ಹಲಸಂಗಿಯಲ್ಲಿ ನಾಡಹಬ್ಬ ಆಚರಿಸಲು ನಿರ್ಧಾರ
Team Udayavani, Jul 7, 2020, 12:12 PM IST
ವಿಜಯಪುರ: ಹಲಸಂಗಿ ಗೆಳೆಯರ ಬಳಗ ಪ್ರತಿಷ್ಠಾನದ 2020-21ನೇ ಸಾಲಿನ ಕ್ರಿಯಾ ಯೋಜನೆ ರೂಪಿಸಬೇಕು. ಜಿಲ್ಲಾಡಳಿತದ ಸಹಯೋಗದಲ್ಲಿ ಹಲಸಂಗಿ ಗ್ರಾಮದಲ್ಲಿ ನಾಡಹಬ್ಬ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಹಲಸಂಗಿ ಗೆಳೆಯರ ಬಳಗ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಹಲಸಂಗಿ ಗೆಳೆಯರ ಬಳಗ ಪ್ರತಿಷ್ಠಾನದಿಂದ ನಾಡಿನ ಶ್ರೇಷ್ಠ ಕವಿಗಳ ಕುರಿತು ಪ್ರಚಾರ ಮಾಡಲು ಹಾಗೂ ಸಾಹಿತ್ಯದ ಆಸಕ್ತಿಯನ್ನು ಜನರಲ್ಲಿ ಮೂಡಿಸುವಂತಾಗಬೇಕು. ಈ ನಿಟ್ಟಿನಲ್ಲಿ ಒಂದು ವ್ಯವಸ್ಥಿತ ಕ್ರಿಯಾ ಯೋಜನೆ ರೂಪಿಸುವಂತೆ ಅವರು ಸಂಬಂಧಿತ ಸದಸ್ಯ ಬಳಗಕ್ಕೆ ಸೂಚಿಸಿದರು. ಪ್ರತಿ ವರ್ಷ ಹಲಸಂಗಿ ಗೆಳೆಯರ ಬಳಗದಿಂದ ಮಧುರ ಚನ್ನರ ಹುಟ್ಟೂರು ಹಲಸಂಗಿ ಗ್ರಾಮದಲ್ಲಿ ಸಾಹಿತ್ಯ, ಸಂಗೀತ ಹಾಗೂ ಮಧುರ ಚನ್ನರ ವಿಚಾರಗಳನ್ನು ಇಂದಿನ ಪೀಳಿಗೆಗೆ ಮನವರಿಕೆ ಮಾಡಲು 10 ದಿನಗಳ ಕಾಲ ಜಿಲ್ಲಾಡಳಿತದ ಸಹಯೋಗದಲ್ಲಿ ನಾಡಹಬ್ಬ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ, ಡಾ| ಓಂಕಾರ ಕಾಕಡೆ, ಎಸ್.ಕೆ. ಕೊಪ್ಪಾ, ಎಂ.ಎಸ್. ಮಧಬಾವಿ, ಚೆನ್ನಪ್ಪ ಕಟ್ಟಿ, ಆರ್. ಸುನಂದಮ್ಮ, ಎ.ಎ.ಪಾರ್ಸಿ, ಡಿ.ಬಿ. ಭಜಂತ್ರಿ, ಆರ್.ಎನ್. ಸಿಂಪಿ, ಸೋಮಶೇಖರ ವಾಲಿ, ಜಗದೀಶ ಗಲಗಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ