ವಿಜಯಪುರ: ಭೂಕಂಪದ ಆತಂಕ ಬೇಡವೆಂದ ಸಚಿವ ಹಾಲಪ್ಪ ಆಚಾರ್
Team Udayavani, Oct 18, 2021, 1:05 PM IST
ವಿಜಯಪುರ: ವಿಜಯಪುರ, ಕಲಬುರಗಿ ಸೇರಿದಂತೆ ಈ ಭಾಗದಲ್ಲಿ ಪದೇ ಪದೇ ಸಂಭವಿಸುತ್ತಿರುವ ಲಘು ಭೂಕಂಪ ಹಾನಿ ಮಾಡುವುದೇನಲ್ಲ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಗಣಿ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಜನರಿಗೆ ಅಭಯ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಭೂಕಂಪದ ಕುರಿತು ಸಮಜಾಯಿಶಿ ನೀಡಿದ ಸಚಿವ ಆಚಾರ್, ಪದೇ ಪದೇ ಭೂ ಕಂಪನ ವಿಚಾರ ಸರ್ಕಾರದ ಗಮನಕ್ಕಿದೆ. ತಜ್ಞರ ಅಭಿಪ್ರಾಯದಂತೆ ಹೆಚ್ಚು ಮಳೆ ಆಗಿರುವ ಕಾರಣ ಈ ಪರಿಸರದ ಭೂಮಿಯ ಆಳದಲ್ಲಿ ನೀರಿನ ಚಟುವಟಿಕೆ ಹೆಚ್ಚಾಗಿದೆ. ಹೀಗಾಗಿ ಜನತೆ ಆತಂಕ ಪಡುವ ಅಗತ್ಯ ಇಲ್ಲ ಎಂದರು.
ಇದನ್ನೂ ಓದಿ:ಕಳೆದ ಬಾರಿ ಎಂ.ಸಿ.ಮನಗೂಳಿ ಗೆದ್ದಿದ್ದು ಕೊನೆಯ ಚುನಾವಣೆಯೆಂಬ ಅನುಕಂಪದಿಂದ: ಹಾಲಪ್ಪ ಆಚಾರ್
ವಿಜಯಪುರದಲ್ಲಿ ಅಪ್ರಾಪ್ತೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸರ್ಕಾರ ಗಂಭೀರವಾಗಿದೆ. ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ನಾಲ್ಕು ಅತ್ಯಾಚಾರ ಪ್ರಕರಣಗಳು ಆಗಿವೆ. ಕಾನೂನು ಬಾಹಿರ ಚಟುವಟಿಕೆ ಸಹಿಸಲ್ಲ. ಜನರಲ್ಲಿ ಜಾಗೃತಿ, ಕಾನೂನಿನ ಅರಿವು ಮೂಡಿಸುವ ಕೆಲಸ ಮಾಡುವುದಾಗಿ ಹೇಳಿದರು.