್ಗವಾಗಿ ಮಹಾರಾಷ್ಟ್ರ, ನಂತರ ಜಾರ್ಖಂಡ, ಛತ್ತಿಸಗಡ, ಓರಿಸ್ಸಾ, ಪಶ್ಚಿಮ ಬಂಗಾಳ ರಾಜ್ಯಗಳ ಮೂಲಕ ಹಾಯ್ದು ಕೊನೆಗೆ ಆಸ್ಸಾಂ ರಾಜ್ಯದ ರಾಜಧಾನಿ ಗುವಾಹತಿಗೆ ತಲುಪಲಿದೆ ಎಂದು ಯಾತ್ರೆ ನೇತೃತ್ವ ವಹಿಸಿರುವ ಕೃಷಿ ತಜ್ಞ ಡಾ| ರಾಜೇಂದ್ರ ಪೋದ್ದಾರ ಹೇಳಿದರು.  

ಬರ ಮುಕ್ತ ಭಾರತ ನಿರ್ಮಾಣಕ್ಕಾಗಿ ಜಲಗಾಂಧಿ ಡಾ| ರಾಜೇಂದ್ರಸಿಂಗ್‌ ನೇತೃತ್ವದಲ್ಲಿ ಜಲ ಸಾಕ್ಷರತೆ ಯಾತ್ರೆ ಕೈಗೊಳ್ಳಲಾಗಿದೆ. ಕಳೆದ ಮೇ ತಿಂಗಳಿಂದ ಮೊದಲ ಹಂತವಾಗಿ ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ, ಎರಡನೇ ಹಂತದ ಯಾತ್ರೆ ಗೋವಾದಿಂದ ಗುವಾಹತಿ ಯಾತ್ರೆಯೂ ಪ್ರಾರಂಭಗೊಂಡಿದೆ. ಈ ಎಲ್ಲ ಯಾತ್ರೆಗಳ ಸಮಾರೋಪ ವಿಜಯಪುರದಲ್ಲಿ ನಡೆಯಲಿದೆ. ರಾಷ್ಟ್ರೀಯ ನಾಯಕ ಅಣ್ಣಾ ಹಜಾರೆ, ಜಲತಜ್ಞ ಡಾ| ರಾಜೇಂದ್ರಸಿಂಗ್‌ ಸೇರಿದಂತೆ ಜಲ ಸಂರಕ್ಷಣೆ ಪರಿಣಿತಿ ಹೊದಿರುವ ದೇಶದ ಖ್ಯಾತನಾಮರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಡಾ| ರಾಜೇಂದ್ರ ಪೋದ್ದಾರ ಹೇಳಿದರು. 

ವಿಜಯಪುರ ಜಲ ಬಿರಾದಾರಿ ಅಧ್ಯಕ್ಷ ಪೀಟರ್‌ ಅಲೆಕ್ಸಾಂಡರ್‌, ಡಾ| ರಿಯಾಜ್‌ ಫಾರೂಕಿ, ವಿಶ್ವನಾಥ ಭಾವಿ, ಲಕ್ಷ್ಮೀ ದೇಸಾಯಿ, ಎಂ.ಕೆ. ಮನಗೊಂಡ, ಪ್ರಕಾಶ ಕುಂಬಾರ, ಟಿ.ಎಸ್‌. ಪಠಾಣ, ಮುನ್ನಾ ಭಕ್ಷಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.