ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು : ಜಮೀನಿಗೆ ನೀರು ಹಾಯಿಸಲು ಹೋದ ವೇಳೆ ಘಟನೆ
Team Udayavani, Mar 24, 2022, 4:31 PM IST
ಹರಪನಹಳ್ಳಿ : ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಹೊಳಲು ಜಂಬಪ್ಪ(48) ಮೃತ ದುರ್ದೈವಿ ತಮ್ಮ ಹೊಲದಲ್ಲಿನ ಈರುಳ್ಳಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಸಂದರ್ಭದಲ್ಲಿ ಮೋಟಾರ್ ಆನ್ ಮಾಡುವ ವೇಳೆ ಮೋಟಾರ್ ಗೆ ಸಂಪರ್ಕ ಕಲ್ಪಿಸಿರುವ ವಿದ್ಯುತ್ ತಂತಿ ತಗುಲಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಮೃತರಿಗೆ ಪತ್ನಿ ಇಬ್ಬರೂ ಪುತ್ರರು ಸೇರಿ ಅಪಾರ ಬಂಧು ಬಳಗ ಅಗಲಿದ್ದಾರೆ.
ಮೃತ ಹೊಳಲು ಜಂಬಪ್ಪ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು, ಶಾಸಕ ಕರುಣಾಕರ ರೆಡ್ಡಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ.
ಈ ಕುರಿತು ಹಲುವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ (ಶುಕ್ರವಾರ) ಸ್ವ-ಗ್ರಾಮ ಯಡಿಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸುವೆ.
ಇದನ್ನೂ ಓದಿ : ಡ್ರೈವರ್ ದಿನಸಿ ಕದ್ದಿದ್ದಾನೆ ಎಂದು ಉಬರ್ ಗೆ ದೂರು ನೀಡಿದ ನಟಿ ಸ್ವರಾ ಭಾಸ್ಕರ್!
ಸಂತಾಪ…
ಶಾಸಕ ಕರುಣಾಕರ ರೆಡ್ಡಿ, ಬಿಜೆಪಿ ತಾಲೂಕು ಅಧ್ಯಕ್ಷ ಸತ್ತೂರು ಹಾಲೇಶ್, ಯಡಿಹಳ್ಳಿ ಶೇಖಣ್ಣ, ಶಿರಗಾನಳ್ಳಿ ವಿಶ್ವನಾಥ್, ಚಿರಸ್ಥಹಳ್ಳಿ ಬಸವರಾಜಪ್ಪ,ರಾಮಪ್ಪ, ಸೇರಿ ಅನೇಕ ಮುಖಂಡರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA