ಸಿಂದಗಿ : ಶೀಘ್ರದಲ್ಲೇ ರೈತರ ಜಮೀನಿಗೆ ಗುತ್ತಿಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆ ನೀರು
Team Udayavani, Jul 24, 2022, 6:36 PM IST
ಸಿಂದಗಿ : ರೈತರು ನನ್ನ ಜೀವಾಳ, ಅವರ ಬದುಕು ನಮ್ಮ ಬದುಕಾಗಿದೆ, ಅವರ ಕಷ್ಟವೇ ನಮ್ಮ ಕಷ್ಟವಾಗಿದೆ ಶಿಘ್ರದಲ್ಲಿ ಗುತ್ತಿಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಯ ನೀರು ಆ. 15ರೊಳಗಾಗಿ ರೈತರ ಜಮೀನುಗಳಿಗೆ ಹರಿಸಲಾಗುವುದು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ರವಿವಾರ ಕೆಂಬಾವಿಯಲ್ಲಿನ ಗುತ್ತಿಬಸವಣ್ಣ ಏತ ನೀರಾವರಿ ಯೋಜನೆಯ ಪಂಪಹೌಸ್ಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಮೋಟರ್ ಅಳವಡಿಕೆ ಸೇರಿದಂತೆ ಹೂಳೆತ್ತುವ ಕಾಮಗಾರಿಯನ್ನು ವಿಕ್ಷಣೆ ಮಾಡಿ ಅವರು ಮಾತನಾಡಿದರು.
ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗೆ ನೀರು ಹರಿಸುವ ಪಂಪ್ ಹೌಸಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಪಂಪ್ ರಿಪೇರಿ ಸೇರಿದಂತೆ ಇನ್ನುಳಿದ ಕಾಮಗಾರಿಯನ್ನು ವಿಕ್ಷಣೆ ಮಾಡಲಾಗಿದೆ. ಆ.15 ರೊಳಗಾಗಿ ಗುತ್ತಿ ಬಸವಣ್ಣ ಯೋಜನೆಯ ಕಾಲುವೆಯ ಮೂಲಕ ರೈತರ ಜಮೀನುಗಳಿಗೆ ನೀರು ಹರಿಲಾಗುವುದು. ಯಾವುದೋ, ಯಾರದೋ ಉಡಾಫೆ ಮಾತುಗಳಿಗೆ ಕಿವಿಗೊಡಬೇಡಿ ಎಂದು ರೈತರಿಗೆ ಮನವಿ ಮಾಡಿಕೊಂಡರು.
ಗುತ್ತಿಬಸವಣ್ಣ ಏತ ನೀರಾವರಿ ಯೋಜನೆ ವಿಷಯದಲ್ಲಿ ವಿರೋಧ ಪಕ್ಷದ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಇಲ್ಲ ಸಲ್ಲದ ಹೇಳಿಕೆ ನಿಡುತ್ತಿದ್ದಾರೆ. ರೈತರಿಗೆ ತಪ್ಪು ಮಾಹಿತಿ ನೀಡುವ ಮೂಲಕ ಅವರ ದಾರಿ ತಪ್ಪಿಸುತ್ತಿದ್ದಾರೆ. ಅಂಥವರ ಮಾತುಗಳಿಗೆ ರೈತರು ಕಿವಿಗೊಡಬಾರದು. ನೀವು ನನ್ನ ಮೇಲೆ ವಿಶ್ವಾಸವಿಟ್ಟು ಚುನಾಯಿಸಿದ್ದಿರಿ. ನಿಮ್ಮ ವಿಶ್ವಾಸ ಕಳೆದುಕೊಳ್ಳುವುದಿಲ್ಲ. ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆ ನೀರು ರೈತರ ಜಮೀನುಗಳಿಗೆ ಹರಿಸುವ ಕೆಲಸ ಪ್ರಾಮಾಣಿಕವಾಗಿ ಮಾಡುತ್ತೇನೆ. ನನ್ನ ಮೇಲೆ ನಂಬಿಕೆಯಿಡಿ ಎಂದು ರೈತರಲ್ಲಿ ಮನವಿ ಮಾಡಿಕೊಂಡರು.
ಇದನ್ನೂ ಓದಿ : ಪಾಕಿಸ್ಥಾನ vs ಶ್ರೀಲಂಕಾ ದ್ವಿತೀಯ ಟೆಸ್ಟ್: ಮೊದಲ ದಿನ ಲಂಕಾ ಮೇಲುಗೈ
ಪಂಪ್ ಹೌಸ್ನಲ್ಲಿ ಮೋಟಾರ್ ಗಳ ಜೋಡಣೆ ಕಾರ್ಯ ವಿಕ್ಷಣೆ ಮಾಡಿದರು. ಅವುಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಕಾಲುವೆಯಲ್ಲಿ ಹುದುಗಿರುವ ಹುಳನ್ನು ತೆಗೆಯುತ್ತಿರುವ ಕಾಮಗಾರಿಯನ್ನು ವಿಕ್ಷಣೆ ಮಾಡಿದರು. ನಂತರ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಆ.೧೫ ರೊಳಗೆ ಕಾಲುವೆಯ ನೀರು ರೈತರ ಜಮೀನುಗಳಲ್ಲಿ ಹರಿಯಬೇಕು ಎಂದು ಹೇಳಿದರು.
ಬಿಜೆಪಿ ಮಂಡಳ ಅಧ್ಯಕ್ಷ ಈರಣ್ಣ ರಾವೂರ, ಪುರಸಭೆ ಸದಸ್ಯ ಭಾಷಾಸಾಬ ತಾಂಬೋಳಿ, ರಾಜಣ್ಣ ನಾರಾಯಣಕರ, ಬಿಜೆಪಿ ಮುಖಂಡ ಸಂತೋಷ ಪಾಟೀಲ, ಶ್ರೀಶೈಲ ಚಳ್ಳಗಿ, ಗೌಡಣ್ಣ ಆಲಮೇಲ, ರವಿ ನಾಯ್ಕೋಡಿ, ಸುದರ್ಶನ ಜಿಂಗಾಣಿ, ಗೋಲ್ಲಾಳಪ್ಪ ನಾಗಣಸೂರ, ರಾಘವೇಂದ್ರ ಕುಲಕರ್ಣಿ, ಸೈಪೋನಸಾಬ ಕೋರವಾರ, ಬಾಗಣ್ಣ ಕೋಟೆಗೋಳ, ಸುದರ್ಶನ ಜಿಂಗಾಣಿ, ಸಿದ್ರಾಯ ಪೂಜಾರಿ, ಹುಸೇನಿ ಅಡಾಡಿ, ಅಮೋಗಿ ಹಿರೇಕುರಬರ, ಮಾರಲಬಾವಿ ಸೇರಿದಂತೆ ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ